ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 
ವಿದೇಶ

ಭಾರತ- ಪಾಕಿಸ್ತಾನ ಕದನ ವಿರಾಮ: ಪರಮಾಣು ಸಂಘರ್ಷವನ್ನು ನಾವು ತಡೆದಿದ್ದೇವೆ- ಕ್ರೆಡಿಟ್ ತೆಗೆದುಕೊಂಡ ಡೊನಾಲ್ಡ್ ಟ್ರಂಪ್!

ಭಾರತ-ಪಾಕಿಸ್ತಾನ ವಿಚಾರದಲ್ಲಿ ಮೂರನೇ ವ್ಯಕ್ತಿಯ ಮಧ್ಯಸ್ಥಿಕೆ ಬಗ್ಗೆ ವಿರೋಧ ಪಕ್ಷ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿದೆ.

ವಾಷಿಂಗ್ಟನ್: ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಭಾವ್ಯ ಪರಮಾಣು ಸಂಘರ್ಷವನ್ನು ಅಮೆರಿಕದ ಮಧ್ಯ ಪ್ರವೇಶಿಸಿ ತಡೆಹಿಡಿದಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ ಹೇಳಿದ್ದಾರೆ.

ನಾಲ್ಕು ರಾತ್ರಿ ಗಡಿಯಾಚೆಗೆ ನಡೆದ ಸೇನಾ ಕಾರ್ಯಾಚರಣೆ ನಂತರ ಉಭಯ ರಾಷ್ಟ್ರಗಳು ಕದನ ವಿರಾಮ ಒಪ್ಪಂದಕ್ಕೆ ಒಪ್ಪಿಗೆ ನೀಡಿದ ನಂತರ ಡೊನಾಲ್ಡ್ ಟ್ರಂಪ್ ಈ ರೀತಿಯ ಹೇಳಿಕೆ ನೀಡಿದ್ದಾರೆ.

ಶ್ವೇತ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಟ್ರಂಪ್, ಪರಮಾಣು ಸಂಘರ್ಷವನ್ನು ನಾವು ತಡೆದಿದ್ದೇವೆ. ಕೆಟ್ಟ ಪರಮಾಣು ಯುದ್ಧ ನಡೆದು ಲಕ್ಷಾಂತರ ಜನರು ಸಾವನ್ನಪ್ಪುವ ಸಾಧ್ಯತೆ ಇರುವುದಾಗಿ ನನಗೆ ಅನಿಸಿತು. ಹಾಗಾಗಿ ಅದರ ಬಗ್ಗೆ ನಾನು ತುಂಬಾ ಹೆಮ್ಮೆ ಪಡುತ್ತೇನೆ. ಬಿಕ್ಕಟ್ಟನ್ನು ಶಮನಗೊಳಿಸುವಲ್ಲಿ ಅಮೆರಿಕದ ರಾಜತಾಂತ್ರಿಕ ಪ್ರಯತ್ನಗಳು ನಿರ್ಣಾಯಕ ಪಾತ್ರ ವಹಿಸಿವೆ ಎಂದರು.

ಭಾರತ ಹಾಗೂ ಪಾಕಿಸ್ತಾನದೊಂದಿಗೆ ಸಾಕಷ್ಟು ವ್ಯಾಪಾರ ಮಾಡಲು ಹೊರಟ್ಟಿದ್ದೇವೆ. ಈಗ ಭಾರತದೊಂದಿಗೆ ಮಾತುಕತೆ ನಡೆಸುತ್ತಿದ್ದೇವೆ. ಶೀಘ್ರದಲ್ಲಿಯೇ ಪಾಕಿಸ್ತಾನದೊಂದಿಗೆ ಮಾತುಕತೆ ನಡೆಸಲಿದ್ದೇವೆ ಎಂದು ತಿಳಿಸಿದರು.

ಈ ಹಿಂದೆ ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ಫೋಸ್ಟ್ ಮಾಡುವ ಮೂಲಕ ಕದನ ವಿರಾಮದ ಮೊದಲ ಕ್ರೆಡಿಟ್ ನ್ನು ಟ್ರಂಪ್ ತೆಗೆದುಕೊಂಡಿದ್ದರು. ಸಾಮಾನ್ಯ ತಿಳುವಳಿಕೆ ಮತ್ತು ಅತ್ಯುತ್ತಮವಾಗಿ ನಡೆದುಕೊಂಡಿದ್ದಕ್ಕೆ ಎರಡೂ ದೇಶಗಳಿಗೆ ಅಭಿನಂದನೆಗಳು ಎಂದು ಹೆಡ್ ಮಾಸ್ಟರ್ ಟೋನ್ ನಲ್ಲಿ ಬರೆದುಕೊಂಡಿದ್ದರು.

ಕುತೂಹಲಕಾರಿ ಸಂಗತಿಯೆಂದರೆ, ಪಾಕಿಸ್ತಾನ ಅಥವಾ ಭಾರತದಿಂದ ಯಾವುದೇ ಅಧಿಕೃತ ಪ್ರಕಟಣೆ ಹೊರಬೀಳುವ ಮುನ್ನವೇ ಟ್ರಂಪ್ ಕದನ ವಿರಾಮ ಒಪ್ಪಂದ ಘೋಷಣೆ ಮಾಡಿದ್ದರು. ಇದು ತೀವ್ರ ಟೀಕೆಗಳಿಗೂ ಗುರಿಯಾಗಿದೆ.

ಭಾರತ-ಪಾಕಿಸ್ತಾನ ವಿಚಾರದಲ್ಲಿ ಮೂರನೇ ವ್ಯಕ್ತಿಯ ಮಧ್ಯಸ್ಥಿಕೆ ಬಗ್ಗೆ ವಿರೋಧ ಪಕ್ಷ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿದೆ. ಈ ವಿಚಾರದಲ್ಲಿ ಮೂರನೇ ವ್ಯಕ್ತಿ ಮಧ್ಯಪ್ರವೇಶಿಸಿದ್ದಕ್ಕೆ ಕಾಂಗ್ರೆಸ್, ಎಎಪಿ ಸೇರಿದಂತೆ ಹಲವು ವಿರೋಧ ಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರೆಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT