ವಾಯುಪ್ರದೇಶ ಮುಚ್ಚಿದ ಪಾಕಿಸ್ತಾನ (ಸಾಂದರ್ಭಿಕ ಚಿತ್ರ) 
ವಿದೇಶ

ಭಾರತ ಸೇನೆ ದಾಳಿ ಆತಂಕ: ಕರಾಚಿ, ಲಾಹೋರ್ ವಾಯುಪ್ರದೇಶ ತಾತ್ಕಾಲಿಕ ಮುಚ್ಚಿದ ಪಾಕಿಸ್ತಾನ

ಭಾರತದಿಂದ ಪ್ರತೀಕಾರದ ಕ್ರಮದ ಬಗ್ಗೆ ಇಸ್ಲಾಮಾಬಾದ್‌ನ ಆತಂಕದ ನಡುವೆ ವಾಯುಯಾನ ಅಧಿಕಾರಿಗಳ ಘೋಷಣೆ ಬಂದಿದೆ.

ಇಸ್ಲಾಮಾಬಾದ್: ಪಹಲ್ಗಾಮ್ ಉಗ್ರ ದಾಳಿ ಬಳಿಕ ಭಾರತ ಸೇನಾದಾಳಿ ನಡೆಸಲಿದೆ ಎಂಬ ಆತಂಕದಲ್ಲಿರುವ ಪಾಕಿಸ್ತಾನ ಭಾರತಕ್ಕೆ ತನ್ನ ವಾಯುಪ್ರದೇಶ ಮುಚ್ಚಿದ್ದಲ್ಲದೇ ಇದೀಗ ತನ್ನದೇ ಎರಡು ಪ್ರಮುಖ ನಗರಗಳ ವಾಯು ಪ್ರದೇಶವನ್ನೂ ಕೂಡ ತಾತ್ಕಾಲಿಕವಾಗಿ ಮುಚ್ಚಿದೆ.

ಪಾಕಿಸ್ತಾನದ ಪ್ರಮುಖನಗರಗಳಾದ ಲಾಹೋರ್ ಮತ್ತು ಕರಾಚಿಯ ವಾಯುಪ್ರದೇಶವನ್ನು ಪಾಕಿಸ್ತಾನ ಸರ್ಕಾರ ತಾತ್ಕಾಲಿಕವಾಗಿ ಮುಚ್ಚಿದ್ದು, ಈ ನಗರಗಳ ಮೇಲೆ ಯಾವುದೇ ರೀತಿಯ ವೈಮಾನಿಕ ಹಾರಾಟವನ್ನು ಸರ್ಕಾರ ನಿಷೇಧಿಸಿದೆ.

ಭದ್ರತಾ ಆತಂಕದ ಮೇರೆಗೆ, ಮೇ ತಿಂಗಳಲ್ಲಿ ಪ್ರತಿದಿನ ಸೀಮಿತ ಅವಧಿಗೆ ಕರಾಚಿ ಮತ್ತು ಲಾಹೋರ್ ವಿಮಾನ ಮಾಹಿತಿ ಪ್ರದೇಶಗಳ ನಿರ್ದಿಷ್ಟ ಭಾಗಗಳನ್ನು ಮುಚ್ಚುವುದಾಗಿ ಪಾಕಿಸ್ತಾನ ಸರ್ಕಾರ ಘೋಷಿಸಿದೆ ಎಂದು ಪಾಕ್ ಮಾಧ್ಯಮ ವರದಿಯೊಂದು ಗುರುವಾರ ತಿಳಿಸಿದೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನ ಮತ್ತು ಇಸ್ಲಾಮಾಬಾದ್ ನಡುವೆ ಹೆಚ್ಚಿದ ಉದ್ವಿಗ್ನತೆ ಮತ್ತು ಭಾರತದಿಂದ ಪ್ರತೀಕಾರದ ಕ್ರಮದ ಬಗ್ಗೆ ಇಸ್ಲಾಮಾಬಾದ್‌ನ ಆತಂಕದ ನಡುವೆ ವಾಯುಯಾನ ಅಧಿಕಾರಿಗಳ ಘೋಷಣೆ ಬಂದಿದೆ.

"ಮೇ 1 ರಿಂದ ಮೇ 31 ರವರೆಗೆ ಸ್ಥಳೀಯ ಸಮಯ ಬೆಳಿಗ್ಗೆ 4:00 ರಿಂದ ಬೆಳಿಗ್ಗೆ 8:00 ರವರೆಗೆ ನಿರ್ಬಂಧಿತ ವಾಯುಪ್ರದೇಶವನ್ನು ಮುಚ್ಚಲಾಗುತ್ತದೆ" ಎಂದು ಅಧಿಕೃತ ಸೂಚನೆಯನ್ನು ಉಲ್ಲೇಖಿಸಿ ಎಕ್ಸ್‌ಪ್ರೆಸ್ ಟ್ರಿಬ್ಯೂನ್ ವರದಿ ಮಾಡಿದೆ.

ನಾಗರಿಕ ವಿಮಾನಯಾನ ಪ್ರಾಧಿಕಾರ (ಸಿಎಎ) ವಾಯುಪ್ರದೇಶ ಮುಚ್ಚುವಿಕೆ ನಿರ್ಣಯದಿಂದ ವಾಣಿಜ್ಯ ಹಾರಾಟ ಕಾರ್ಯಾಚರಣೆಗಳಿಗೆ ಗಮನಾರ್ಹವಾಗಿ ಅಡ್ಡಿಯಾಗುವುದಿಲ್ಲ. ಏಕೆಂದರೆ ನಿರ್ಬಂಧಿತ ಸಮಯದಲ್ಲಿ ವಿಮಾನಗಳನ್ನು ಪರ್ಯಾಯ ವಿಮಾನ ಮಾರ್ಗಗಳ ಮೂಲಕ ತಿರುಗಿಸಲಾಗುತ್ತದೆ ಎಂದು ಹೇಳಿದೆ.

ಪಾಕ್ ಪ್ರಮುಖ ನಗರಗಳೇ ಭಾರತದ ಟಾರ್ಗೆಟ್?

ಪಹಲ್ಗಾಮ್ ಉಗ್ರ ದಾಳಿ ಬಳಿಕ ಪಾಕಿಸ್ತಾನದ ವಿರುದ್ಧ ಪ್ರತೀಕಾರಕ್ಕೆ ಮುಂದಾಗಿರುವ ಭಾರತ ಈ ಬಾಕಿ ಪಾಕಿಸ್ತಾನದ ಪ್ರಮುಖ ನಗರಗಳನ್ನು ಗುರಿಯಾಗಿಸಿಕೊಂಡು ದಾಳಿ ಮಾಡುವ ಸಾಧ್ಯತೆ ಇದೆ. ಪ್ರಮುಖವಾಗಿ ಭಾರತದ ಗಡಿ ಪ್ರದೇಶಕ್ಕೆ ಹತ್ತಿರ ಇರುವ ಕರಾಚಿ ಮತ್ತು ಲಾಹೋರ್ ನಗರಗಳನ್ನು ಭಾರತ ಗುರಿಯಾಗಿಸಿಕೊಂಡು ದಾಳಿ ಮಾಡಬಹುದು ಎಂದು ಪಾಕ್ ಮಾಧ್ಯಮಗಳು ವಿಶ್ಲೇಷಿಸುತ್ತಿವೆ. ಇದೇ ಕಾರಣಕ್ಕೆ ಪಾಕ್ ಸರ್ಕಾರ ಈ ನಿರ್ಣಯ ಕೈಗೊಂಡಿದೆ ಎಂದೂ ಹೇಳಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT