ವ್ಲಾಡಿಮಿರ್ ಪುಟಿನ್ ಜೊತೆಗೆ ಪ್ರಧಾನಿ ಮೋದಿ 
ವಿದೇಶ

ಈಗ ನಮ್ಮ ಸರದಿ: ಭಾರತ ಭೇಟಿಗೆ ಪ್ರಧಾನಿ ಮೋದಿ ಆಹ್ವಾನ ಒಪ್ಪಿದ ಪುಟಿನ್!

ಕಳೆದ ವರ್ಷ ನರೇಂದ್ರ ಮೋದಿ ಅವರು ಎರಡನೇ ಬಾರಿ ಪ್ರಧಾನಿಯಾದ ಮೇಲೆ ಮೊದಲ ಬಾರಿಗೆ ರಷ್ಯಾಕ್ಕೆ ಆಗಮಿಸಿದ್ದರು. ಈಗ ನಮ್ಮ ಸರದಿ ಎಂದಿದ್ದಾರೆ.

ಮಾಸ್ಕೋ: ಭಾರತಕ್ಕೆ ಭೇಟಿ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರ ಆಹ್ವಾನವನ್ನು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಒಪ್ಪಿಕೊಂಡಿದ್ದು, ಅದಕ್ಕಾಗಿ ಸಿದ್ಧತೆಗಳು ನಡೆಯುತ್ತಿದೆ ಎಂದು ರಷ್ಯಾದ ವಿದೇಶಾಂಗ ಸಚಿವ ಸೆರ್ಗೆ ಲಾವ್ರೊವ್ ಗುರುವಾರ ಹೇಳಿದ್ದಾರೆ.

ರಷ್ಯಾದ ಅಂತಾರಾಷ್ಟ್ರೀಯ ವ್ಯವಹಾರಗಳ ಕೌನ್ಸಿಲ್ (RIAC) ಆಯೋಜಿಸಿದ್ದ "ರಷ್ಯಾ ಮತ್ತು ಭಾರತ: ಹೊಸ ದ್ವಿಪಕ್ಷೀಯ ಕಾರ್ಯಸೂಚಿಯತ್ತ' ಶೀರ್ಷಿಕೆಯ ಸಮ್ಮೇಳನದಲ್ಲಿ ವೀಡಿಯೊ ಕಾನ್ಫರೆನ್ಸ್ ನಲ್ಲಿ ಮಾತನಾಡಿದ ಲಾವ್ರೊವ್, "ಪುಟಿನ್ ಭಾರತಕ್ಕೆ ಭೇಟಿ ನೀಡುವ ಸಲುವಾಗಿ ತಯಾರಿಯನ್ನು ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

"ಪುಟಿನ್ ಭಾರತಕ್ಕೆ ಭೇಟಿ ನೀಡಲು ಪ್ರಸ್ತುತ ಸಿದ್ಧತೆ ನಡೆಸಲಾಗುತ್ತಿದೆ" ಎಂದು ರಷ್ಯಾದ ವಿದೇಶಾಂಗ ಸಚಿವರು ಹೇಳಿದ್ದಾರೆಂದು ಸರ್ಕಾರಿ ಸ್ವಾಮ್ಯದ TASS ಸುದ್ದಿ ಸಂಸ್ಥೆ ಉಲ್ಲೇಖಿಸಿದೆ.

ಕಳೆದ ವರ್ಷ ನರೇಂದ್ರ ಮೋದಿ ಅವರು ಎರಡನೇ ಬಾರಿ ಪ್ರಧಾನಿಯಾದ ಮೇಲೆ ಮೊದಲ ಬಾರಿಗೆ ರಷ್ಯಾಕ್ಕೆ ಆಗಮಿಸಿದ್ದರು. ಈಗ ನಮ್ಮ ಸರದಿ ಎಂದಿದ್ದಾರೆ. ಆದರೆ ಯಾವಾಗ ಪುಟಿನ್ ಭಾರತಕ್ಕೆ ಆಗಮಿಸಲಿದ್ದಾರೆ ಎನ್ನುವ ದಿನಾಂಕವನ್ನು ಬಹಿರಂಗಪಡಿಸಿಲ್ಲ.

2024ರ ಜುಲೈನಲ್ಲಿ ಪ್ರಧಾನಿ ಮೋದಿ ರಷ್ಯಾಕ್ಕೆ ಭೇಟಿ ನೀಡಿದ್ದರು. ಐದು ವರ್ಷಗಳಲ್ಲಿ ಮೋದಿಯವರ ಮೊದಲ ಭೇಟಿ ಇದಾಗಿತ್ತು. ಭೇಟಿಯ ವೇಳೆ ಪುಟಿನ್ ಅವರನ್ನು ಭಾರತಕ್ಕೆ ಆಹ್ವಾನಿಸಿದ್ದರು.

ಭಾರತದೊಂದಿಗೆ ರಷ್ಯಾ ಕಾರ್ಯತಂತ್ರದ ಪಾಲುದಾರಿಕೆಯನ್ನು ಅಭಿವೃದ್ಧಿಪಡಿಸುತ್ತಿದೆ ಎಂದು ಮಾರ್ಚ್ 24 ರಂದು ಲಾವ್ರೊವ್ ಹೇಳಿದ್ದರು. ಚೀನಾ, ಭಾರತ, ಇರಾನ್, ಉತ್ತರ ಕೊರಿಯಾ ಮತ್ತು ಕಾಮನ್‌ವೆಲ್ತ್ ಆಫ್ ಇಂಡಿಪೆಂಡೆಂಟ್ ಸ್ಟೇಟ್ಸ್ (ಸಿಐಎಸ್) ದಂತಹ ದೇಶಗಳೊಂದಿಗೆ ರಷ್ಯಾ ಬಾಂಧವ್ಯವನ್ನು ವಿಸ್ತರಿಸುತ್ತಿದೆ ಎಂದು ಲಾವ್ರೊವ್ ಕಾರ್ಯಕ್ರಮವೊಂದರಲ್ಲಿ ಹೇಳಿದ್ದರು.

ಜನವರಿಯಲ್ಲಿ ಭಾರತದ 76 ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಅಧ್ಯಕ್ಷ ದ್ರೌಪದಿ ಮುರ್ಮು ಮತ್ತು ಪ್ರಧಾನಿ ಮೋದಿಯವರಿಗೆ ನೀಡಿದ ಅಭಿನಂದನಾ ಸಂದೇಶದಲ್ಲಿ, ರಷ್ಯಾ-ಭಾರತದ ಸಂಬಂಧಗಳು "ವಿಶೇಷ ಕಾರ್ಯತಂತ್ರದ ಪಾಲುದಾರಿಕೆ"ಯನ್ನು ಆಧರಿಸಿವೆ ಎಂದು ಪುಟಿನ್ ತಿಳಿಸಿದ್ದರು. ಪುಟಿನ್ ಮತ್ತು ಮೋದಿ ಪ್ರತಿ ಎರಡು ತಿಂಗಳಿಗೊಮ್ಮೆ ದೂರವಾಣಿ ಸಂಭಾಷಣೆಗಳನ್ನು ನಡೆಸುತ್ತಾರೆ. ಅಂತಾರಾಷ್ಟ್ರೀಯ ಸಮ್ಮೇಳನಗಳ ಸಂದರ್ಭದಲ್ಲಿ ಉಭಯ ನಾಯಕರು ವೈಯಕ್ತಿಕವಾಗಿ ಸಭೆಗಳನ್ನು ನಡೆಸುತ್ತಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT