ವಾಷಿಂಗ್ಟನ್‌ನಲ್ಲಿರುವ ಶ್ವೇತಭವನದ ಓವಲ್ ಕಚೇರಿಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಸ್ತಲಾಘವ ಮಾಡುತ್ತಿದ್ದಾರೆ. 
ವಿದೇಶ

ಮೋದಿ ಬಹಳ ಬುದ್ಧಿವಂತ ವ್ಯಕ್ತಿ, ವ್ಯಾಪಾರ ಮಾತುಕತೆ ಸುಗಮವಾಗಿ ಸಾಗುತ್ತದೆ ಎಂಬ ವಿಶ್ವಾಸ ಇದೆ: ಡೊನಾಲ್ಡ್ ಟ್ರಂಪ್

ಭಾರತ ಮತ್ತು ಇತರ ದೇಶಗಳು ಅಮೆರಿಕದ ಸರಕುಗಳ ಮೇಲೆ ವಿಧಿಸುತ್ತಿರುವ ಹೆಚ್ಚಿನ ಸುಂಕಗಳ ಮೇಲೆ ಟ್ರಂಪ್ ಅವರು ನೀಡುತ್ತಿರುವ ಹೇಳಿಕೆಗಳಿಂದಾಗಿ ಈ ಮಾತುಗಳು ಮಹತ್ವ ಪಡೆದಿವೆ.

ನ್ಯೂಯಾರ್ಕ್: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಅತ್ಯಂತ ಬುದ್ಧಿವಂತ ವ್ಯಕ್ತಿ ಹಾಗೂ ನನ್ನ ಉತ್ತಮ ಸ್ನೇಹಿತ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಣ್ಣಿಸಿದ್ದಾರೆ. ಸುಂಕ ವಿಧಿಸುವ ವಿಚಾರದಲ್ಲಿ ಭಾರತ ಮತ್ತು ನಮ್ಮ ದೇಶದ ನಡುವೆ ಮಾತುಕತೆಗಳು ಉತ್ತಮವಾಗಿ ಸಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಭಾರತ ಮತ್ತು ಇತರ ದೇಶಗಳು ಅಮೆರಿಕದ ಸರಕುಗಳ ಮೇಲೆ ವಿಧಿಸುತ್ತಿರುವ ಹೆಚ್ಚಿನ ಸುಂಕಗಳ ಮೇಲೆ ಟ್ರಂಪ್ ಅವರು ನೀಡುತ್ತಿರುವ ಹೇಳಿಕೆಗಳಿಂದಾಗಿ ಈ ಮಾತುಗಳು ಮಹತ್ವ ಪಡೆದಿವೆ. ಪ್ರಧಾನಿ ಮೋದಿ ಇತ್ತೀಚೆಗೆ ಇಲ್ಲಿಗೆ ಬಂದಿದ್ದರು, ನಾವು ಯಾವಾಗಲೂ ಉತ್ತಮ ಸ್ನೇಹಿತರಾಗಿದ್ದೇವೆ ಎಂದು ನಿನ್ನೆ ಶ್ವೇತಭವನದಲ್ಲಿ ಟ್ರಂಪ್ ಹೇಳಿದ್ದಾರೆ.

ಭಾರತವು ವಿಶ್ವದ ಅತಿ ಹೆಚ್ಚು ಸುಂಕ ವಿಧಿಸುವ ರಾಷ್ಟ್ರಗಳಲ್ಲಿ ಒಂದಾಗಿದೆ. ಇದು ಕ್ರೂರ ಕ್ರಮ. ಪ್ರಧಾನಿ ಮೋದಿಯವರು ತುಂಬಾ ಬುದ್ಧಿವಂತರು. ಹಾಗೆಯೇ ನನ್ನ ಉತ್ತಮ ಸ್ನೇಹಿತನೂ ಹೌದು. ನಮ್ಮ ಮಾತುಕತೆ ಸುಗಮವಾಗಿ ಸಾಗುತ್ತಿದೆ. ಭಾರತ ಮತ್ತು ನಮ್ಮ ದೇಶದ ನಡುವೆ ಇದು ಚೆನ್ನಾಗಿ ಕೆಲಸ ಮಾಡುತ್ತದೆ ಎಂದು ನಾನು ಭಾವಿಸುತ್ತೇನೆ ಎಂದರು.

ಮೋದಿಯವರು ಒಬ್ಬ ಉತ್ತಮ ಪ್ರಧಾನಿ. ಕಳೆದ ಫೆಬ್ರವರಿಯಲ್ಲಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡಿದ್ದ ವೇಳೆ ಟ್ರಂಪ್ ಅವರೊಂದಿಗೆ ದ್ವಿಪಕ್ಷೀಯ ಚರ್ಚೆಗಳನ್ನು ನಡೆಸಿದ್ದರು. ಟ್ರಂಪ್ ಎರಡನೇ ಅವಧಿಗೆ ಅಮೆರಿಕದ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ಒಂದು ತಿಂಗಳಲ್ಲಿ ಮೋದಿ ಅಮೆರಿಕಕ್ಕೆ ಭೇಟಿ ನೀಡಿದ್ದರು.

ಭಾರತವು ಅತಿ ಹೆಚ್ಚು ಸುಂಕ ಹೊಂದಿರುವ ರಾಷ್ಟ್ರ ಎಂದು ಟ್ರಂಪ್ ಈ ಹಿಂದೆ ಹೇಳಿದ್ದರು. ಅಮೆರಿಕದ ಸರಕುಗಳ ಮೇಲೆ ಸುಂಕ ವಿಧಿಸುವ ದೇಶಗಳ ಮೇಲೆ ಸುಂಕ ವಿಧಿಸುವ ಕ್ರಮ ಏಪ್ರಿಲ್ 2 ರಿಂದ ಪ್ರಾರಂಭವಾಗುತ್ತವೆ ಎಂದು ಪುನರುಚ್ಚರಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್