ಇಸ್ರೇಲ್ ವಾಯುದಾಳಿಯಲ್ಲಿ ಮಹಮದ್ ಸಿನ್ವರ್ ಸಾವು 
ವಿದೇಶ

Gaza ಆಸ್ಪತ್ರೆ ಮೇಲೆ Israel ಏರ್ ಸ್ಟ್ರೈಕ್; Hamas ಮುಖ್ಯಸ್ಥ Mohammed Sinwar ಸಾವು!

ಹಮಾಸ್‌ನ ಹಿರಿಯ ನಾಯಕ ಮುಹಮ್ಮದ್ ಸಿನ್ವಾರ್ ನನ್ನು ಗುರಿಯಾಗಿಸಿಕೊಂಡು ಮಂಗಳವಾರ ಸಂಜೆ ದಕ್ಷಿಣ ಗಾಜಾ ನಗರದ ಖಾನ್ ಯೂನಿಸ್ ಆಸ್ಪತ್ರೆ ಮೇಲೆ ಇಸ್ರೇಲಿ ಯುದ್ಧ ವಿಮಾನಗಳು ಪ್ರಬಲ ವೈಮಾನಿಕ ದಾಳಿ ನಡೆಸಿದ್ದವು.

ಟೆಲ್ ಅವೀವ್: ಗಾಜಾಪಟ್ಟಿಯಲ್ಲಿ ಇಸ್ರೇಲ್ ಸೇನೆ ವಾಯುದಾಳಿ ಮುಂದುವರೆದಿದ್ದು, ಈ ಬಾರಿ ಹಮಾಸ್ ಉಗ್ರ ಸಂಘಟನೆಯ ಮುಖ್ಯಸ್ಥ Mohammed Sinwar ನನ್ನೇ ಇಸ್ರೇಲ್ ಭದ್ರತಾ ಪಡೆಗಳು ಹೊಡೆದುರುಸಿವೆ ಎಂದು ತಿಳಿದುಬಂದಿದೆ.

ಈ ಹಿಂದೆ ಇದೇ ಇಸ್ರೇಲ್ ಪಡೆ ನಡೆಸಿದ್ದ ಡ್ರೋನ್ ದಾಳಿಯಲ್ಲಿ ಹಮಾಸ್ ಸಂಘಟನೆಯ ಅಂದಿನ ಮುಖ್ಯಸ್ಥ ಯಾಹ್ಯಾ ಸಿನ್ವರ್ ಹತನಾಗಿದ್ದ. ಅವನ ಸಾವಿನ ಬಳಿಕ ಹಮಾಸ್ ಉಗ್ರ ಸಂಘಟನೆಯ ನಾಯಕತ್ವವನ್ನು ಮಹಮದ್ ಸಿನ್ವರ್ ವಹಿಸಿಕೊಂಡಿದ್ದ. ಇದೀಗ ಮಹಮದ್ ಸಿನ್ವರ್ ನನ್ನೂ ಕೂಡ ಇಸ್ರೇಲ್ ಸೇನೆ ವಾಯುದಾಳಿಯಲ್ಲಿ ಹೊಡೆದುರುಳಿಸಿದೆ.

ಇಸ್ರೇಲಿ ಭದ್ರತಾ ಪಡೆಗಳ ಮೂಲಗಳ ಪ್ರಕಾರ, ಹಮಾಸ್‌ನ ಹಿರಿಯ ನಾಯಕ ಮುಹಮ್ಮದ್ ಸಿನ್ವಾರ್ ನನ್ನು ಗುರಿಯಾಗಿಸಿಕೊಂಡು ಮಂಗಳವಾರ ಸಂಜೆ ದಕ್ಷಿಣ ಗಾಜಾ ನಗರದ ಖಾನ್ ಯೂನಿಸ್ ಆಸ್ಪತ್ರೆ ಮೇಲೆ ಇಸ್ರೇಲಿ ಯುದ್ಧ ವಿಮಾನಗಳು ಪ್ರಬಲ ವೈಮಾನಿಕ ದಾಳಿ ನಡೆಸಿದ್ದವು.

ಯುರೋಪಿಯನ್ ಆಸ್ಪತ್ರೆಯ ಬಳಿಯ ಪ್ರದೇಶವನ್ನು ಈ ದಾಳಿ ಹೊಡೆದಿದೆ ಎಂದು ವರದಿಯಾಗಿದೆ. ಅಲ್ಲಿ ಹಮಾಸ್ ಕಮಾಂಡ್ ಸೆಂಟರ್ ಭೂಗತದಲ್ಲಿತ್ತು. ಇದೇ ಪ್ರದೇಶದ ಮೇಲೆ ಇಸ್ರೇಲ್ ವಾಯುದಾಳಿ ನಡೆಸಿದೆ ಎಂದು ಇಸ್ರೇಲಿ ಸೇನೆ ಹೇಳಿಕೊಂಡಿದೆ.

ಅಂತೆಯೇ ಈ ದಾಳಿಯಲ್ಲಿ ಆರು ಪ್ಯಾಲೆಸ್ಟೀನಿಯನ್ನರು ಸಾವನ್ನಪ್ಪಿದ್ದು, ಕನಿಷ್ಠ 40 ಜನರು ಗಾಯಗೊಂಡಿದ್ದಾರೆ ಎಂದು ಪ್ಯಾಲೆಸ್ಟೀನಿಯನ್ ಆರೋಗ್ಯ ಸಚಿವಾಲಯ ವರದಿ ಮಾಡಿದೆ.

ಯಾರು ಮಹಮದ್ ಸಿನ್ವರ್

ಮಹಮದ್ ಸಿನ್ವರ್ 2023ರಲ್ಲಿ ಇಸ್ರೇಲಿ ಪಡೆಗಳಿಂದ ಕೊಲ್ಲಲ್ಪಟ್ಟ ಮಾಜಿ ಹಮಾಸ್ ನಾಯಕ ಯಾಹ್ಯಾ ಸಿನ್ವರ್ ಅವರ ಕಿರಿಯ ಸಹೋದರ ಎನ್ನಲಾಗಿದೆ. ಯಾಹ್ಯಾ ಸಿನ್ವರ್ ಇಸ್ರೇಲ್ ನಲ್ಲಿ ಅಕ್ಟೋಬರ್ 7, 2023 ರಂದು ನಡೆದ ದಾಳಿಯ ಹಿಂದಿನ ಮಾಸ್ಟರ್ ಮೈಂಡ್ ಎನ್ನಲಾಗಿದೆ. ಇದೇ ಘಟನೆ ಹಾಲಿ ಇಸ್ರೇಲ್ ಸಂಘರ್ಷಕ್ಕೆ ಕಾರಣ ಎಂದು ಅಧಿಕಾರಿಗಳು ಹೇಳಿದ್ದಾರೆ.

ಆಸ್ಪತ್ರೆ ಮೇಲೆ ಸೇನಾ ದಾಳಿ ಸರಿಯಲ್ಲ

ಇದೇ ವೇಳೆ ಯುರೋಪಿಯನ್ ಆಸ್ಪತ್ರೆಯ ನರ್ಸಿಂಗ್ ಮುಖ್ಯಸ್ಥ ಡಾ. ಸಲೇಹ್ ಅಲ್ ಹ್ಯಾಮ್ಸ್ ಈ ಬಗ್ಗೆ ಮಾತನಾಡಿದ್ದು, 'ಆಸ್ಪತ್ರೆಯ ಅಂಗಳದಲ್ಲಿ ಬಹು ವೈಮಾನಿಕ ದಾಳಿಗಳು ಪರಿಣಾಮ ಬೀರಿವೆ ಎಂದು ಹೇಳಿದ್ದಾರೆ. ಪರಿಸ್ಥಿತಿಯನ್ನು "ದುರಂತ" ಎಂದು ಬಣ್ಣಿಸಿದ ಅವರು, ಕೆಲವು ವ್ಯಕ್ತಿಗಳು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ.

ಆಸ್ಪತ್ರೆ ಮೇಲೆ ಸೇನಾ ದಾಳಿ ಸರಿಯಲ್ಲ. ನಮ್ಮ ವೈದ್ಯಕೀಯ ತಂಡಗಳು ರೋಗಿಗಳನ್ನು ಆಸ್ಪತ್ರೆಯೊಳಗೆ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲು ಕೆಲಸ ಮಾಡುತ್ತಿವೆ ಎಂದು ಹೇಳಿದ್ದಾರೆ.

ಆದರೆ ಮಹಮದ್ ಸಿನ್ವರ್ ಸಾವಿನ ಕುರಿತು ಈ ವರೆಗೂ ಹಮಾಸ್ ಸಂಘಟನೆ ಯಾವುದೇ ಮಾಹಿತಿ ಹಂಚಿಕೊಂಡಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

SCROLL FOR NEXT