ಜೆಡಿ ವ್ಯಾನ್ಸ್ 
ವಿದೇಶ

ಭಾರತ-ಪಾಕ್ ಉದ್ವಿಗ್ನತೆ: ಯುದ್ಧದಲ್ಲಿ ಅಮೆರಿಕ ಭಾಗಿಯಾಗುವುದಿಲ್ಲ; ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್

ಭಾರತ ಮತ್ತು ಪಾಕಿಸ್ತಾನವನ್ನು ನಾವು ನಿಯಂತ್ರಿಸಲು ಸಾಧ್ಯವಿಲ್ಲ. ಆದರೆ, ಎರಡೂ ದೇಶಗಳಿಂದ ಪರಮಾಣು ದಾಳಿಯಾದರೆ ಉಂಟಾಗುವ ಸಮಸ್ಯೆಗಳ ಬಗ್ಗೆ ನಮಗೆ ಕಳವಳವಿದೆ ಎಂದು ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಗುರುವಾರ ಹೇಳಿದ್ದಾರೆ.

ನ್ಯೂಯಾರ್ಕ್: ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ, ಯುದ್ಧದಲ್ಲಿ ಭಾಗಿಯಾಗುವುದಿಲ್ಲ, ಮೂಲಭೂತವಾಗಿ ನಮಗೂ ಇದಕ್ಕೂ ಸಂಬಂಧವಿಲ್ಲ ಎಂದು ಅಮೆರಿಕ ಹೇಳಿದೆ.

ಭಾರತ ಮತ್ತು ಪಾಕಿಸ್ತಾನವನ್ನು ನಾವು ನಿಯಂತ್ರಿಸಲು ಸಾಧ್ಯವಿಲ್ಲ. ಆದರೆ, ಎರಡೂ ದೇಶಗಳಿಂದ ಪರಮಾಣು ದಾಳಿಯಾದರೆ ಉಂಟಾಗುವ ಸಮಸ್ಯೆಗಳ ಬಗ್ಗೆ ನಮಗೆ ಕಳವಳವಿದೆ. ಪರಮಾಣು ಶಸ್ತ್ರಸಜ್ಜಿತ ಉಭಯ ರಾಷ್ಟ್ರಗಳ ಉದ್ವಿಗ್ನತೆಯನ್ನು ಕಡಿಮೆ ಮಾಡಲು ನಾವು ಪ್ರಯತ್ನಿಸಬಹುದು ಎಂದು ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಗುರುವಾರ ಫಾಕ್ಸ್ ನ್ಯೂಸ್‌ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಎರಡು ಪರಮಾಣು ಶಕ್ತಿಗಳು ಡಿಕ್ಕಿ ಹೊಡೆದು ಉಂಟಾಗುವ ದೊಡ್ಡ ಸಂಘರ್ಷದ ಬಗ್ಗೆ ನಾವು ಕಳವಳಗೊಂಡಿದ್ದೇವೆ. ಸಾಧ್ಯವಾದಷ್ಟು ಬೇಗ ಉದ್ವಿಗ್ನತೆ ಕುಗ್ಗಲಿ ಎಂದು ಅಮೆರಿಕ ಬಯಸುತ್ತದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಹೇಳಿದ್ದಾರೆ.

'ನಾವು ಯಾವ ದೇಶವನ್ನೂ ನಿಯಂತ್ರಿಸಲು ಸಾಧ್ಯವಿಲ್ಲ. ಮೂಲಭೂತವಾಗಿ, ಭಾರತವು ಪಾಕಿಸ್ತಾನದ ಮೇಲೆ ತನ್ನ ಹಿಡಿತವನ್ನು ಹೊಂದಿದೆ. ಪಾಕಿಸ್ತಾನವು ಭಾರತಕ್ಕೆ ಪ್ರತಿಕ್ರಿಯಿಸಿದೆ. ಈ ಸಮಯದಲ್ಲಿ ಉದ್ವಿಗ್ನತೆಯನ್ನು ಕಡಿಮೆ ಮಾಡಲು ನಾವು ಏನೆಲ್ಲ ಮಾಡಲು ಸಾಧ್ಯವೋ ಅದನ್ನು ಮಾಡುತ್ತೇವೆ. ಆದರೆ, ನಾವು ಈ ಯುದ್ಧದಲ್ಲಿ ಭಾಗಿಯಾಗುವುದಿಲ್ಲ. ಅದು ನಮಗೆ ಸಂಬಂಧಿಸದ ವಿಚಾರವಾಗಿದೆ. ಅಮೆರಿಕದ ನಿಯಂತ್ರಣ ಸಾಮರ್ಥ್ಯದೊಂದಿಗೆ ಯಾವುದೇ ಸಂಬಂಧವನ್ನು ಹೊಂದಿಲ್ಲ' ಎಂದು ವ್ಯಾನ್ಸ್ ಹೇಳಿದ್ದಾರೆ.

'ಶಸ್ತ್ರಾಸ್ತ್ರವನ್ನು ತ್ಯಜಿಸುವಂತೆ ಅಮೆರಿಕವು ಭಾರತಕ್ಕಾಗಲೀ ಅಥವಾ ಪಾಕಿಸ್ತಾನಕ್ಕಾಗಲೀ ಹೇಳಲು ಸಾಧ್ಯವಿಲ್ಲ. ಆದ್ದರಿಂದ ನಾವು ರಾಜತಾಂತ್ರಿಕ ಮಾರ್ಗಗಳ ಮೂಲಕವೇ ಈ ವಿಷಯವನ್ನು ತೆಗೆದುಕೊಳ್ಳುತ್ತೇವೆ. ಇದು ಪ್ರಾದೇಶಿಕ ಸಂಘರ್ಷವಾಗುವಷ್ಟು ಅಥವಾ ಪರಮಾಣು ಸಂಘರ್ಷವಾಗಿ ಬದಲಾಗದಿರಲಿ ಎಂಬುದು ನಮ್ಮ ಆಶಯ ಮತ್ತು ನಿರೀಕ್ಷೆಯಾಗಿದೆ. ಆದರೆ, ಖಂಡಿತವಾಗಿಯೂ, ನಾವು ಈ ಬಗ್ಗೆ ಚಿಂತಿತರಾಗಿದ್ದೇವೆ' ಎಂದರು.

'ಭಾರತ ಮತ್ತು ಪಾಕಿಸ್ತಾನದಲ್ಲಿನ ರಾಜತಾಂತ್ರಿಕ ಮುಖ್ಯಸ್ಥರು ಪರಮಾಣು ಯುದ್ಧವಾಗಿ ಬದಲಾಗದಂತೆ ನೋಡಿಕೊಳ್ಳುತ್ತಾರೆ ಎಂದು ನಾನು ಭಾವಿಸುತ್ತೇನೆ. ಒಂದು ವೇಳೆ ಅಣ್ವಸ್ತ್ರ ಯುದ್ಧವಾದರೆ, ಅದು ವಿನಾಶಕಾರಿಯಾಗಿರಲಿದೆ. ಹೀಗಾಗಿ, ಅದು ಸಂಭವಿಸುತ್ತದೆ ಎಂದು ನಾವು ಭಾವಿಸುವುದಿಲ್ಲ' ಎಂದು ಅವರು ಹೇಳಿದರು.

ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವಿಗೀಡಾದ ವೇಳೆ ವ್ಯಾನ್ಸ್, ಎರಡನೇ ಮಹಿಳೆ ಉಷಾ ವ್ಯಾನ್ಸ್ ಮತ್ತು ಅವರ ಮೂವರು ಮಕ್ಕಳು ಭಾರತಕ್ಕೆ ಭೇಟಿ ನೀಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಧರ್ಮಸ್ಥಳ ಬುರುಡೆ ಪ್ರಕರಣ: ಸಾಕ್ಷಿ-ದೂರುದಾರ ಚಿನ್ನಯ್ಯನಿಗೆ ಜಾಮೀನು ಮಂಜೂರು

KSCA ಅಧ್ಯಕ್ಷರಾಗಿ ಕನ್ನಡಿಗ ವೆಂಕಟೇಶ್ ಪ್ರಸಾದ್ ಅವಿರೋಧ ಆಯ್ಕೆ!

12 ಸಾವಿರ ವರ್ಷಗಳಲ್ಲೇ ಮೊದಲು: ಹೈಲಿ ಗುಬ್ಬಿ ಜ್ವಾಲಾಮುಖಿ ಸ್ಫೋಟ; ಭಾರತ ಸೇರಿ ಹಲವು ದೇಶಗಳ ವಿಮಾನಗಳ ಮಾರ್ಗ ಬದಲಾವಣೆ!

"ಧರ್ಮ ಗ್ರಂಥಗಳಲ್ಲಿ ಧ್ವಜಾರೋಹಣದ ಉಲ್ಲೇಖ ಇಲ್ಲ": ರಾಮ ಮಂದಿರದಲ್ಲಿ ಕೇಸರಿ ಧ್ವಜಾರೋಹಣಕ್ಕೆ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತೆ ತಗಾದೆ!

ಕಾಂಗ್ರೆಸ್‌ನಲ್ಲಿ ಅವರ ಶಾಸಕರನ್ನ ಅವರೇ ಖರೀದಿ ಮಾಡುತ್ತಿದ್ದಾರೆ; ಒಬ್ಬರಿಗೆ 100 ಕೋಟಿ ರೂ ಆಫರ್‌; ಕಾರು, ಫ್ಲ್ಯಾಟು ಗಿಫ್ಟು!

SCROLL FOR NEXT