ಬ್ಯಾಂಕಾಕ್‌ನಲ್ಲಿ ಸರ್ಕಾರಿ ಕಚೇರಿಗಳಿಗಾಗಿ ನಿರ್ಮಾಣ ಹಂತದಲ್ಲಿದ್ದ 30 ಅಂತಸ್ತಿನ ಗಗನಚುಂಬಿ ಕಟ್ಟಡ ಕುಸಿದಿದೆ. 
ವಿದೇಶ

Bangkok: 7.7 ತೀವ್ರತೆಯ ಭೂಕಂಪ; ಇಬ್ಬರು ಸಾವು, 40 ಮಂದಿ ಸಿಲುಕಿರುವ ಶಂಕೆ; ತುರ್ತು ಪರಿಸ್ಥಿತಿ ಘೋಷಣೆ; Video

ಥಾಯ್ ರಾಜಧಾನಿಯ ಉತ್ತರದಲ್ಲಿರುವ ಕಟ್ಟಡವು ಕೆಲವೇ ಸೆಕೆಂಡುಗಳಲ್ಲಿ ಉರುಳಿಬಿದ್ದಿವೆ. ಇಂದು ಮಧ್ಯಾಹ್ನ ಸಾಗೈಂಗ್ ನಗರದ ವಾಯುವ್ಯಕ್ಕೆ 7.7 ತೀವ್ರತೆಯ ಕಂಪನವು ಸಂಭವಿಸಿದೆ ಎಂದು ಯುನೈಟೆಡ್ ಸ್ಟೇಟ್ಸ್ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ.

ಬ್ಯಾಂಕಾಕ್: ಮ್ಯಾನ್ಮಾರ್ ಕೇಂದ್ರಬಿಂದುವಾಗಿ ಥೈಲ್ಯಾಂಡ್ ರಾಜಧಾನಿ ಬ್ಯಾಂಕಾಕ್ ನಿಂದ 10 ಕಿ.ಮೀ ದೂರ ವ್ಯಾಪ್ತಿಯಲ್ಲಿ ರಿಕ್ಟರ್ ಮಾಪಕದಲ್ಲಿ 7.7 ತೀವ್ರತೆಯ ಭೂಕಂಪ ಸಂಭವಿಸಿ ನಿರ್ಮಾಣ ಹಂತದಲ್ಲಿದ್ದ 30 ಅಂತಸ್ತಿನ ಗಗನಚುಂಬಿ ಕಟ್ಟಡ ಕುಸಿದು 43 ಕಾರ್ಮಿಕರು ಸಿಲುಕಿಕೊಂಡಿದ್ದಾರೆ ಎಂದು ಪೊಲೀಸರು ಮತ್ತು ವೈದ್ಯರು ತಿಳಿಸಿದ್ದಾರೆ. ಬಲವಾದ ಭೂಕಂಪದಿಂದ ನಗರವು ನಲುಗಿಹೋಗಿದೆ.

ಥಾಯ್ ರಾಜಧಾನಿಯ ಉತ್ತರದಲ್ಲಿರುವ ಕಟ್ಟಡವು ಕೆಲವೇ ಸೆಕೆಂಡುಗಳಲ್ಲಿ ಉರುಳಿಬಿದ್ದಿವೆ. ಇಂದು ಮಧ್ಯಾಹ್ನ ಸಾಗೈಂಗ್ ನಗರದ ವಾಯುವ್ಯಕ್ಕೆ 7.7 ತೀವ್ರತೆಯ ಕಂಪನವು ಸಂಭವಿಸಿದೆ ಎಂದು ಯುನೈಟೆಡ್ ಸ್ಟೇಟ್ಸ್ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ.

ಕೆಲವೇ ನಿಮಿಷಗಳ ನಂತರ ಅದೇ ಪ್ರದೇಶದಲ್ಲಿ 6.4 ತೀವ್ರತೆಯ ನಂತರದ ಭೂಕಂಪ ಮತ್ತೆ ಸಂಭವಿಸಿತು. ಥಾಯ್ ಅಧಿಕಾರಿಗಳು ಬ್ಯಾಂಕಾಕ್‌ನಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ ಎಂದು ಪ್ರಧಾನಿ ಪೇಟೊಂಗ್‌ಟಾರ್ನ್ ಶಿನವಾತ್ರ ತಿಳಿಸಿದ್ದಾರೆ.

ಮ್ಯಾನ್ಮಾರ್ ರಾಜಧಾನಿ ನೇಪಿಡಾವ್‌ನಲ್ಲಿ ಕಟ್ಟಡಗಳಿಂದ ಛಾವಣಿಗಳು ಬಿದ್ದು, ರಸ್ತೆಗಳು ಕುಸಿದುಹೋದವು. ಇದು 20 ಲೇನ್‌ಗಳ ಅಗಲದ ಹೆದ್ದಾರಿಗಳನ್ನು ಹೊಂದಿರುವ ವಿಸ್ತಾರವಾದ ನಗರವಾಗಿದೆ. ಸಮವಸ್ತ್ರ ಧರಿಸಿದ ಸಿಬ್ಬಂದಿ ಹೊರಗೆ ಓಡಿಹೋದಾಗ ಸೀಲಿಂಗ್‌ನಿಂದ ತುಂಡುಗಳು ಬಿದ್ದವು, ಗೋಡೆಗಳು ಬಿರುಕು ಬಿಟ್ಟವು, ಅವರಲ್ಲಿ ಕೆಲವರು ನಡುಗುತ್ತಾ ಕಣ್ಣೀರು ಸುರಿಸುತ್ತಿದ್ದರು, ತಮ್ಮ ಜನರನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿದ್ದರು.

ಭೂಕಂಪದ ನಂತರ ಸಾವುನೋವುಗಳ ಬಗ್ಗೆ ತಕ್ಷಣದ ವರದಿಗಳಿಲ್ಲ ಆದರೆ ಅವು ಉತ್ತರ ಥೈಲ್ಯಾಂಡ್‌ನ ಹತ್ತಿರದ ನಗರಗಳಲ್ಲಿ ಮತ್ತು ರಾಜಧಾನಿ ಬ್ಯಾಂಕಾಕ್‌ವರೆಗೆ ಭೀತಿಯನ್ನುಂಟುಮಾಡಿದವು.

ಕಟ್ಟಡಗಳಿಗೆ ಹಾನಿ

ಭೂಕಂಪವು ಬ್ಯಾಂಕಾಕ್‌ನಲ್ಲಿ ಕಟ್ಟಡಗಳಿಗೆ ಹಾನಿಯನ್ನುಂಟುಮಾಡಿದ್ದು, ನಗರದಲ್ಲಿ ಕೆಲವು ಮೆಟ್ರೋ ಮತ್ತು ಲಘು ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಯಿತು. ಚೀನಾದ ನೈಋತ್ಯ ಯುನ್ನಾನ್ ಪ್ರಾಂತ್ಯದಲ್ಲಿಯೂ ರಿಕ್ಟರ್ ಮಾಪಕದಲ್ಲಿ 7.9 ತೀವ್ರತೆಯ ಕಂಪನ ಸಂಭವಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ; ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ ಸುಪ್ರೀಂ ಕೋರ್ಟ್ ತರಾಟೆ!

SCROLL FOR NEXT