ಸೈಫುಲ್ಲಾ ಖಾಲಿದ್ 
ವಿದೇಶ

ಬೆಂಗಳೂರಿನ IISC, RSS ಕಚೇರಿ ಮೇಲಿನ ದಾಳಿಯ ಮಾಸ್ಟರ್ ಮೈಂಡ್: ಪಾಕಿಸ್ತಾನದಲ್ಲಿ ಅಪರಿಚಿತರ ಗುಂಡೇಟಿಗೆ LeT ಕಮಾಂಡರ್ ಸೈಫುಲ್ಲಾ ಖಾಲಿದ್ ಬಲಿ!

ಖಾಲಿದ್ ಹಲವಾರು ವರ್ಷಗಳ ಕಾಲ ನೇಪಾಳದಲ್ಲಿ ನೆಲೆಸಿದ್ದನು. ಅಲ್ಲಿ ಆತ ಸುಳ್ಳು ಗುರುತಿನಡಿಯಲ್ಲಿ ವಾಸಿಸುತ್ತಿದ್ದನು.

ಭಾರತದಲ್ಲಿ ಮೂರು ಪ್ರಮುಖ ದಾಳಿಗಳ ಹಿಂದಿನ ಲಷ್ಕರ್‌ನ ಪ್ರಮುಖ ಭಯೋತ್ಪಾದಕ ಸೈಫುಲ್ಲಾ ಖಾಲಿದ್‌ನನ್ನು ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಹತ್ಯೆ ಮಾಡಲಾಗಿದೆ. ಕೆಲವು ಅಪರಿಚಿತ ಬಂಧೂಕುದಾರಿಗಳು ಆತನ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದರು. 2001ರಲ್ಲಿ ರಾಂಪುರದಲ್ಲಿ ಸಿಆರ್‌ಪಿಎಫ್ (CRPF) ಶಿಬಿರದ ಮೇಲಿನ ದಾಳಿ, 2005ರಲ್ಲಿ ಬೆಂಗಳೂರಿನ ಭಾರತೀಯ ವಿಜ್ಞಾನ ಕಾಂಗ್ರೆಸ್ (IISC) ಮೇಲಿನ ದಾಳಿ ಮತ್ತು 2006ರಲ್ಲಿ ನಾಗ್ಪುರದಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪ್ರಧಾನ ಕಚೇರಿಯ ಮೇಲಿನ ದಾಳಿಯ ಮೂರು ಪ್ರಮುಖ ದಾಳಿಗಳಲ್ಲಿ ಖಾಲಿದ್ ಪ್ರಮುಖ ಸಂಚುಕೋರನಾಗಿದ್ದನು. ಐದು ವರ್ಷಗಳ ಅವಧಿಯಲ್ಲಿ ನಡೆಸಲಾದ ಈ ದಾಳಿಗಳು ಅನೇಕ ಜೀವಗಳನ್ನು ಬಲಿ ತೆಗೆದುಕೊಂಡಿತ್ತು. ಭಾರತೀಯ ನೆಲದಲ್ಲಿ ಲಷ್ಕರ್-ಎ-ತೊಯ್ಬಾದ ಚಟುವಟಿಕೆಗಳಲ್ಲಿ ತೀವ್ರ ಹೆಚ್ಚಳಕ್ಕೆ ಕಾರಣವಾಯಿತು.

ಖಾಲಿದ್ ಹಲವಾರು ವರ್ಷಗಳ ಕಾಲ ನೇಪಾಳದಲ್ಲಿ ನೆಲೆಸಿದ್ದನು. ಅಲ್ಲಿ ಆತ ಸುಳ್ಳು ಗುರುತಿನಡಿಯಲ್ಲಿ ವಾಸಿಸುತ್ತಿದ್ದನು. ಅಲ್ಲದೆ ಸ್ಥಳೀಯ ಮಹಿಳೆ ನಗ್ಮಾ ಬಾನು ಎಂಬಾಕೆಯನ್ನು ವಿವಾಹವಾಗಿದ್ದನು. ನೇಪಾಳದವನಾದ ಈತ ಲಷ್ಕರ್-ಎ-ತೊಯ್ಬಾದ ಚಟುವಟಿಕೆಗಳನ್ನು ಸಂಘಟಿಸುತ್ತಿದ್ದನೆಂದು ನಂಬಲಾಗಿದೆ. ನೇಮಕಾತಿ ಮತ್ತು ಲಾಜಿಸ್ಟಿಕ್ಸ್‌ನಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದನು.

ಇತ್ತೀಚೆಗೆ, ಖಾಲಿದ್ ತನ್ನ ಅಡಗುತಾಣವನ್ನು ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಬದಿನ್ ಜಿಲ್ಲೆಯ ಮಟ್ಲಿಗೆ ಸ್ಥಳಾಂತರಿಸಿದ್ದನು. ಅಲ್ಲಿ ಆತ ವಿಶ್ವಸಂಸ್ಥೆಯಿಂದ ನಿಷೇಧಿಸಲ್ಪಟ್ಟ ಪಾಕಿಸ್ತಾನಿ ಭಯೋತ್ಪಾದಕ ಗುಂಪು ಲಷ್ಕರ್-ಎ-ತೈಬಾ ಮತ್ತು ಅದರ ಮತ್ತೊಂದು ಸಂಘಟನೆಯಾದ ಜಮಾತ್-ಉದ್-ದವಾಕ್ಕಾಗಿ ಕೆಲಸ ಮಾಡುವುದನ್ನು ಮುಂದುವರೆಸಿದ್ದನು. ಆತನ ಮುಖ್ಯ ಗಮನವು ಭಯೋತ್ಪಾದಕ ಕಾರ್ಯಾಚರಣೆಗಳಿಗೆ ನೇಮಕಾತಿ ಮತ್ತು ನಿಧಿಸಂಗ್ರಹಣೆಯಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT