ಸಾಂದರ್ಭಿಕ ಚಿತ್ರ 
ವಿದೇಶ

2022 ರಿಂದ ಪಾಕ್ ಜೈಲಿನಲ್ಲಿ ಬಂಧಿಯಾಗಿದ್ದ ಭಾರತೀಯ ಮೀನುಗಾರ ಆತ್ಮಹತ್ಯೆ

ಅಕ್ರಮವಾಗಿ ಪಾಕಿಸ್ತಾನದ ಜಲಗಡಿ ಪ್ರವೇಶಿಸಿದ ಆರೋಪದ ಮೇಲೆ ಫೆಬ್ರವರಿ 2022 ರಲ್ಲಿ ಬಂಧಿಸಲ್ಪಟ್ಟ ಆನಂದ್ ಅವರು ಜೈಲಿನ ಶೌಚಾಲಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಕರಾಚಿ: ಕರಾಚಿಯ ಮಾಲಿರ್ ಜೈಲಿನಲ್ಲಿ ಮಂಗಳವಾರ ಭಾರತೀಯ ಮೀನುಗಾರ ಗೌರವ್ ರಾಮ್ ಆನಂದ್(52) ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಡಾನ್.ಕಾಮ್ ವರದಿ ಮಾಡಿದೆ.

ಅಕ್ರಮವಾಗಿ ಪಾಕಿಸ್ತಾನದ ಜಲಗಡಿ ಪ್ರವೇಶಿಸಿದ ಆರೋಪದ ಮೇಲೆ ಫೆಬ್ರವರಿ 2022 ರಲ್ಲಿ ಬಂಧಿಸಲ್ಪಟ್ಟ ಆನಂದ್ ಅವರು ಜೈಲಿನ ಶೌಚಾಲಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಜೈಲು ಅಧಿಕಾರಿಗಳು ತಿಳಿಸಿರುವುದಾಗಿ ಡಾನ್ ವರದಿ ಮಾಡಿದೆ.

ಮಾಲಿರ್ ಜೈಲಿನ ಸೂಪರಿಂಟೆಂಡೆಂಟ್ ಅರ್ಷದ್ ಹುಸೇನ್ ಅವರು ಈ ಘಟನೆಯನ್ನು ದೃಢಪಡಿಸಿದ್ದು, ಕೈದಿ ಶೌಚಾಲಯಕ್ಕೆ ಹೋಗಿದ್ದ ವೇಳೆ ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.

ಜೈಲಿನ ಕರ್ತವ್ಯ ನಿರತ ವೈದ್ಯರು ಬೆಳಗಿನ ಜಾವ 2:20 ಕ್ಕೆ ಆನಂದ್ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ. ಮ್ಯಾಜಿಸ್ಟ್ರೇಟ್, ಮುಂದಿನ ಕಾನೂನು ಕ್ರಮಗಳು ಮುಗಿಯುವವರೆಗೆ ಅವರ ದೇಹವನ್ನು ಸೊಹ್ರಾಬ್ ಗೋತ್‌ನಲ್ಲಿರುವ ಈಧಿ ಫೌಂಡೇಶನ್‌ನ ಕೋಲ್ಡ್ ಸ್ಟೋರೇಜ್ ಸ್ಥಳಾಂತರಿಸಲು ಆದೇಶಿಸಿದ್ದಾರೆ.

ಸರ್ಕಾರಿ ಮೂಲಗಳ ಪ್ರಕಾರ, ಡಿಸೆಂಬರ್ 31, 2024 ರ ಹೊತ್ತಿಗೆ, 144 ಭಾರತೀಯ ಮೀನುಗಾರರು ಮತ್ತು 1,173 ದೋಣಿಗಳು - ಮುಖ್ಯವಾಗಿ ಗುಜರಾತ್‌ನವರು - ಪಾಕಿಸ್ತಾನದ ವಶದಲ್ಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಿರಿಯ ನಾಯಕರೊಂದಿಗಿನ ಚರ್ಚೆ ಬಳಿಕ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ: ದೆಹಲಿಗೆ ತೆರಳುವ ಮುನ್ನ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ

ತಮಿಳುನಾಡು-ಆಂಧ್ರ ತೀರಕ್ಕೆ ದಿತ್ವಾ ಚಂಡಮಾರುತ: ಬೆಂಗಳೂರು ಸೇರಿ ಕರ್ನಾಟಕದಲ್ಲಿ 4 ದಿನ ಭಾರೀ ಮಳೆ ಸಾಧ್ಯತೆ; IMD ಎಚ್ಚರಿಕೆ

ಗಲ್ಲು ಶಿಕ್ಷೆ ಬೆನ್ನಲ್ಲೇ ಬಾಂಗ್ಲಾದೇಶ ಪದಚ್ಯುತ ಪ್ರಧಾನಿ ಶೇಖ್ ಹಸೀನಾಗೆ 21 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್

ರಾಜಕೀಯ ಅಂದ್ರೆ ಅದು.... ಸಿಎಂ ಕುರ್ಚಿ ಗುದ್ದಾಟದ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಮಾಜಿ ಸಂಸದೆ ರಮ್ಯಾ

ಡಿಕೆಶಿ ಪರ ಒಕ್ಕಲಿಗ ಸ್ವಾಮೀಜಿ ಬ್ಯಾಟಿಂಗ್, ಸಿದ್ದರಾಮಯ್ಯ ಪರ ಅಖಾಡಕ್ಕಿಳಿದ 'ಕಾಗಿನೆಲೆ' ಸ್ವಾಮೀಜಿ!

SCROLL FOR NEXT