ಪಾಕಿಸ್ತಾನದ ಮಿಲಿಟರಿ ವಕ್ತಾರ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ 
ವಿದೇಶ

ನೀರು ಹರಿಸದಿದ್ದರೆ, ಉಸಿರು ನಿಲ್ಲಿಸುತ್ತೇವೆ: ಮತ್ತೆ ಬಾಲ ಬಿಚ್ಚಿದ ಪಾಕ್‌; ಭಾರತಕ್ಕೆ ಗೊಡ್ಡು ಬೆದರಿಕೆ

ಸಿಂಧೂ ಜಲ ಒಪ್ಪಂದವನ್ನು ಭಾರತ ರದ್ದುಗೊಳಿಸಿದ್ದಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಸಭೆಯಲ್ಲಿ ಮಾತನಾಡಿರುವ ಪಾಕಿಸ್ತಾನದ ಮಿಲಿಟರಿ ವಕ್ತಾರ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ ಭಾರತಕ್ಕೆ ಬೆದರಿಕೆ ಹಾಕಿದ್ದಾರೆ.

ಇಸ್ಲಾಮಾಬಾದ್: ಭಾರತ ಹಾಗೂ ಪಾಕಿಸ್ತಾನದ ನಡುವೆ ಕದನ ವಿರಾಮ ಏರ್ಪಟ್ಟಿದ್ದು, ಉಭಯ ರಾಷ್ಟ್ರಗಳ ನಡುವಿನ ಉದ್ವಿಗ್ನತೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಈ ನಡುವಲ್ಲೇ ಮತ್ತೆ ಪಾಕಿಸ್ತಾನ ತನ್ನ ಬಾಲ ಬಿಚ್ಚಿದ್ದು, ನೀರು ಹರಿಸದಿದ್ದರೆ, ಉಸಿರು ನಿಲ್ಲಿಸುತ್ತೇವೆಂದು ಭಾರತಕ್ಕೆ ಬೆದರಿಕೆ ಹಾಕಿದೆ.

ಸಿಂಧೂ ಜಲ ಒಪ್ಪಂದವನ್ನು ಭಾರತ ರದ್ದುಗೊಳಿಸಿದ್ದಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಸಭೆಯಲ್ಲಿ ಮಾತನಾಡಿರುವ ಪಾಕಿಸ್ತಾನದ ಮಿಲಿಟರಿ ವಕ್ತಾರ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ ಭಾರತಕ್ಕೆ ಬೆದರಿಕೆ ಹಾಕಿದ್ದಾರೆ. ಭಾರತ ನೀರು ನೀಡದಿದ್ದರೆ ನಾವು ಅವರ ಉಸಿರು ನಿಲ್ಲಿಸುತ್ತೇವೆ ಎಂಬ ಗೊಡ್ಡು ಬೆದರಿಕೆ ಹಾಕಿ, ನಾಲಿಗೆ ಹರಿಬಿಟ್ಟಿದ್ದಾರೆ.

ಪಹಲ್ಗಾಮ್‌ ಉಗ್ರರ ದಾಳಿಯ ಬಳಿಕ ಭಾರತ ಸಿಂಧೂ ನದಿ ನೀರಿನ ಒಪ್ಪಂದವನ್ನು ರದ್ದುಗೊಳಿಸಿದೆ. ಪಾಕಿಸ್ತಾನ ಹಲವು ಬಾರಿ ಈ ಕುರಿತು ಮಾತನಾಡುವಂತೆ ಭಾರತಕ್ಕೆ ಮನವಿ ಮಾಡಿದೆ. ಆದರೆ, ಭಾರತ ನದಿ ನೀರು ಹಂಚಿಕೆಗೆ ನಿರಾಕರಿಸಿದೆ.

ಈ ನಡುವಲ್ಲೇ ಪಾಕ್‌ ಸೇನಾ ವಕ್ತಾರ ಭಾರತ ನೀರು ನೀಡದಿದ್ದರೆ ಅವರ ಉಸಿರು ನಿಲ್ಲಿಸುತ್ತೇವೆ ಎಂದು ಹೇಳಿದ್ದಾರೆ.

ಈ ಹಿಂದೆ ಪಾಕಿಸ್ತಾನ ಜಕಾರಣಿ ಬಿಲಾವಲ್ ಭುಟ್ಟೋ ಝರ್ದಾರಿ ಸಿಂಧೂ ನದಿ ಇಸ್ಲಾಮಾಬಾದ್‌ಗೆ ಸೇರಿದೆ ಮತ್ತು ಹಾಗೆಯೇ ಮುಂದುವರಿಯುತ್ತದೆ ಎಂದು ಹೇಳಿದ್ದರು.

ಭಾರತವು ತನ್ನ ದೌರ್ಬಲ್ಯಗಳನ್ನು ಮರೆಮಾಚಲು ಮತ್ತು ಜನರನ್ನು ಮೂರ್ಖರನ್ನಾಗಿಸಲು ಇಸ್ಲಾಮಾಬಾದ್ ಅನ್ನು ದೂಷಿಸುತ್ತಿದೆ. ಪ್ರಧಾನಿ ಮೋದಿ ಸುಳ್ಳು ಆರೋಪಗಳನ್ನು ಮಾಡಿ ಸಿಂಧೂ ಜಲ ಒಪ್ಪಂದವನ್ನು ಅಮಾನತುಗೊಳಿಸಿದ್ದಾರೆಂದು ಆರೋಪಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT