ಡೊನಾಲ್ಡ್ ಟ್ರಂಪ್-ವ್ಲಾಡಿಮಿರ್ ಪುಟಿನ್  
ವಿದೇಶ

ರಷ್ಯಾ-ಉಕ್ರೇನ್ ಮಧ್ಯೆ 'ತಕ್ಷಣ' ಕದನ ವಿರಾಮ ಮಾತುಕತೆ ಆರಂಭ: ಡೊನಾಲ್ಡ್ ಟ್ರಂಪ್ ಹೇಳಿಕೆ

ಕದನ ವಿರಾಮದತ್ತ ಪ್ರಗತಿ ಸಾಧಿಸುವ ಭರವಸೆಯಲ್ಲಿ ಡೊನಾಲ್ಡ್ ಟ್ರಂಪ್ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಜೊತೆ ಮಾತುಕತೆ ನಡೆಸಿದ್ದಾರೆ.

ವಾಷಿಂಗ್ಟನ್: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಎರಡು ಗಂಟೆಗಳಿಗೂ ಹೆಚ್ಚು ಕಾಲ ನಡೆದ ಮಾತುಕತೆ ಅತ್ಯಂತ ಫಲಪ್ರದವಾಗಿತ್ತು. ರಷ್ಯಾ ಮತ್ತು ಉಕ್ರೇನ್ "ತಕ್ಷಣ" ಕದನ ವಿರಾಮ ಮಾತುಕತೆಗಳನ್ನು ಪ್ರಾರಂಭಿಸುತ್ತವೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ ಆಶಾವಾದ ವ್ಯಕ್ತಪಡಿಸಿದ್ದಾರೆ.

ಕದನ ವಿರಾಮದತ್ತ ಪ್ರಗತಿ ಸಾಧಿಸುವ ಭರವಸೆಯಲ್ಲಿ ಡೊನಾಲ್ಡ್ ಟ್ರಂಪ್ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಜೊತೆ ಮಾತುಕತೆ ನಡೆಸಿದ್ದಾರೆ.

ಅದಕ್ಕಾಗಿ ಷರತ್ತುಗಳನ್ನು ಎರಡೂ ದೇಶಗಳ ನಾಯಕರ ನಡುವೆ ಮಾತುಕತೆ ಮಾಡಲಾಗುತ್ತದೆ, ಬೇರೆ ಯಾರಿಗೂ ತಿಳಿದಿರದ ಮಾತುಕತೆಯ ವಿವರಗಳನ್ನು ಅವರು ತಿಳಿದಿದ್ದಾರೆ ಎಂದು ಟ್ರಂಪ್ ಸೋಷಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದಾರೆ.

https://truthsocial.com/@realDonaldTrump/posts/114535693441367601

ಉಕ್ರೇನ್ ನಲ್ಲಿ ನಡೆಯುತ್ತಿರುವ ಯುದ್ಧದ ಬಗ್ಗೆ ಅಮರಿಕ ತೀವ್ರ ಹತಾಶೆಗೊಂಡಿದೆ ಎಂದು ಶ್ವೇತಭವನ ಹೇಳಿದ ನಂತರ ಈ ಮಾತುಕತೆಗಳು ನಡೆದಿವೆ. ಹೋರಾಟವನ್ನು ಕೊನೆಗೊಳಿಸುವ ಬಗ್ಗೆ ಚರ್ಚಿಸುವುದನ್ನು ಮುಂದುವರಿಸಲು ರಷ್ಯಾ ಸಿದ್ಧವಾಗಿದೆ ಎಂದು ಪುಟಿನ್ ಹೇಳಿದರು, ಆದರೆ ಟ್ರಂಪ್ ಅವರೊಂದಿಗೆ ಬಹಳ ಮಾಹಿತಿಯುಕ್ತ ಮತ್ತು ಅತ್ಯಂತ ಸ್ಪಷ್ಟವಾದ ಸಂಭಾಷಣೆ ಎಂದು ಅವರು ಕರೆದಿದ್ದರಲ್ಲಿ ಯಾವುದೇ ಪ್ರಮುಖ ಪ್ರಗತಿ ಕಂಡುಬಂದಿಲ್ಲ ಎಂದರು.

ಭವಿಷ್ಯದ ಸಂಭಾವ್ಯ ಶಾಂತಿ ಒಪ್ಪಂದದ ಚೌಕಟ್ಟನ್ನು ವಿವರಿಸುವ ಮನವಿ ಪತ್ರ ಕುರಿತು ರಷ್ಯಾ ಉಕ್ರೇನ್‌ನೊಂದಿಗೆ ಪ್ರಸ್ತಾಪಿಸುತ್ತದೆ ಮತ್ತು ಕೆಲಸ ಮಾಡಲು ಸಿದ್ಧವಾಗಿದೆ ಎಂದರು.

ಫೆಬ್ರವರಿ 2022 ರಲ್ಲಿ ರಷ್ಯಾದ ಆಕ್ರಮಣದೊಂದಿಗೆ ಪ್ರಾರಂಭವಾದ ಯುದ್ಧವನ್ನು ಕೊನೆಗೊಳಿಸಲು ಅಮೆರಿಕ ಶತಾಯಗತಾಯ ಪ್ರಯತ್ನಿಸುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT