ಉಗ್ರ ಮಸೂದ್ ಅಜರ್ 
ವಿದೇಶ

ಪಾಕ್ ಕಳ್ಳಾಟ ಮತ್ತೆ ಬಯಲು: IMF ಸಾಲ ದುರ್ಬಳಕೆ? ಉಗ್ರ Masood Azhar ಕುಟುಂಬಕ್ಕೆ 14 ಕೋಟಿ ರೂ ಪರಿಹಾರ?

ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ ವೇಳೆ ಮಸೂದ್ ಅಜರ್ ನ ಉಗ್ರ ತರಬೇತಿ ಕೇಂದ್ರದ ಮೇಲೂ ದಾಳಿಯಾಗಿತ್ತು.

ನವದೆಹಲಿ: ಇತ್ತೀಚೆಗೆ ಭಾರತೀಯ ಸೇನೆ ನಡೆಸಿದ 'ಆಪರೇಷನ್ ಸಿಂಧೂರ' ಕಾರ್ಯಾಚರಣೆಯಲ್ಲಿ ತನ್ನ ಇಡೀ ಕುಟುಂಬವನ್ನು ಕಳೆದುಕೊಂಡ ಉಗ್ರ Masood Azhar ಕುಟುಂಬಕ್ಕೆ ಪಾಕಿಸ್ತಾನ ಸರ್ಕಾರ 14 ಕೋಟಿ ರೂ ಪರಿಹಾರ ನೀಡಲು ಮುಂದಾಗಿದೆ.

ಈ ಹಿಂದೆ ಭಾರತದ ಸೇನಾ ದಾಳಿಯಿಂದ ತನ್ನ ಮೂಲಭೂತ ಸೌಕರ್ಯಗಳು ನಾಶವಾಗಿದೆ ಎಂದು ಹೇಳಿ ಅತ್ತೂ ಕರೆದು ಅಂತಾರಾಷ್ಟ್ರೀಯ ಹಣಕಾಸು ನಿಧಿ (IMF)ನಿಂದ ನೂರಾರು ಬಿಲಿಯನ್ ಡಾಲರ್ ಹಣ ಸಾಲ ಪಡೆದುಕೊಂಡಿದ್ದ ಪಾಕಿಸ್ತಾನ ಇದೀಗ ಆ ಹಣವನ್ನು ದುರ್ಬಳಕೆ ಮಾಡಿಕೊಳ್ಳಲು ಮುಂದಾಗಿದೆ ಎಂದು ಹೇಳಲಾಗುತ್ತಿದೆ.

ಟ್ರಿಬ್ಯೂನ್ ಇಂಡಿಯಾದ ವರದಿಯ ಪ್ರಕಾರ, ಪಾಕಿಸ್ತಾನ ಸರ್ಕಾರ ಭಯೋತ್ಪಾದಕ ಮಸೂದ್ ಅಜರ್‌ಗೆ 14 ಕೋಟಿ ರೂಪಾಯಿ ಪರಿಹಾರ ನೀಡಬಹುದು ಎನ್ನಲಾಗಿದೆ. ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ ವೇಳೆ ಮಸೂದ್ ಅಜರ್ ನ ಉಗ್ರ ತರಬೇತಿ ಕೇಂದ್ರದ ಮೇಲೂ ದಾಳಿಯಾಗಿತ್ತು. ಭಾರತವು ಮಸೂದ್ ನ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ ನ ಬಹಾವಲ್ಪುರ್ ಪ್ರಧಾನ ಕಚೇರಿಯ ಮೇಲೆ ಭಾರತ ವಾಯುದಾಳಿ ನಡೆಸಿತ್ತು.

ಈ ವೇಳೆ ಮಸೂದ್ ಅಜರ್ ಕುಟುಂಬದ 14 ಸದಸ್ಯರು ಸಾವಿಗೀಡಾಗಿದ್ದರು. ಮೃತರಲ್ಲಿ ತನ್ನ ಅಕ್ಕ ಮತ್ತು ಆಕೆಯ ಪತಿ, ಸೋದರಳಿಯ ಮತ್ತು ಅವರ ಪತ್ನಿ, ಸೊಸೆ ಮತ್ತು ಕುಟುಂಬದ ಐದು ಮಕ್ಕಳು ಸೇರಿದ್ದಾರೆ.

ಈ ಘಟನೆ ಬಳಿಕ ಉಗ್ರ ಮಸೂದ್ ಅಜರ್ ಭಾರತದ ವಿರುದ್ಧ ಕತ್ತಿ ಮಸೆಯುತ್ತಿದ್ದು, ತನ್ನ ಉಗ್ರಗಾಮಿಗಳನ್ನು ಮುಂದಿಟ್ಟು ಕೊಂಡು ಯಾವಾಗ ಬೇಕಾದರೂ ಭಾರತದ ಮೇಲೆ ದಾಳಿಗೆ ಸಂಚು ರೂಪಿಸಬಹದು.

ಆದರೆ ಇದೇ ಸಂದರ್ಭದಲ್ಲೇ ಪಾಕಿಸ್ತಾನ ಸರ್ಕಾರ ಮಸೂದ್ ಅಜರ್ ಕುಟುಂಬಕ್ಕೆ 14 ಕೋಟಿ ರೂಪಾಯಿ ಪರಿಹಾರ ನೀಡಲು ಮುಂದಾಗಿರುವುದು ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.

ಮಸೂದ್ ಗೆ ಏಕೆ ಪಾಕ್ ಸರ್ಕಾರದ ಹಣ ನೀಡುತ್ತಿದೆ?

ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ್‌ನಲ್ಲಿ ಸಾವಿಗೀಡಾದವರಿಗೆ ಪಾಕಿಸ್ತಾನ ಸರ್ಕಾರ ತಲಾ 1 ಕೋಟಿ ರೂ ಪರಿಹಾರ ಘೋಷಣೆ ಮಾಡಿದೆ. ಅದರಂತೆ ಮಸೂದ್ ಅಜರ್ ಕುಟುಂಬದ 14 ಮಂದಿ ಸಾವನ್ನಪ್ಪಿದ್ದು, ಹೀಗಾಗಿ ತಲಾ 1 ಕೋಟಿ ರೂ ನಂತೆ ಮಸೂದ್ ಅಜರ್ ಕುಟುಂಬಕ್ಕೆ ಒಟ್ಟು 14 ಕೋಟಿ ರೂ ಪರಿಹಾರ ಸಿಗುವ ಸಾಧ್ಯತೆ ಇದೆ.

ಈ ರೀತಿಯಾಗಿ, ಪಾಕಿಸ್ತಾನ ಸರ್ಕಾರವು ಸಹಾಯದ ಹೆಸರಿನಲ್ಲಿ ಬಿಡುಗಡೆ ಮಾಡುವ ಹಣವು ಭಯೋತ್ಪಾದಕರು ಮತ್ತು ಅವರ ಕುಟುಂಬಗಳಿಗೆ ನೇರವಾಗಿ ಸಹಾಯ ಮಾಡುತ್ತದೆ. ಪಾಕಿಸ್ತಾನದ ಪ್ರಧಾನಿ ಕಚೇರಿ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ, 1 ಕೋಟಿ ರೂಪಾಯಿಗಳ ಸಹಾಯವನ್ನು ಘೋಷಿಸಲಾಗಿದೆ. ಸಹಾಯದ ಹೆಸರಿನಲ್ಲಿ ಬಿಡುಗಡೆಯಾದ ಈ ಮೊತ್ತದ ನೇರ ಲಾಭವನ್ನು ಈಗ ಮಸೂದ್ ಅಜರ್ ಮಾತ್ರ ಪಡೆಯಲಿದ್ದಾನೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ನಲ್ಲಿ 2 ವಾರ ಪೂರೈಸಿದ ಪ್ರತಿಭಟನೆ: ಸರ್ಕಾರಿ ಕಟ್ಟಡಗಳಿಗೆ ಬೆಂಕಿ, ಪ್ರತಿಭಟನಾಕಾರರಿಗೆ 'ಮರಣ ದಂಡನೆ' ಬೆದರಿಕೆ!

"Surely It's Time": ಕೊಹ್ಲಿ ನಿವೃತ್ತಿ ಬಗ್ಗೆ ದೊಡ್ಡ ಸಂದೇಶ ರವಾನಿಸಿದ ಉತ್ತಪ್ಪ!

'ಮನ್ರೇಗಾ ಬಚಾವೋ' ಸಂಗ್ರಾಮ: ಕಾಂಗ್ರೆಸ್ ಪಕ್ಷದಿಂದ ದೇಶಾದ್ಯಂತ 45 ದಿನಗಳ ಹೋರಾಟ ಆರಂಭ!

ಮಹಾರಾಷ್ಟ್ರದಲ್ಲಿ ಸಿಎಂ, ಡಿಸಿಎಂ ಮುಸುಕಿನ ಗುದ್ದಾಟ: ಅಜಿತ್ ಪವಾರ್ ವಿರುದ್ಧ ಫಡ್ನವೀಸ್ ಕಿಡಿ!

ಭಾಷಾ ಮಸೂದೆ ವಿರೋಧಿಸಿ ಸಿದ್ದರಾಮಯ್ಯ ಪತ್ರ: ಕೇರಳ ಸಿಎಂ ಸ್ಪಷ್ಟೀಕರಣ; ಪಿಣರಾಯಿ ವಿಜಯನ್ ಹೇಳಿದ್ದೇನು?

SCROLL FOR NEXT