ಸಂಭ್ರಮಾಚರಣೆಯಲ್ಲಿ ಶಾಹಿದ್ ಅಫ್ರಿದಿ 
ವಿದೇಶ

Operation Sindoor: 'ಭಾರತದ ವಿರುದ್ಧ ಪಾಕ್ ಸೇನೆಗೆ ಜಯ'..; ಪಾಕ್ ಕ್ರಿಕೆಟಿಗ Shahid Afridi ವಿಜಯೋತ್ಸವ ರ‍್ಯಾಲಿ!

ಪಹಲ್ಗಾಮ್ ಉಗ್ರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆ ಬಳಿಕ ಭಾರತ ಮತ್ತು ಪಾಕಿಸ್ತಾನ ನಡುವೆ ನಡೆದ ಸೇನಾ ಸಂಘರ್ಷದಲ್ಲಿ ಪಾಕಿಸ್ತಾನ ಸೇನೆ ಜಯಭೇರಿ ಭಾರಿಸಿದೆ...

ಇಸ್ಲಾಮಾಬಾದ್: ಕೆಳಗೆ ಬಿದ್ರೂ ಮೀಸೆ ಮಣ್ಣಾಗಲಿಲ್ಲ ಎನ್ನುವಂತೆ ಭಾರತೀಯ ಸೇನೆಯಿಂದ ಮರ್ಮಾಘಾತಕ್ಕೆ ತುತ್ತಾಗಿರುವ ಪಾಕಿಸ್ತಾನ ಇದೀಗ ಅದನ್ನು ಮರೆಮಾಚುವ ಪ್ರಯತ್ನವಾಗಿ ವಿಜಯೋತ್ಸವ ರ‍್ಯಾಲಿ ಹಮ್ಮಿಕೊಂಡಿದೆ.

ಪಹಲ್ಗಾಮ್ ಉಗ್ರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆ ಬಳಿಕ ಭಾರತ ಮತ್ತು ಪಾಕಿಸ್ತಾನ ನಡುವೆ ನಡೆದ ಸೇನಾ ಸಂಘರ್ಷದಲ್ಲಿ ಪಾಕಿಸ್ತಾನ ಸೇನೆ ಜಯಭೇರಿ ಭಾರಿಸಿದೆ ಎಂದು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶಾಹಿದ್ ಅಫ್ರಿದಿ ವಿಜಯೋತ್ಸವ ರ‍್ಯಾಲಿ ನಡೆಸಿರುವ ವಿಡಿಯೋ ವೈರಲ್ ಆಗುತ್ತಿದೆ.

ಶಾಹಿದ್ ಅಫ್ರಿದಿ ಕರಾಚಿಯಲ್ಲಿ ಈ ವಿಜಯೋತ್ಸವ ರ‍್ಯಾಲಿಯಲ್ಲಿ ಪಾಲ್ಗೊಂಡಿದ್ದು, ಸಶಸ್ತ್ರ ಪಡೆಗಳೊಂದಿಗೆ ಒಗ್ಗಟ್ಟನ್ನು ಪ್ರದರ್ಶಿಸಲು ರ‍್ಯಾಲಿ ನಡೆಸಿದ್ದಾರೆ. ರ‍್ಯಾಲಿ ವೇಳೆ ಶಾಹಿದ್ ಅಫ್ರಿದಿ ಪಾಕಿಸ್ತಾನದ ಸಶಸ್ತ್ರ ಪಡೆಗಳನ್ನು ಶ್ಲಾಘಿಸಿದ್ದು, ಪಾಕಿಸ್ತಾನದ ಜನರು ತಮ್ಮ ಸೈನ್ಯದೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ನಿಂತಿದ್ದಾರೆ. ಭಾರತದ ವಿರುದ್ಧ ಪಾಕಿಸ್ತಾನಕ್ಕೆ ಗೆಲುವು ನೀಡಿದ ಸರ್ವಶಕ್ತನಾದ ಅಲ್ಲಾಹನಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.

ಈ ರ‍್ಯಾಲಿಯು ಯುದ್ಧದ ಆಚರಣೆಯಲ್ಲ, ಒಗ್ಗಟ್ಟಿನ ಶಾಂತಿಯುತ ಪ್ರದರ್ಶನವಾಗಿದೆ. ಪಾಕಿಸ್ತಾನ ಶಾಂತಿಗೆ ಬದ್ಧವಾಗಿದೆ. ಭಾರತದ ಆಕ್ರಮಣಕಾರಿ ನೀತಿಗಳು ವಿರುದ್ಧ ಪರಿಣಾಮ ಬೀರಿವೆ, ಇದು ಪಾಕಿಸ್ತಾನವನ್ನು ಪ್ರಚೋದಿಸಿದ್ದಕ್ಕೆ ಭಾರತಕ್ಕೆ ಆದ ತಕ್ಕಶಾಸ್ತಿ ಎಂದು ಆಫ್ರಿದಿ ಕಿಡಿಕಾರಿದ್ದಾರೆ.

ಇದೇ ವೇಳೆ ತಪ್ಪು ಮಾಹಿತಿಯನ್ನು ಹರಡಲು ಮತ್ತು ಸುಳ್ಳು ರಾಷ್ಟ್ರೀಯತೆಯನ್ನು ಪ್ರಚೋದಿಸಲು ಭಾರತೀಯ ಮಾಧ್ಯಮಗಳನ್ನು ಅಫ್ರಿದಿ ಟೀಕಿಸಿದರು. ಭಾರತದ ಪ್ರಧಾನಿ ಮೋದಿಯವರ ಯುದ್ಧೋನ್ಮಾದವು ಭಾರತವನ್ನು ಜಾಗತಿಕವಾಗಿ ಪ್ರತ್ಯೇಕಿಸಿದೆ. ಭಾರತೀಯ ಸೇನಾ ಪಡೆಗಳು ಮಕ್ಕಳು ಸೇರಿದಂತೆ ನಾಗರಿಕರನ್ನು ಮತ್ತು ಪಾಕಿಸ್ತಾನದೊಳಗಿನ ಧಾರ್ಮಿಕ ಪ್ರದೇಶಗಳನ್ನು ಗುರಿಯಾಗಿಸಿಕೊಂಡಿವೆ ಎಂದು ಅವರು ಹೇಳಿದರು.

ಪಾಕಿಸ್ತಾನವು ಬಹಳ ಹಿಂದಿನಿಂದಲೂ ಭಯೋತ್ಪಾದನೆಯ ಬಲಿಪಶುವಾಗಿದೆ ಮತ್ತು ಉಗ್ರವಾದದ ವಿರುದ್ಧದ ಹೋರಾಟದಲ್ಲಿ ನೂರಾರು ಜೀವಗಳನ್ನು ಕಳೆದುಕೊಂಡಿದೆ. ಭಾರತದ ವಿರುದ್ಧದ ಬನ್ಯನ್-ಅನ್-ಮರ್ಸೂಸ್ ಕಾರ್ಯಾಚರಣೆಯಲ್ಲಿ ಪಾಕಿಸ್ತಾನ ಸಶಸ್ತ್ರ ಪಡೆಗಳು ತಮ್ಮ ಶಕ್ತಿ ಮತ್ತು ಸ್ಥಿತಿಸ್ಥಾಪಕತ್ವವನ್ನು ಸಾಬೀತುಪಡಿಸಿವೆ ಎಂದು ಅಫ್ರಿದಿ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

SCROLL FOR NEXT