ಪಾಕಿಸ್ತಾನದ ಮಿಲಿಟರಿ ವಕ್ತಾರ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ 
ವಿದೇಶ

ನೀರು ಹರಿಸದಿದ್ದರೆ, ಉಸಿರು ನಿಲ್ಲಿಸುತ್ತೇವೆ: ಮತ್ತೆ ಬಾಲ ಬಿಚ್ಚಿದ ಪಾಕ್‌; ಭಾರತಕ್ಕೆ ಗೊಡ್ಡು ಬೆದರಿಕೆ

ಸಿಂಧೂ ಜಲ ಒಪ್ಪಂದವನ್ನು ಭಾರತ ರದ್ದುಗೊಳಿಸಿದ್ದಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಸಭೆಯಲ್ಲಿ ಮಾತನಾಡಿರುವ ಪಾಕಿಸ್ತಾನದ ಮಿಲಿಟರಿ ವಕ್ತಾರ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ ಭಾರತಕ್ಕೆ ಬೆದರಿಕೆ ಹಾಕಿದ್ದಾರೆ.

ಇಸ್ಲಾಮಾಬಾದ್: ಭಾರತ ಹಾಗೂ ಪಾಕಿಸ್ತಾನದ ನಡುವೆ ಕದನ ವಿರಾಮ ಏರ್ಪಟ್ಟಿದ್ದು, ಉಭಯ ರಾಷ್ಟ್ರಗಳ ನಡುವಿನ ಉದ್ವಿಗ್ನತೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಈ ನಡುವಲ್ಲೇ ಮತ್ತೆ ಪಾಕಿಸ್ತಾನ ತನ್ನ ಬಾಲ ಬಿಚ್ಚಿದ್ದು, ನೀರು ಹರಿಸದಿದ್ದರೆ, ಉಸಿರು ನಿಲ್ಲಿಸುತ್ತೇವೆಂದು ಭಾರತಕ್ಕೆ ಬೆದರಿಕೆ ಹಾಕಿದೆ.

ಸಿಂಧೂ ಜಲ ಒಪ್ಪಂದವನ್ನು ಭಾರತ ರದ್ದುಗೊಳಿಸಿದ್ದಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಸಭೆಯಲ್ಲಿ ಮಾತನಾಡಿರುವ ಪಾಕಿಸ್ತಾನದ ಮಿಲಿಟರಿ ವಕ್ತಾರ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ ಭಾರತಕ್ಕೆ ಬೆದರಿಕೆ ಹಾಕಿದ್ದಾರೆ. ಭಾರತ ನೀರು ನೀಡದಿದ್ದರೆ ನಾವು ಅವರ ಉಸಿರು ನಿಲ್ಲಿಸುತ್ತೇವೆ ಎಂಬ ಗೊಡ್ಡು ಬೆದರಿಕೆ ಹಾಕಿ, ನಾಲಿಗೆ ಹರಿಬಿಟ್ಟಿದ್ದಾರೆ.

ಪಹಲ್ಗಾಮ್‌ ಉಗ್ರರ ದಾಳಿಯ ಬಳಿಕ ಭಾರತ ಸಿಂಧೂ ನದಿ ನೀರಿನ ಒಪ್ಪಂದವನ್ನು ರದ್ದುಗೊಳಿಸಿದೆ. ಪಾಕಿಸ್ತಾನ ಹಲವು ಬಾರಿ ಈ ಕುರಿತು ಮಾತನಾಡುವಂತೆ ಭಾರತಕ್ಕೆ ಮನವಿ ಮಾಡಿದೆ. ಆದರೆ, ಭಾರತ ನದಿ ನೀರು ಹಂಚಿಕೆಗೆ ನಿರಾಕರಿಸಿದೆ.

ಈ ನಡುವಲ್ಲೇ ಪಾಕ್‌ ಸೇನಾ ವಕ್ತಾರ ಭಾರತ ನೀರು ನೀಡದಿದ್ದರೆ ಅವರ ಉಸಿರು ನಿಲ್ಲಿಸುತ್ತೇವೆ ಎಂದು ಹೇಳಿದ್ದಾರೆ.

ಈ ಹಿಂದೆ ಪಾಕಿಸ್ತಾನ ಜಕಾರಣಿ ಬಿಲಾವಲ್ ಭುಟ್ಟೋ ಝರ್ದಾರಿ ಸಿಂಧೂ ನದಿ ಇಸ್ಲಾಮಾಬಾದ್‌ಗೆ ಸೇರಿದೆ ಮತ್ತು ಹಾಗೆಯೇ ಮುಂದುವರಿಯುತ್ತದೆ ಎಂದು ಹೇಳಿದ್ದರು.

ಭಾರತವು ತನ್ನ ದೌರ್ಬಲ್ಯಗಳನ್ನು ಮರೆಮಾಚಲು ಮತ್ತು ಜನರನ್ನು ಮೂರ್ಖರನ್ನಾಗಿಸಲು ಇಸ್ಲಾಮಾಬಾದ್ ಅನ್ನು ದೂಷಿಸುತ್ತಿದೆ. ಪ್ರಧಾನಿ ಮೋದಿ ಸುಳ್ಳು ಆರೋಪಗಳನ್ನು ಮಾಡಿ ಸಿಂಧೂ ಜಲ ಒಪ್ಪಂದವನ್ನು ಅಮಾನತುಗೊಳಿಸಿದ್ದಾರೆಂದು ಆರೋಪಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್