ಎಸ್ ಜೈಶಂಕರ್- ಡೊನಾಲ್ಡ್ ಟ್ರಂಪ್ online desk
ವಿದೇಶ

ಸಂಘರ್ಷವಿದ್ದಾಗ ಇತರ ರಾಷ್ಟ್ರಗಳಿಂದ ಕರೆ ಸಹಜ, ಆದರೆ ಕದನ ವಿರಾಮಕ್ಕೂ ಅಮೆರಿಕಾಗೂ ಸಂಬಂಧವಿಲ್ಲ: ಟ್ರಂಪ್ ಹೇಳಿಕೆಗೆ ಜೈಶಂಕರ್ ತಿರುಗೇಟು

ನೆದರ್ಲ್ಯಾಂಡ್ಸ್ ಮೂಲದ ಸುದ್ದಿ ಚಾನೆಲ್ NOS ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ವಿದೇಶಾಂಗ ಸಚಿವ ಎಸ್. ಜೈಶಂಕರ್, ಗುಂಡಿನ ದಾಳಿ ಮತ್ತು ಮಿಲಿಟರಿ ಕಾರ್ಯಾಚರಣೆಯನ್ನು ಭಾರತ ಮತ್ತು ಪಾಕಿಸ್ತಾನ ನೇರವಾಗಿ ಮಾತುಕತೆ ಮೂಲಕ ನಿಲ್ಲಿಸಲಾಗಿದೆ ಎಂದು ಹೇಳಿದ್ದಾರೆ.

ನವದೆಹಲಿ: ಭಾರತ-ಪಾಕ್ ನಡುವಿನ ಸಂಘರ್ಷ ಸ್ಥಿತಿಯನ್ನು ಶಮನ ಮಾಡುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿರುವ ಹೇಳಿಕೆಗಳು ಭಾರತ ಸರ್ಕಾರಕ್ಕೆ ಮುಜುಗರ ಉಂಟು ಮಾಡಿದೆ.

ಭಾರತ- ಪಾಕ್ ನಡುವಿನ ಯುದ್ಧ ತಡೆದಿದ್ದು ನಾನೇ ಎಂಬ ಹೇಳಿಕೆಗಳನ್ನು ಡೊನಾಲ್ಡ್ ಟ್ರಂಪ್ ನೀಡಿದ್ದರು. ಈ ವಿಷಯವಾಗಿ ಭಾರತ ಹಲವು ವೇದಿಕೆಗಳಲ್ಲಿ ಸ್ಪಷ್ಟನೆ ನೀಡಿದೆ. ಈಗ ಸ್ವತಃ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅಮೆರಿಕಾ ಕಾರಣಕ್ಕಾಗಿಯೇ ಭಾರತ- ಪಾಕ್ ನಡುವಿನ ಕದನ ವಿರಾಮ ಘೋಷಣೆಯಾಗಿಲ್ಲ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.

ನೆದರ್ಲ್ಯಾಂಡ್ಸ್ ಮೂಲದ ಸುದ್ದಿ ಚಾನೆಲ್ NOS ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ವಿದೇಶಾಂಗ ಸಚಿವ ಎಸ್. ಜೈಶಂಕರ್, ಗುಂಡಿನ ದಾಳಿ ಮತ್ತು ಮಿಲಿಟರಿ ಕಾರ್ಯಾಚರಣೆಯನ್ನು ಭಾರತ ಮತ್ತು ಪಾಕಿಸ್ತಾನ ನೇರವಾಗಿ ಮಾತುಕತೆ ಮೂಲಕ ನಿಲ್ಲಿಸಲಾಗಿದೆ ಎಂದು ಹೇಳಿದ್ದಾರೆ.

ಗುಂಡಿನ ದಾಳಿಯನ್ನು ನಿಲ್ಲಿಸಬೇಕಾದರೆ ಪಾಕಿಸ್ತಾನ ಭಾರತದ ಜನರಲ್‌ಗೆ ಕರೆ ಮಾಡಿ ಹೇಳಬೇಕು ಎಂದು ಅಮೆರಿಕ ಸೇರಿದಂತೆ ಪ್ರತಿಯೊಂದು ರಾಷ್ಟ್ರಕ್ಕೂ ಭಾರತ ಸ್ಪಷ್ಟಪಡಿಸಿದೆ ಎಂದು ಅವರು ಹೇಳಿದರು.

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ನನ್ನೊಂದಿಗೆ ಮಾತನಾಡಿದರು, ಮತ್ತು ಅಮೆರಿಕದ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತನಾಡಿದರು. ಎರಡು ರಾಷ್ಟ್ರಗಳು ಸಂಘರ್ಷದಲ್ಲಿ ತೊಡಗಿರುವಾಗ ರಾಷ್ಟ್ರಗಳು ಕರೆ ಮಾಡುವುದು ಸಹಜ ಎಂದು ಜೈಶಂಕರ್ ಒತ್ತಿ ಹೇಳಿದ್ದಾರೆ.

ಪಾಕಿಸ್ತಾನ ಸೇನೆಯ ನೇತೃತ್ವದಲ್ಲಿ ಎರಡೂ ಸೇನೆಗಳು ಪರಸ್ಪರ ಮಾತನಾಡಿಕೊಂಡವೇ ಎಂದು ಕೇಳಿದಾಗ, ಜೈಶಂಕರ್, "ಹೌದು, ಹಾಟ್‌ಲೈನ್ ಮೂಲಕ ಪರಸ್ಪರ ಮಾತನಾಡಲು ನಮಗೆ ಒಂದು ವ್ಯವಸ್ಥೆ ಇದೆ. ಆದ್ದರಿಂದ, ಮೇ 10 ರಂದು, ಪಾಕಿಸ್ತಾನ ಸೇನೆಯು ಗುಂಡು ಹಾರಿಸುವುದನ್ನು ನಿಲ್ಲಿಸಲು ಸಿದ್ಧ ಎಂದು ಸಂದೇಶವನ್ನು ಕಳುಹಿಸಿತು ಮತ್ತು ನಾವು ಅದಕ್ಕೆ ತಕ್ಕಂತೆ ಪ್ರತಿಕ್ರಿಯಿಸಿದೆವು" ಎಂದು ಹೇಳಿದ್ದಾರೆ.

ಏಪ್ರಿಲ್ 22 ರಂದು ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ 26 ನಾಗರಿಕರು ಸಾವನ್ನಪ್ಪಿದ ಪ್ರತೀಕಾರವಾಗಿ ಭಾರತ ಪ್ರಾರಂಭಿಸಿದ 'ಆಪರೇಷನ್ ಸಿಂಧೂರ್' ನಂತರ ಎರಡೂ ರಾಷ್ಟ್ರಗಳ ನಡುವಿನ ಸಂಘರ್ಷ ಸ್ಥಿತಿ ಕೊನೆಗೊಂಡಿತು.

ಭಾರತ ಮತ್ತು ಪಾಕಿಸ್ತಾನದ ನಡುವಿನ ಯುದ್ಧವನ್ನು ನಿಲ್ಲಿಸುವಲ್ಲಿ ಅಮೆರಿಕದ ಪಾತ್ರದ ಬಗ್ಗೆ ಕೇಳಿದಾಗ, ಅವರು, "ಅಮೆರಿಕ ಅಮೆರಿಕದಲ್ಲಿತ್ತು. ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ರುಬಿಯೊ ಮತ್ತು ಉಪಾಧ್ಯಕ್ಷ ವ್ಯಾನ್ಸ್ ಕರೆ ಮಾಡಿದ್ದರು, ರುಬಿಯೊ ನನ್ನೊಂದಿಗೆ ಮಾತನಾಡಿದ್ದರು, ವ್ಯಾನ್ಸ್ ನಮ್ಮ ಪ್ರಧಾನಿಯೊಂದಿಗೆ ಮಾತನಾಡಿದ್ದರು, ಅವರು ತಮ್ಮ ಅಭಿಪ್ರಾಯವನ್ನು ಹೊಂದಿದ್ದರು. ಅವರು ನಮ್ಮೊಂದಿಗೆ ಮಾತನಾಡುತ್ತಿದ್ದರು ಮತ್ತು ಅವರು ಪಾಕಿಸ್ತಾನದ ಕಡೆಯವರೊಂದಿಗೂ ಮಾತನಾಡುತ್ತಿದ್ದರು. ಈ ರೀತಿಯ ಸನ್ನಿವೇಶ ಎರಡು ರಾಷ್ಟ್ರಗಳು ಸಂಘರ್ಷದಲ್ಲಿ ತೊಡಗಿದ್ದಾಗ ಉಂಟಾಗುವುದು ವಾಸ್ತವ, ಅಮೆರಿಕ ಇತರ ದೇಶಗಳಂತೆಯೇ ಮಾತನಾಡಿತ್ತು. ಈ ಪೈಕಿ ಕೊಲ್ಲಿಯಲ್ಲಿ ಕೆಲವು ದೇಶಗಳಿದ್ದವು, ಇನ್ನೂ ಕೆಲವು ದೇಶಗಳೂ ಇದ್ದವು." ಎಂದು ಹೇಳಿದ್ದಾರೆ.

"ಎರಡು ದೇಶಗಳು ಸಂಘರ್ಷದಲ್ಲಿ ತೊಡಗಿರುವಾಗ, ವಿಶ್ವದ ದೇಶಗಳು ಕರೆ ಮಾಡಿ ತಮ್ಮ ಕಾಳಜಿಯನ್ನು ವ್ಯಕ್ತಪಡಿಸಿ ಅಂತಹ ಪರಿಸ್ಥಿತಿಯಲ್ಲಿ ಅವರು ಏನು ಮಾಡಬಹುದು ಎಂಬುದನ್ನು ಸೂಚಿಸುವುದು ಸಹಜ. ಆದರೆ ಗುಂಡಿನ ದಾಳಿ ಮತ್ತು ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸುವುದು ಭಾರತ ಮತ್ತು ಪಾಕಿಸ್ತಾನದ ನಡುವೆ ನೇರವಾಗಿ ಮಾತುಕತೆ ನಡೆದ ವಿಷಯವಾಗಿತ್ತು. ನಮ್ಮೊಂದಿಗೆ ಮಾತನಾಡಿದ ಪ್ರತಿಯೊಬ್ಬರಿಗೂ, ಅಮೆರಿಕಕ್ಕೆ ಮಾತ್ರವಲ್ಲದೆ ಎಲ್ಲರಿಗೂ ನಾವು ಒಂದು ವಿಷಯವನ್ನು ಸ್ಪಷ್ಟಪಡಿಸಿದ್ದೇವೆ. ಪಾಕಿಸ್ತಾನಿಗಳು ಗುಂಡಿನ ದಾಳಿಯನ್ನು ನಿಲ್ಲಿಸಲು ಬಯಸಿದರೆ, ಅವರು ನಮಗೆ ಹೇಳಬೇಕು, ನಾವು ಅದನ್ನು ಅವರಿಂದ ಕೇಳಬೇಕು, ಅವರ ಜನರಲ್ ನಮ್ಮ ಜನರಲ್‌ಗೆ ಕರೆ ಮಾಡಿ ಹೀಗೆ ಹೇಳಬೇಕು ಎಂದು ಹೇಳಿದ್ದೆವು, ಮತ್ತು ಅದು ಹಾಗೇ ನಡೆದಿದೆ" ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ನಿರ್ಣಯಕ್ಕೆ ಒಪ್ಪಬೇಕು, ವರಿಷ್ಠರು ಹೇಳಿದಾಗ ದೆಹಲಿಗೆ ಹೋಗುವೆ: ಖರ್ಗೆ ಭೇಟಿ ಬಳಿಕ ಸಿದ್ದರಾಮಯ್ಯ ಪ್ರತಿಕ್ರಿಯೆ; ಡಿಕೆಶಿ ಆಪ್ತರ ನಡೆಗೆ CM ತೀವ್ರ ಅಸಮಾಧಾನ

ರಾಜ್ಯದಲ್ಲಿ ಯಾರೂ ನಿರೀಕ್ಷಿಸದಂತಹ "ಸ್ಫೋಟಕ" ರಾಜಕೀಯ ಬೆಳವಣಿಗೆ: ಕುಮಾರಸ್ವಾಮಿ ಭವಿಷ್ಯ

'ಸಿಎಂ ಕುರ್ಚಿ' ಕದನದ ನಡುವೆ ವರದಿಗಾರರ ಪ್ರಶ್ನೆಗೆ ಕೆರಳಿದ ಡಿಕೆಶಿ! ಹೇಳಿದ್ದೇನು?

ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಸರಣಿ: ನಾಯಕ ಯಾರು? ರಿಷಭ್ ಪಂತ್ ಅಥವಾ ಕೆಎಲ್ ರಾಹುಲ್! ನಾಳೆ ನಿರ್ಧಾರ

"ನಾವೂ ಕಲಿಯಬೇಕು": ಮಾಮ್ದಾನಿ-ಟ್ರಂಪ್ ಭೇಟಿಯ ಬಗ್ಗೆ ತರೂರ್ ಪೋಸ್ಟ್; ನೀವು ಹೇಳಿದ್ದು ಸರಿ ಆದರೆ ರಾಹುಲ್ ಗೆ ಇದೆಲ್ಲಾ ಅರ್ಥ ಆಗತ್ತಾ?: BJP

SCROLL FOR NEXT