ಮೊಹಮ್ಮದ್ ಯೂನಸ್  
ವಿದೇಶ

ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯಸ್ಥ ಮೊಹಮ್ಮದ್ ಯೂನಸ್ ರಾಜೀನಾಮೆ?

ರಾಜಕೀಯ ಪಕ್ಷಗಳು ಒಮ್ಮತಕ್ಕೆ ಬರಲು ವಿಫಲವಾದ ಕಾರಣ ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯಸ್ಥ ಮೊಹಮ್ಮದ್ ಯೂನಸ್ ಅವರು ರಾಜೀನಾಮೆ ನೀಡುವ ಬಗ್ಗೆ ಚಿಂತನೆ ನಡೆಸಿದ್ದಾರೆ.

ಢಾಕಾ: ಮುಹಮ್ಮದ್ ಯೂನಸ್ ಅವರ ಮಧ್ಯಂತರ ಸರ್ಕಾರ ಮತ್ತು ಬಾಂಗ್ಲಾದೇಶ ಸೇನೆಯ ನಡುವಿನ ಸಂಘರ್ಷ ಈಗಾಗಲೇ ಬಹಿರಂಗವಾಗಿದೆ. ಇದರ ಬೆನ್ನಲ್ಲೇ ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯಸ್ಥ ಮುಹಮ್ಮದ್ ಯೂನಸ್ ರಾಜೀನಾಮೆ ನೀಡುವ ವಿಚಾರ ಮುನ್ನೆಲೆಗೆ ಬಂದಿದ್ದು ರಾಜಕೀಯ ಪಕ್ಷಗಳಲ್ಲಿ ಒಮ್ಮತದ ಕೊರತೆಯಿಂದಾಗಿ ಕೆಲಸ ಮಾಡುವುದು ಕಷ್ಟಕರವಾಗುತ್ತಿದೆ ಎಂದು ಯೂನಸ್ ಹೇಳಿಕೊಂಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ರಾಜಕೀಯ ಪಕ್ಷಗಳು ಒಮ್ಮತಕ್ಕೆ ಬರಲು ವಿಫಲವಾದ ಕಾರಣ ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯಸ್ಥ ಮೊಹಮ್ಮದ್ ಯೂನಸ್ ಅವರು ರಾಜೀನಾಮೆ ನೀಡುವ ಬಗ್ಗೆ ಚಿಂತನೆ ನಡೆಸಿದ್ದಾರೆ ಎಂದು ವಿದ್ಯಾರ್ಥಿಗಳೇ ರೂಪಿಸಿರುವ ನ್ಯಾಷನಲ್ ಸಿಟಿಜನ್ ಪಾರ್ಟಿ (ಎನ್‌ಸಿಪಿ) ಸಂಚಾಲಕ ನಹಿದ್ ಇಸ್ಲಾಂ ತಿಳಿಸಿರುವುದಾಗಿ ಬಿಬಿಸಿ ಬಾಂಗ್ಲಾ ವರದಿ ಮಾಡಿದೆ.

ಇಂದು ಬೆಳಿಗ್ಗೆಯಿಂದ ಮೊಹಮ್ಮದ್ ಯೂನಸ್ ಅವರ ರಾಜೀನಾಮೆ ಸುದ್ದಿ ಕೇಳಿ ಬರುತ್ತಿದೆ. ಇದೇ ವಿಚಾರದ ಬಗ್ಗೆ ಚರ್ಚಿಸಲು ನಾನು ಅವರನ್ನು ಭೇಟಿ ಮಾಡಿದ್ದೆ. ಸದ್ಯದ ಪರಿಸ್ಥಿತಿಗೆ ಅಧರಿಸಿ ರಾಜೀನಾಮೆ ನೀಡಲು ಚಿಂತನೆ ನಡೆಸುತ್ತಿರುವುದಾಗಿ ಅವರು ಹೇಳಿದರು, ವಿಶ್ವಾಸ- ಭರವಸೆಯ ಸ್ಥಾನ ಅವರಿಗೆ ಸಿಗದಿದ್ದರೆ ಅವರು ಏಕೆ ಅಲ್ಲಿಯೇ ಇರುತ್ತಾರೆ?" ಎಂದು ನಹಿದ್ ಇಸ್ಲಾಂ ಪ್ರಶ್ನಿಸಿದ್ದಾರೆ.

ದೇಶದ ಸದ್ಯದ ಪರಿಸ್ಥಿತಿಯಲ್ಲಿ ರಾಜಕೀಯ ಪಕ್ಷಗಳು ಒಮ್ಮತಕ್ಕೆ ಬರದ ಹೊರತು ನಾನು ಕೆಲಸ ಮಾಡಲು ಸಾಧ್ಯವಾಗುವುದಿಲ್ಲ ಎಂದು ಯೂನಸ್ ತಿಳಿಸಿರುವುದಾಗಿ ಎನ್‌ಸಿಪಿ ಸಂಚಾಲಕ ಹೇಳಿದರು.

ದೇಶದ ಭದ್ರತೆ ಮತ್ತು ಭವಿಷ್ಯದ ದೃಷ್ಟಿಯಿಂದ ರಾಜಕೀಯ ಪಕ್ಷಗಳು ಒಗ್ಗಟ್ಟನ್ನು ಪ್ರದರ್ಶಿಸುವುದರ ಜತೆಗೆ ಸಹಕಾರ ನೀಡುವ ಭರವಸೆ ಇದೆ ಎಂದು ಯೂನಸ್ ವಿಶ್ವಾಸ ವ್ಯಕ್ತಪಡಿಸಿರುವುದಾಗಿ ಇಸ್ಲಾಂ ತಿಳಿಸಿದ್ದಾರೆ.

ದೇಶದಲ್ಲಿ ನಡೆದ ಸಾಮೂಹಿಕ ದಂಗೆಯ ಬಳಿಕ ದೇಶದಲ್ಲಿ ಬದಲಾವಣೆ ಮತ್ತು ಸುಧಾರಣೆಗಾಗಿ ಯೂನಸ್ ಅವರನ್ನು ಮುಖ್ಯ ಸಲಹೆಗಾರರನ್ನಾಗಿ ಕರೆತರಲಾಯಿತು. ಆದರೆ ಈಗ, ವಿವಿಧ ರಾಜಕೀಯ ಪಕ್ಷಗಳು ಕೆಲಸ ಮಾಡಲು ಸಾಧ್ಯವಾಗದ ಪರಿಸ್ಥಿತಿಯನ್ನು ಸೃಷ್ಟಿಸಿವೆ. ಇದರಿಂದ ಯೂನಸ್ ಅವರ ಕೈಗೆ ಕೋಳ ಹಾಕಲ್ಪಟ್ಟಂತಾಗಿದೆ ಯಾವುದೇ ಕೆಲಸ ಮಾಡಲು ಸಾಧ್ಯವಾಗದ ಸ್ಥಿತಿ ಅವರದ್ದಾಗಿದೆ. ಆದರೂ ರಾಜೀನಾಮೆ ನಿರ್ಧಾರ ಕೈಗೊಳ್ಳುವ ಮೊದಲು ಒಮ್ಮೆ ಯೋಚಿಸಿ ಎಂದು ನಹಿದ್ ಇಸ್ಲಾಂ ಕೇಳಿಕೊಂಡಿದ್ದಾರೆ ಎನ್ನಲಾಗಿದೆ.

ಬಾಂಗ್ಲಾದೇಶ ಸೇನಾ ಮುಖ್ಯಸ್ಥ ಜನರಲ್ ವಕಾರ್-ಉಜ್-ಜಮಾನ್ ಅವರು ಬುಧವಾರ ಬಾಂಗ್ಲಾದೇಶದಲ್ಲಿ ನಡೆಯಲಿರುವ ಚುನಾವಣೆಗೆ ಸಂಬಂಧಿಸಿದಂತೆ ಬಿಎನ್‌ಪಿ ಜೊತೆ ಕೈಜೋಡಿಸುವ ಮೂಲಕ ಹಂಗಾಮಿ ಸರ್ಕಾರದ ಮೇಲೆ ಒತ್ತಡ ಹೇರಿದ್ದಾರೆ. ಕಳೆದ 9 ತಿಂಗಳಿನಿಂದ ದೇಶಕ್ಕೆ ರಕ್ಷಕನಿಲ್ಲ ಹಾಗಾಗಿ ಮುಂದಿನ ಡಿಸೆಂಬರ್ ಒಳಗೆ ಚುನಾವಣೆ ನಡೆಸಬೇಕೆಂದು ಅವರು ಒತ್ತಾಯಿಸಿದರು. ಈ ಪರಿಸ್ಥಿತಿಯಲ್ಲಿ, ಯೂನಸ್ ಅವರು ತಮ್ಮ ಹುದ್ದೆಯಿಂದ ಕೆಳಗಿಳಿಯುವ ನಿರ್ಧಾರದ ಕುರಿತು ಆಲೋಚನೆ ನಡೆಸಿದ್ದಾರೆ ಎನ್ನಲಾಗಿದೆ.

ದೇಶದ ಭದ್ರತೆ ಮತ್ತು ಭವಿಷ್ಯದ ದೃಷ್ಟಿಯಿಂದ ರಾಜಕೀಯ ಪಕ್ಷಗಳು ಒಗ್ಗಟ್ಟನ್ನು ಪ್ರದರ್ಶಿಸುವುದರ ಜತೆಗೆ ಸಹಕಾರ ನೀಡುವ ಭರವಸೆ ಇದೆ ಎಂದು ಯೂನಸ್ ವಿಶ್ವಾಸ ವ್ಯಕ್ತಪಡಿಸಿರುವುದಾಗಿ ಇಸ್ಲಾಂ ತಿಳಿಸಿದ್ದಾರೆ.

ದೇಶದಲ್ಲಿ ನಡೆದ ಸಾಮೂಹಿಕ ದಂಗೆಯ ಬಳಿಕ ದೇಶದಲ್ಲಿ ಬದಲಾವಣೆ ಮತ್ತು ಸುಧಾರಣೆಗಾಗಿ ಯೂನಸ್ ಅವರನ್ನು ಮುಖ್ಯ ಸಲಹೆಗಾರರನ್ನಾಗಿ ಕರೆತರಲಾಯಿತು. ಆದರೆ ಈಗ, ವಿವಿಧ ರಾಜಕೀಯ ಪಕ್ಷಗಳು ಕೆಲಸ ಮಾಡಲು ಸಾಧ್ಯವಾಗದ ಪರಿಸ್ಥಿತಿಯನ್ನು ಸೃಷ್ಟಿಸಿವೆ. ಇದರಿಂದ ಯೂನಸ್ ಅವರ ಕೈಗೆ ಕೋಳ ಹಾಕಲ್ಪಟ್ಟಂತಾಗಿದೆ ಯಾವುದೇ ಕೆಲಸ ಮಾಡಲು ಸಾಧ್ಯವಾಗದ ಸ್ಥಿತಿ ಅವರದ್ದಾಗಿದೆ. ಆದರೂ ರಾಜೀನಾಮೆ ನಿರ್ಧಾರ ಕೈಗೊಳ್ಳುವ ಮೊದಲು ಒಮ್ಮೆ ಯೋಚಿಸಿ ಎಂದು ನಹಿದ್ ಇಸ್ಲಾಂ ಕೇಳಿಕೊಂಡಿದ್ದಾರೆ ಎನ್ನಲಾಗಿದೆ.

ಬಾಂಗ್ಲಾದೇಶ ಸೇನಾ ಮುಖ್ಯಸ್ಥ ಜನರಲ್ ವಕಾರ್-ಉಜ್-ಜಮಾನ್ ಅವರು ಬುಧವಾರ ಬಾಂಗ್ಲಾದೇಶದಲ್ಲಿ ನಡೆಯಲಿರುವ ಚುನಾವಣೆಗೆ ಸಂಬಂಧಿಸಿದಂತೆ ಬಿಎನ್‌ಪಿ ಜೊತೆ ಕೈಜೋಡಿಸುವ ಮೂಲಕ ಹಂಗಾಮಿ ಸರ್ಕಾರದ ಮೇಲೆ ಒತ್ತಡ ಹೇರಿದ್ದಾರೆ. ಕಳೆದ 9 ತಿಂಗಳಿನಿಂದ ದೇಶಕ್ಕೆ ರಕ್ಷಕನಿಲ್ಲ ಹಾಗಾಗಿ ಮುಂದಿನ ಡಿಸೆಂಬರ್ ಒಳಗೆ ಚುನಾವಣೆ ನಡೆಸಬೇಕೆಂದು ಅವರು ಒತ್ತಾಯಿಸಿದರು. ಈ ಪರಿಸ್ಥಿತಿಯಲ್ಲಿ, ಯೂನಸ್ ಅವರು ತಮ್ಮ ಹುದ್ದೆಯಿಂದ ಕೆಳಗಿಳಿಯುವ ನಿರ್ಧಾರದ ಕುರಿತು ಆಲೋಚನೆ ನಡೆಸಿದ್ದಾರೆ ಎನ್ನಲಾಗಿದೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT