ಸಾಂದರ್ಭಿಕ ಚಿತ್ರ 
ವಿದೇಶ

2022 ರಿಂದ ಪಾಕ್ ಜೈಲಿನಲ್ಲಿ ಬಂಧಿಯಾಗಿದ್ದ ಭಾರತೀಯ ಮೀನುಗಾರ ಆತ್ಮಹತ್ಯೆ

ಅಕ್ರಮವಾಗಿ ಪಾಕಿಸ್ತಾನದ ಜಲಗಡಿ ಪ್ರವೇಶಿಸಿದ ಆರೋಪದ ಮೇಲೆ ಫೆಬ್ರವರಿ 2022 ರಲ್ಲಿ ಬಂಧಿಸಲ್ಪಟ್ಟ ಆನಂದ್ ಅವರು ಜೈಲಿನ ಶೌಚಾಲಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಕರಾಚಿ: ಕರಾಚಿಯ ಮಾಲಿರ್ ಜೈಲಿನಲ್ಲಿ ಮಂಗಳವಾರ ಭಾರತೀಯ ಮೀನುಗಾರ ಗೌರವ್ ರಾಮ್ ಆನಂದ್(52) ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಡಾನ್.ಕಾಮ್ ವರದಿ ಮಾಡಿದೆ.

ಅಕ್ರಮವಾಗಿ ಪಾಕಿಸ್ತಾನದ ಜಲಗಡಿ ಪ್ರವೇಶಿಸಿದ ಆರೋಪದ ಮೇಲೆ ಫೆಬ್ರವರಿ 2022 ರಲ್ಲಿ ಬಂಧಿಸಲ್ಪಟ್ಟ ಆನಂದ್ ಅವರು ಜೈಲಿನ ಶೌಚಾಲಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಜೈಲು ಅಧಿಕಾರಿಗಳು ತಿಳಿಸಿರುವುದಾಗಿ ಡಾನ್ ವರದಿ ಮಾಡಿದೆ.

ಮಾಲಿರ್ ಜೈಲಿನ ಸೂಪರಿಂಟೆಂಡೆಂಟ್ ಅರ್ಷದ್ ಹುಸೇನ್ ಅವರು ಈ ಘಟನೆಯನ್ನು ದೃಢಪಡಿಸಿದ್ದು, ಕೈದಿ ಶೌಚಾಲಯಕ್ಕೆ ಹೋಗಿದ್ದ ವೇಳೆ ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.

ಜೈಲಿನ ಕರ್ತವ್ಯ ನಿರತ ವೈದ್ಯರು ಬೆಳಗಿನ ಜಾವ 2:20 ಕ್ಕೆ ಆನಂದ್ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ. ಮ್ಯಾಜಿಸ್ಟ್ರೇಟ್, ಮುಂದಿನ ಕಾನೂನು ಕ್ರಮಗಳು ಮುಗಿಯುವವರೆಗೆ ಅವರ ದೇಹವನ್ನು ಸೊಹ್ರಾಬ್ ಗೋತ್‌ನಲ್ಲಿರುವ ಈಧಿ ಫೌಂಡೇಶನ್‌ನ ಕೋಲ್ಡ್ ಸ್ಟೋರೇಜ್ ಸ್ಥಳಾಂತರಿಸಲು ಆದೇಶಿಸಿದ್ದಾರೆ.

ಸರ್ಕಾರಿ ಮೂಲಗಳ ಪ್ರಕಾರ, ಡಿಸೆಂಬರ್ 31, 2024 ರ ಹೊತ್ತಿಗೆ, 144 ಭಾರತೀಯ ಮೀನುಗಾರರು ಮತ್ತು 1,173 ದೋಣಿಗಳು - ಮುಖ್ಯವಾಗಿ ಗುಜರಾತ್‌ನವರು - ಪಾಕಿಸ್ತಾನದ ವಶದಲ್ಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯ ಸರ್ಕಾರದ 'ದ್ವೇಷ ಭಾಷಣ' ಮಸೂದೆಗೆ ಅಮಿತ್ ಶಾ ಅಡ್ಡಗಾಲು; ಅಸ್ತಿತ್ವದಲ್ಲಿರುವ ಕಾನೂನೇ ಸಾಕು: ಕೇಂದ್ರ

Video: 'ಕಾಂತಾರ' ಕೆಂಗಣ್ಣಿಗೆ ಗುರಿ, ಬಾಲಿವುಡ್​ನಿಂದ ಬ್ಯಾನ್; ಚಾಮುಂಡೇಶ್ವರಿಗೆ ತಲೆಬಾಗಿ ಕ್ಷಮೆಯಾಚಿಸಿದ ರಣವೀರ್ ಸಿಂಗ್!

IPL 2026: RCB vs GT ನಡುವಿನ ಕ್ವಾಲಿಫೈಯರ್ ಪಂದ್ಯಕ್ಕೆ ಮಳೆ ಆತಂಕ, ರಿಸರ್ವ್ ಡೇ ಕೂಡ ಇಲ್ಲ.. ಪಂದ್ಯ ರದ್ದಾದರೆ ಯಾರು ಫೈನಲ್ ಗೆ?

ಚೀನಾ ಏಕಪಕ್ಷೀಯ ನೀತಿಗೆ ಬ್ರೇಕ್‌: Quad ಸಭೆ ನಡುವೆ ಮಹತ್ವದ ಖನಿಜ ಒಪ್ಪಂದಕ್ಕೆ ಭಾರತ-ಅಮೆರಿಕಾ ಸಹಿ..!

ಚೀನಾಗೆ ಕೌಂಟರ್: ಇಂಡೋ-ಪೆಸಿಫಿಕ್‌ನಲ್ಲಿ ಭದ್ರತಾ ಸಹಕಾರ ಹೆಚ್ಚಿಸಲು Quad ಮಹತ್ವದ ತೀರ್ಮಾನ; ಹೊಸ ಕಾರ್ಯಯೋಜನೆ ಘೋಷಿಸಿದ ಮಾರ್ಕೊ ರುಬಿಯೋ..!

SCROLL FOR NEXT