ಬ್ಯಾಂಕಾಕ್‌ನಲ್ಲಿ ಸರ್ಕಾರಿ ಕಚೇರಿಗಳಿಗಾಗಿ ನಿರ್ಮಾಣ ಹಂತದಲ್ಲಿದ್ದ 30 ಅಂತಸ್ತಿನ ಗಗನಚುಂಬಿ ಕಟ್ಟಡ ಕುಸಿದಿದೆ. 
ವಿದೇಶ

Bangkok: 7.7 ತೀವ್ರತೆಯ ಭೂಕಂಪ; ಇಬ್ಬರು ಸಾವು, 40 ಮಂದಿ ಸಿಲುಕಿರುವ ಶಂಕೆ; ತುರ್ತು ಪರಿಸ್ಥಿತಿ ಘೋಷಣೆ; Video

ಥಾಯ್ ರಾಜಧಾನಿಯ ಉತ್ತರದಲ್ಲಿರುವ ಕಟ್ಟಡವು ಕೆಲವೇ ಸೆಕೆಂಡುಗಳಲ್ಲಿ ಉರುಳಿಬಿದ್ದಿವೆ. ಇಂದು ಮಧ್ಯಾಹ್ನ ಸಾಗೈಂಗ್ ನಗರದ ವಾಯುವ್ಯಕ್ಕೆ 7.7 ತೀವ್ರತೆಯ ಕಂಪನವು ಸಂಭವಿಸಿದೆ ಎಂದು ಯುನೈಟೆಡ್ ಸ್ಟೇಟ್ಸ್ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ.

ಬ್ಯಾಂಕಾಕ್: ಮ್ಯಾನ್ಮಾರ್ ಕೇಂದ್ರಬಿಂದುವಾಗಿ ಥೈಲ್ಯಾಂಡ್ ರಾಜಧಾನಿ ಬ್ಯಾಂಕಾಕ್ ನಿಂದ 10 ಕಿ.ಮೀ ದೂರ ವ್ಯಾಪ್ತಿಯಲ್ಲಿ ರಿಕ್ಟರ್ ಮಾಪಕದಲ್ಲಿ 7.7 ತೀವ್ರತೆಯ ಭೂಕಂಪ ಸಂಭವಿಸಿ ನಿರ್ಮಾಣ ಹಂತದಲ್ಲಿದ್ದ 30 ಅಂತಸ್ತಿನ ಗಗನಚುಂಬಿ ಕಟ್ಟಡ ಕುಸಿದು 43 ಕಾರ್ಮಿಕರು ಸಿಲುಕಿಕೊಂಡಿದ್ದಾರೆ ಎಂದು ಪೊಲೀಸರು ಮತ್ತು ವೈದ್ಯರು ತಿಳಿಸಿದ್ದಾರೆ. ಬಲವಾದ ಭೂಕಂಪದಿಂದ ನಗರವು ನಲುಗಿಹೋಗಿದೆ.

ಥಾಯ್ ರಾಜಧಾನಿಯ ಉತ್ತರದಲ್ಲಿರುವ ಕಟ್ಟಡವು ಕೆಲವೇ ಸೆಕೆಂಡುಗಳಲ್ಲಿ ಉರುಳಿಬಿದ್ದಿವೆ. ಇಂದು ಮಧ್ಯಾಹ್ನ ಸಾಗೈಂಗ್ ನಗರದ ವಾಯುವ್ಯಕ್ಕೆ 7.7 ತೀವ್ರತೆಯ ಕಂಪನವು ಸಂಭವಿಸಿದೆ ಎಂದು ಯುನೈಟೆಡ್ ಸ್ಟೇಟ್ಸ್ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ.

ಕೆಲವೇ ನಿಮಿಷಗಳ ನಂತರ ಅದೇ ಪ್ರದೇಶದಲ್ಲಿ 6.4 ತೀವ್ರತೆಯ ನಂತರದ ಭೂಕಂಪ ಮತ್ತೆ ಸಂಭವಿಸಿತು. ಥಾಯ್ ಅಧಿಕಾರಿಗಳು ಬ್ಯಾಂಕಾಕ್‌ನಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ ಎಂದು ಪ್ರಧಾನಿ ಪೇಟೊಂಗ್‌ಟಾರ್ನ್ ಶಿನವಾತ್ರ ತಿಳಿಸಿದ್ದಾರೆ.

ಮ್ಯಾನ್ಮಾರ್ ರಾಜಧಾನಿ ನೇಪಿಡಾವ್‌ನಲ್ಲಿ ಕಟ್ಟಡಗಳಿಂದ ಛಾವಣಿಗಳು ಬಿದ್ದು, ರಸ್ತೆಗಳು ಕುಸಿದುಹೋದವು. ಇದು 20 ಲೇನ್‌ಗಳ ಅಗಲದ ಹೆದ್ದಾರಿಗಳನ್ನು ಹೊಂದಿರುವ ವಿಸ್ತಾರವಾದ ನಗರವಾಗಿದೆ. ಸಮವಸ್ತ್ರ ಧರಿಸಿದ ಸಿಬ್ಬಂದಿ ಹೊರಗೆ ಓಡಿಹೋದಾಗ ಸೀಲಿಂಗ್‌ನಿಂದ ತುಂಡುಗಳು ಬಿದ್ದವು, ಗೋಡೆಗಳು ಬಿರುಕು ಬಿಟ್ಟವು, ಅವರಲ್ಲಿ ಕೆಲವರು ನಡುಗುತ್ತಾ ಕಣ್ಣೀರು ಸುರಿಸುತ್ತಿದ್ದರು, ತಮ್ಮ ಜನರನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿದ್ದರು.

ಭೂಕಂಪದ ನಂತರ ಸಾವುನೋವುಗಳ ಬಗ್ಗೆ ತಕ್ಷಣದ ವರದಿಗಳಿಲ್ಲ ಆದರೆ ಅವು ಉತ್ತರ ಥೈಲ್ಯಾಂಡ್‌ನ ಹತ್ತಿರದ ನಗರಗಳಲ್ಲಿ ಮತ್ತು ರಾಜಧಾನಿ ಬ್ಯಾಂಕಾಕ್‌ವರೆಗೆ ಭೀತಿಯನ್ನುಂಟುಮಾಡಿದವು.

ಕಟ್ಟಡಗಳಿಗೆ ಹಾನಿ

ಭೂಕಂಪವು ಬ್ಯಾಂಕಾಕ್‌ನಲ್ಲಿ ಕಟ್ಟಡಗಳಿಗೆ ಹಾನಿಯನ್ನುಂಟುಮಾಡಿದ್ದು, ನಗರದಲ್ಲಿ ಕೆಲವು ಮೆಟ್ರೋ ಮತ್ತು ಲಘು ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಯಿತು. ಚೀನಾದ ನೈಋತ್ಯ ಯುನ್ನಾನ್ ಪ್ರಾಂತ್ಯದಲ್ಲಿಯೂ ರಿಕ್ಟರ್ ಮಾಪಕದಲ್ಲಿ 7.9 ತೀವ್ರತೆಯ ಕಂಪನ ಸಂಭವಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT