ಬ್ಯಾಂಕಾಕ್ ಗಗನಚುಂಬಿ ಕಟ್ಟಡದ ಸ್ವಿಮ್ಮಿಂಗ್ ಪೂಲ್ 
ವಿದೇಶ

Romance ನಲ್ಲಿ ಮೈ ಮರೆತಿದ್ದ ಜೋಡಿಗೆ ಶಾಕ್ ಕೊಟ್ಟ ಭೂಕಂಪ: ಗಗನ ಚುಂಬಿ ಕಟ್ಟಡದ ಸ್ವಿಮ್ಮಿಂಗ್ ಪೂಲ್ Video viral

ಭೂಕಂಪನದ ವೇಳೆ ಬ್ಯಾಂಕಾಕ್‌ನ ಹೋಟೆಲ್‌ನ ಮೇಲ್ಛಾವಣಿಯ ಸ್ವಿಮಿಂಗ್ ಪೂಲ್​ನಲ್ಲಿ ನೀರು ಕೆಳಗೆ ಧುಮ್ಮಿಕ್ಕುತ್ತಿದ್ದ ವಿಡಿಯೋ ವೈರಲ್ ಆಗಿತ್ತು.

ಬ್ಯಾಂಕಾಕ್: ಮ್ಯಾನ್ಮಾರ್‌ನಲ್ಲಿ ಸಂಭವಿಸಿದ ಭೀಕರ ಭೂಕಂಪನದಿಂದಾಗಿ ಈವರೆಗೂ ಸಾವಿರಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, ಹಲವಾರು ಕಟ್ಟಡಗಳು ನಾಶವಾಗಿವೆ.

ಮ್ಯಾನ್ಮಾರ್‌ ಭೂಪಂಕದಿಂದ (Myanmar Earthquake) ಅಕ್ಷಶಃ ತತ್ತರಿಸಿ ಹೋಗಿದ್ದು, ಮಾರ್ಚ್​ 28ರಂದು ಮ್ಯಾನ್ಮಾರ್‌ನಲ್ಲಿ 7.7 ಮತ್ತು 6.4 ತೀವ್ರತೆಯ ಎರಡು ಸತತ ಭೂಕಂಪಗಳು ಸಂಭವಿಸಿದವು.

ಭೂಕಂಪನದಿಂದಾಗಿ ರಾಜಧಾನಿ ನೇಪಿಡಾವ್‌ನಲ್ಲಿರುವ ಆಸ್ಪತ್ರೆಯಿಂದ ಸಾವನ್ನಪ್ಪಿದವರ ಸಂಖ್ಯೆ ಹೆಚ್ಚಾಗುತ್ತಿದೆ. ನೂರಾರು ಮಂದಿಯ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕ ಏದುರಾಗಿದೆ.

ಒಮ್ಮೆಲೆ ಸಮುದ್ರವಾದ ಸ್ವಿಮ್ಮಿಂಗ್ ಪೂಲ್

ಇನ್ನು ಭೂಕಂಪನದ ವೇಳೆ ಬ್ಯಾಂಕಾಕ್‌ನ ಹೋಟೆಲ್‌ನ ಮೇಲ್ಛಾವಣಿಯ ಸ್ವಿಮಿಂಗ್ ಪೂಲ್​ನಲ್ಲಿ ನೀರು ಕೆಳಗೆ ಧುಮ್ಮಿಕ್ಕುತ್ತಿದ್ದ ವಿಡಿಯೋ ವೈರಲ್ ಆಗಿತ್ತು. ಇದೇ ಇದೇ ಸ್ವಿಮ್ಮಿಂಗ್ ಪೂಲ್ ಮತ್ತೊಂದು ವಿಡಿಯೋ ವೈರಲ್ ಆಗುತ್ತಿದೆ. ಅತ್ಯಂತ ಶಾಂತವಾಗಿದ್ದ ಸ್ವಿಮ್ಮಿಂಗ್ ಪೂಲ್ ನಲ್ಲಿನ ನೀರು ಭೂಕಂಪನದ ವೇಳೆ ಸಮುದ್ರದ ಅಲೆಗಳಂತೆ ಮಾರ್ಪಟ್ಟಿತು. ಈ ವೇಳೆ ನೀರು ಕೆಳಗೆ ಧುಮ್ಮಿಕ್ಕಿತು. ಈ ಕುರಿತ ವಿಡಿಯೋಗಳು ವ್ಯಾಪಕ ವೈರಲ್ ಆಗಿತ್ತು.

Romance ನಲ್ಲಿ ಮೈ ಮರೆತಿದ್ದ ಜೋಡಿಗೆ ಶಾಕ್

ಇನ್ನು ಇದೇ ಸ್ವಿಮ್ಮಿಂಗ್ ಪೂಲ್ ನಲ್ಲಿ ಜೋಡಿಯೊಂದು ಲೌಂಜರ್‌ಗಳ ಮೇಲೆ ತೇಲುತ್ತಿತ್ತು. ಆದರೆ ಈ ವೇಳೆ ಭೂಕಂಪ ಸಂಭವಿಸುತ್ತಿದ್ದಂತೆ, ನೀರು ಏರಿಳಿತಗೊಳ್ಳಲು ಪ್ರಾರಂಭಿಸಿತು. ಕೆಲವೇ ಸೆಕೆಂಡುಗಳಲ್ಲಿ, ಬೃಹತ್ ಅಲೆಗಳು ರೂಪುಗೊಂಡವು, ಕೊಳದ ಅಂಚುಗಳ ಮೇಲೆ ಅಪ್ಪಳಿಸಿದವು.

ಅಷ್ಟು ಹೊತ್ತು ರೊಮ್ಯಾನಲ್ಲಿ ಬಿಸಿಯಾಗಿದ್ದ ಈ ಜೋಡಿ ಏಕಾಏಕಿ ಪ್ರಾಣ ಉಳಿಸಿಕೊಳ್ಳಲು ಪರದಾಡಿತು. ನಿಶ್ಚಿಂತೆಯಿಂದ ಸ್ವಿಮ್ಮಿಂಗ್ ಪೂಲ್ ನಲ್ಲಿ ಮಲಗಿದ್ದ ಜೋಡಿ ಭೂಕಂಪದಿಂದ ತತ್ತರಿಸಿ ಹೋಯಿತು. ಶಾಂತವಾಗಿದ್ದ ಈಜುಕೊಳವು ವಿಪತ್ತಾಗಿ ಮಾರ್ಪಟ್ಟ ಭಯಾನಕ ಕ್ಷಣವನ್ನು ಸೆರೆಹಿಡಿದಿರುವ ವೀಡಿಯೊ ಈಗ ವೈರಲ್ ಆಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ನಾಳೆ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ-Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT