ರಷ್ಯಾ ಅಧ್ಯಕ್ಷ ಕ್ಸಿ- ಜಿನ್ ಪಿಂಗ್ 
ವಿದೇಶ

ಭಾರತ ಮತ್ತು ಪಾಕಿಸ್ತಾನ ಶಾಂತಿ, ಸಂಯಮದಿಂದ ವರ್ತಿಸಬೇಕು; ಚೀನಾ ಒತ್ತಾಯ

ಭಾರತ ಮತ್ತು ಪಾಕಿಸ್ತಾನದ ನಡುವಿನ ಸದ್ಯದ ಪರಿಸ್ಥಿತಿಯನ್ನು ಚೀನಾ ಸೂಕ್ಷ್ಮವಾಗಿ ಗಮನಿಸುತ್ತಿದೆ ಮತ್ತು ಉಭಯ ದೇಶಗಳ ನಡುವಿನ ಉದ್ವಿಗ್ನತೆ ಉಲ್ಬಣಗೊಳ್ಳುವಿಕೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದೆ ಎಂದು ಚೀನಾ ವಿದೇಶಾಂಗ ಸಚಿವಾಲಯದ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಬೀಜಿಂಗ್: ಭಾರತ ಮತ್ತು ಪಾಕಿಸ್ತಾನಗಳ ನಡುವಿನ ಮಿಲಿಟರಿ ಸಂಘರ್ಷ ಉಲ್ಬಣಗೊಳ್ಳುತ್ತಿರುವ ವರದಿಗಳ ಮಧ್ಯೆ, ಶಾಂತಿ ಮತ್ತು ಸಂಯಮವನ್ನು ಕಾಯ್ದುಕೊಳ್ಳಬೇಕು ಮತ್ತು ಉಭಯ ದೇಶಗಳು ಶಾಂತಿಯುತವಾಗಿ ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದು ಚೀನಾ ಶನಿವಾರ ಒತ್ತಾಯಿಸಿದೆ.

ಭಾರತ ಮತ್ತು ಪಾಕಿಸ್ತಾನದ ನಡುವಿನ ಸದ್ಯದ ಪರಿಸ್ಥಿತಿಯನ್ನು ಚೀನಾ ಸೂಕ್ಷ್ಮವಾಗಿ ಗಮನಿಸುತ್ತಿದೆ ಮತ್ತು ಉಭಯ ದೇಶಗಳ ನಡುವಿನ ಉದ್ವಿಗ್ನತೆ ಉಲ್ಬಣಗೊಳ್ಳುವಿಕೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದೆ ಎಂದು ಚೀನಾ ವಿದೇಶಾಂಗ ಸಚಿವಾಲಯದ ಹೇಳಿಕೆಯಲ್ಲಿ ತಿಳಿಸಲಾಗಿದೆ.

'ಶಾಂತಿ ಮತ್ತು ಸ್ಥಿರತೆಯ ವಿಶಾಲ ಹಿತಾಸಕ್ತಿಯಲ್ಲಿ ಕಾರ್ಯನಿರ್ವಹಿಸಲು, ಸಂಯಮ ಕಾಪಾಡಿಕೊಳ್ಳಲು, ಶಾಂತಿಯುತ ಮಾರ್ಗಗಳ ಮೂಲಕ ಸಮಸ್ಯೆಯ ಇತ್ಯರ್ಥದ ಹಾದಿಗೆ ಮರಳಲು ಮತ್ತು ಉದ್ವಿಗ್ನತೆಯನ್ನು ಮತ್ತಷ್ಟು ಹೆಚ್ಚಿಸುವ ಯಾವುದೇ ಕ್ರಮದಿಂದ ದೂರವಿರಲು ನಾವು ಎರಡೂ ಕಡೆಯವರನ್ನು ಬಲವಾಗಿ ಒತ್ತಾಯಿಸುತ್ತೇವೆ' ಎಂದು ಸಚಿವಾಲಯದ ವಕ್ತಾರರು ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷ ಉಲ್ಬಣಗೊಳ್ಳುತ್ತಿರುವ ವರದಿಗಳು ಮತ್ತು ಮಿತ್ರ ರಾಷ್ಟ್ರ ಎಂದು ಕರೆಯುವ ಪಾಕಿಸ್ತಾನದ ಕುರಿತಾದ ಪ್ರಶ್ನೆಗೆ ಉತ್ತರಿಸಿದ ಅವರು, 'ಭಾರತ ಮತ್ತು ಪಾಕಿಸ್ತಾನ ಎರಡರ ಮೂಲಭೂತ ಹಿತಾಸಕ್ತಿಗೆ ಮತ್ತು ಸ್ಥಿರ ಮತ್ತು ಶಾಂತಿಯುತ ಪ್ರದೇಶಕ್ಕೆ ಇದು ಮುಖ್ಯವಾಗಿರುತ್ತದೆ. ಅಂತರರಾಷ್ಟ್ರೀಯ ಸಮುದಾಯ ಕೂಡ ಇದನ್ನೇ ನೋಡಲು ಆಶಿಸುತ್ತಿದೆ. ಈ ನಿಟ್ಟಿನಲ್ಲಿ ಚೀನಾ ರಚನಾತ್ಮಕ ಪಾತ್ರವನ್ನು ವಹಿಸುವುದನ್ನು ಮುಂದುವರಿಸಲು ಸಿದ್ಧವಾಗಿದೆ' ಎಂದು ಅದು ಹೇಳಿದೆ.

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಚೀನಾ ಖಂಡಿಸಿದ್ದು, ಆದರೆ ಪರಿಸ್ಥಿತಿಯನ್ನು ಮತ್ತಷ್ಟು ಉಲ್ಬಣಗೊಳಿಸದಂತೆ ಮತ್ತು ನ್ಯಾಯಯುತ ಮತ್ತು ಪಕ್ಷಪಾತವಿಲ್ಲದ ತನಿಖೆಗೆ ಒತ್ತಾಯಿಸಿತು.

ಏಪ್ರಿಲ್ 22ರಂದು ನಡೆದ ಪಹಲ್ಗಾಮ್ ದಾಳಿಗೆ ಪ್ರತಿಯಾಗಿ ಭಾರತೀಯ ಸಶಸ್ತ್ರ ಪಡೆಗಳು ಬುಧವಾರ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ದಲ್ಲಿನ ಭಯೋತ್ಪಾದಕ ನೆಲೆಗಳ ಮೇಲೆ ದಾಳಿ ನಡೆಸಿದ ನಂತರ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಹೆಚ್ಚಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

US tariff deadline: ಅಮೆರಿಕದ ಶೇ. 50 ರಷ್ಟು ಸುಂಕ ಆಗಸ್ಟ್ 27 ರಿಂದ ಜಾರಿ; ಮಂಗಳವಾರ ಮಹತ್ವದ PMO ಸಭೆ; ಮೋದಿ ಹೇಳಿದ್ದೇನು? Video

SCROLL FOR NEXT