ಬಂಡೆಯಿಂದ ಉರುಳಿಬಿದ್ದ ಬಸ್ 
ವಿದೇಶ

ಶ್ರೀಲಂಕಾ: 100 ಮೀ ಆಳಕ್ಕೆ ಉರುಳಿಬಿದ್ದ ಬಸ್; 21 ಮಂದಿ ಸಾವು

ರಾಜ್ಯ ಸಾರಿಗೆ ಸಂಸ್ಥೆಗೆ ಸೇರಿದ ಬಸ್, ದಕ್ಷಿಣ ಯಾತ್ರಾ ಸ್ಥಳವಾದ ಕತರಗಮದಿಂದ ವಾಯುವ್ಯ ಪಟ್ಟಣವಾದ ಕುರುನಗರಕ್ಕೆ ತೆರಳುತ್ತಿತ್ತು.

ಕೊಲಂಬೊ: ಶ್ರೀಲಂಕಾದಲ್ಲಿ ಭಾನುವಾರ ಪ್ರಯಾಣಿಕರ ಬಸ್ಸೊಂದು ಬಂಡೆಯಿಂದ ಉರುಳಿ ಬಿದ್ದ ಪರಿಣಾಮ ಕನಿಷ್ಠ 21 ಜನರು ಸಾವಿಗೀಡಾಗಿದ್ದು, 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಧ್ಯ ಪ್ರಾಂತ್ಯದ ಕೋಟ್ಮಲೆಯಲ್ಲಿ ಬಸ್ ಚಾಲಕ ಗುಡ್ಡಗಾಡು ಪ್ರದೇಶದಲ್ಲಿ ಎಡ ತಿರುವು ತೆಗೆದುಕೊಳ್ಳಲು ಪ್ರಯತ್ನಿಸಿದಾಗ ಈ ಅಪಘಾತ ಸಂಭವಿಸಿದೆ.

ರಾಜ್ಯ ಸಾರಿಗೆ ಸಂಸ್ಥೆಗೆ ಸೇರಿದ ಬಸ್, ದಕ್ಷಿಣ ಯಾತ್ರಾ ಸ್ಥಳವಾದ ಕತರಗಮದಿಂದ ವಾಯುವ್ಯ ಪಟ್ಟಣವಾದ ಕುರುನಗರಕ್ಕೆ ತೆರಳುತ್ತಿತ್ತು. ಬಸ್ಸಿನಲ್ಲಿ 75 ಪ್ರಯಾಣಿಕರು ಇದ್ದರು. ಈ ವೇಳೆ ಬಂಡೆಯಿಂದ 100 ಮೀಟರ್ ಆಳಕ್ಕೆ ಉರುಳಿಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತದಲ್ಲಿ 21 ಜನರು ಸಾವಿಗೀಡಾಗಿದ್ದಾರೆ. ದುರಂತದಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಸಾರಿಗೆ ಮತ್ತು ಹೆದ್ದಾರಿಗಳ ಉಪ ಸಚಿವ ಪ್ರಸನ್ನ ಗುಣಸೇನ ತಿಳಿಸಿದ್ದಾರೆ.

ಶ್ರೀಲಂಕಾದಲ್ಲಿ ಮಾರಣಾಂತಿಕ ಬಸ್ ಅಪಘಾತಗಳು ಸಾಮಾನ್ಯವಾಗಿವೆ. ಅಜಾಗರೂಕ ಚಾಲನೆ ಮತ್ತು ಕಳಪೆ ನಿರ್ವಹಣೆಯ ರಸ್ತೆಗಳಿಂದಾಗಿ ಹೆಚ್ಚಾಗಿ ಅಪಘಾತಗಳು ಸಂಭವಿಸುತ್ತವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

7ನೇ ದಿನಕ್ಕೆ ಕಾಲಿಟ್ಟ ಇಂಡಿಗೋ ಬಿಕ್ಕಟ್ಟು; ಬೆಂಗಳೂರಿನಲ್ಲಿ 127 ವಿಮಾನ ರದ್ದು; ಮುಂಬೈ, ದೆಹಲಿಯಲ್ಲೂ ಇದೆ ಕಥೆ!

ವಂದೇ ಮಾತರಂ 150ನೇ ವಾರ್ಷಿಕೋತ್ಸವ: ಲೋಕಸಭೆಯಲ್ಲಿಂದು ಚರ್ಚೆ, ಎಲ್ಲರ ಚಿತ್ತ ಪ್ರಧಾನಿ ಮೋದಿಯತ್ತ

ಬೆಳಗಾವಿ ಚಳಿಗಾಲ ಅಧಿವೇಶನ: ಸರ್ಕಾರ-ವಿಪಕ್ಷಗಳ ನಡುವೆ ಜಟಾಪಟಿ ಸಾಧ್ಯತೆ, ಅವಿಶ್ವಾಸ ನಿರ್ಣಯ ಮಂಡಿಸಲು BJP ಮುಂದು..!

ಪರಪ್ಪನ ಅಗ್ರಹಾರ: ಸಹ ಕೈದಿಗೆ ನಟ ದರ್ಶನ್ ಕಿರುಕುಳ?, ಸೆಲ್ ಬಳಿ ಕಟ್ಟೆಚ್ಚರ!: ವರದಿ

'ಮುಖ್ಯಮಂತ್ರಿಗಳೇ ಗಮನ ಕೊಡಿ': ಬಸ್ ಇಲ್ಲ.. ನಿತ್ಯ ಶಾಲೆಗೆ ಕಾಡಿನಲ್ಲಿ 14 ಕಿ.ಮೀ ನಡೆದೇ ಸಾಗುವ ವಿದ್ಯಾರ್ಥಿಗಳು!

SCROLL FOR NEXT