ಶೇರ್ ಅಫ್ಜಲ್ ಖಾನ್ ಮರ್ವಾತ್ 
ವಿದೇಶ

ಭಾರತ ನಮ್ಮ ಮೇಲೆ ಯುದ್ಧ ಮಾಡಿದರೆ, ನಾನು ಇಂಗ್ಲೆಂಡ್‌ಗೆ ಓಡಿಹೋಗುತ್ತೇನೆ: Pak ಸಂಸದನ ಹೇಳಿಕೆ ವೈರಲ್

ಭಾರತದ ಪ್ರಧಾನಿ ನರೇಂದ್ರ ಮೋದಿ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಹಿಂದೆ ಸರಿಯಬೇಕೆಂದು ನೀವು ಭಾವಿಸುತ್ತೀರಾ ಎಂದು ಪತ್ರಕರ್ತ ಕೇಳಿದಾಗ? ಶೇರ್ ಅಫ್ಜಲ್ ಮಾರ್ವತ್ ವ್ಯಂಗ್ಯವಾಡುವ ಧ್ವನಿಯಲ್ಲಿ, ‘ಮೋದಿ ನನ್ನ ಚಿಕ್ಕಮ್ಮನ ಮಗನಾ, ನನ್ನ ಆಜ್ಞೆಗೆ ಮಣಿಯುತ್ತಾರಾ?’ಎಂದು ಹೇಳಿದರು.

ಇಸ್ಲಾಮಾಬಾದ್: ಪಹಲ್ಗಾಮ್ ದಾಳಿಯ ನಂತರ, ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಹೆಚ್ಚಾಗಿದೆ. ಭಾರತ-ಪಾಕಿಸ್ತಾನ ಸಂಘರ್ಷದಿಂದಾಗಿ ಪರಿಸ್ಥಿತಿ ಯುದ್ಧದಂತಿದೆ. ಉಭಯ ದೇಶಗಳ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ಪಾಕಿಸ್ತಾನ ಸಂಸದ ಶೇರ್ ಅಫ್ಜಲ್ ಖಾನ್ ಮರ್ವಾತ್ ಯುದ್ಧದ ಸಂದರ್ಭದಲ್ಲಿ ತಮ್ಮ ಕಾರ್ಯತಂತ್ರವನ್ನು ಹಂಚಿಕೊಳ್ಳುವ ಮೂಲಕ ಸಾಮಾಜಿಕ ಮಾಧ್ಯಮ ಬಳಕೆದಾರರ ಗಮನ ಸೆಳೆದಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೊವೊಂದರಲ್ಲಿ, ಪತ್ರಕರ್ತರೊಬ್ಬರು ಶೇರ್ ಅಫ್ಜಲ್ ಖಾನ್ ಮರ್ವಾತ್ ಅವರನ್ನು ಭಾರತದೊಂದಿಗೆ ಯುದ್ಧ ನಡೆದರೆ, ನೀವು ಬಂದೂಕು ಎತ್ತಿಕೊಂಡು ಗಡಿಗೆ ಹೋಗುತ್ತೀರಾ ಎಂದು ಕೇಳುತ್ತಿರುವುದು ಕಂಡುಬರುತ್ತದೆ. ಇದಕ್ಕೆ ಮಾರ್ವತ್ ಸ್ಪಷ್ಟವಾಗಿ, "ಭಾರತದೊಂದಿಗೆ ಯುದ್ಧ (ಭಾರತ-ಪಾಕಿಸ್ತಾನ ಯುದ್ಧ) ನಡೆದರೆ ನಾನು ಇಂಗ್ಲೆಂಡ್‌ಗೆ ಹೋಗುತ್ತೇನೆ" ಎಂದು ಉತ್ತರಿಸಿದರು. "ನಾವು ಶಸ್ತ್ರಾಸ್ತ್ರ ಹಿಡಿಯುವ ಸೈನಿಕರಲ್ಲ. ಸೈನ್ಯವು ಯುದ್ಧ ಮಾಡುತ್ತದೆ. ನಾವು ಅವರನ್ನು ಹೊಗಳುತ್ತೇವೆ ಮತ್ತು ಪ್ರೋತ್ಸಾಹಿಸುತ್ತೇವೆ" ಎಂದು ಅವರು ಹೇಳಿದರು.

ಭಾರತದ ಪ್ರಧಾನಿ ನರೇಂದ್ರ ಮೋದಿ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಹಿಂದೆ ಸರಿಯಬೇಕೆಂದು ನೀವು ಭಾವಿಸುತ್ತೀರಾ ಎಂದು ಪತ್ರಕರ್ತ ಕೇಳಿದಾಗ? ಶೇರ್ ಅಫ್ಜಲ್ ಮಾರ್ವತ್ ವ್ಯಂಗ್ಯವಾಡುವ ಧ್ವನಿಯಲ್ಲಿ, ‘ಮೋದಿ ನನ್ನ ಚಿಕ್ಕಮ್ಮನ ಮಗನಾ, ನನ್ನ ಆಜ್ಞೆಗೆ ಮಣಿಯುತ್ತಾರಾ?’ಎಂದು ಹೇಳಿದರು. ಅವರ ಹೇಳಿಕೆ ತಕ್ಷಣವೇ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಅಲ್ಲಿ ಸಾಮಾಜಿಕ ಮಾಧ್ಯಮ ಬಳಕೆದಾರರು ಅವರ ಹಾಸ್ಯಪ್ರಜ್ಞೆಯನ್ನು ಹೊಗಳಿದರು. ಆದರೆ ಕೆಲವು ವಿಮರ್ಶಕರು ಅವರನ್ನು ಟೀಕಿಸಿ ‘ಹೇಡಿ’ ಎಂದು ಕರೆದರು. ಅವರ ಹೇಳಿಕೆಯನ್ನು ಟೀಕಿಸುತ್ತಿರುವ ನೆಟ್ಟಿಗರು "ಸಂಸದರೇ ಓಡಿಹೋಗುವ ಬಗ್ಗೆ ಯೋಚಿಸುತ್ತಿರುವಾಗ, ಸೈನಿಕರ ನೈತಿಕ ಸ್ಥೈರ್ಯ ಹೇಗೆ ಹೆಚ್ಚಾಗುತ್ತದೆ?" ಎಂದು ಪ್ರಶ್ನಿಸುತ್ತಿದ್ದಾರೆ.

ಶೇರ್ ಅಫ್ಜಲ್ ಮಾರ್ವತ್ ಅವರು ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಪಕ್ಷದ ಸಕ್ರಿಯ ನಾಯಕರಾಗಿದ್ದರು ಎಂಬುದು ಗಮನಾರ್ಹ. ಪಕ್ಷದ ನಾಯಕತ್ವದ ಬಗ್ಗೆ ಕಟು ಟೀಕೆ ಮಾಡಿದ್ದಕ್ಕಾಗಿ ಇತ್ತೀಚಿನ ವರ್ಷಗಳಲ್ಲಿ ಅವರನ್ನು ಪಿಟಿಐನ ಪ್ರಮುಖ ಜವಾಬ್ದಾರಿಗಳಿಂದ ತೆಗೆದುಹಾಕಲಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT