ಫ್ರೇಮ್ ಮಾಡಿದ ಫೋಟೋವೊಂದನ್ನು ಗಿಫ್ಟ್ ಆಗಿ ನೀಡಿದ ಪಾಕ್ ಸೇನಾ ಮುಖ್ಯಸ್ಥ 
ವಿದೇಶ

ಪ್ರಧಾನಿ ಶರೀಫ್ ಗೆ ಚೀನಾ ಮಿಲಿಟರಿ ಕಾರ್ಯಾಚರಣೆಯ ಫೋಟೋ ಗಿಫ್ಟ್: ಪಾಕ್ ಸೇನಾ ಮುಖ್ಯಸ್ಥ ಮತ್ತೆ ಟ್ರೋಲ್ ಗೆ ಗುರಿ!

ಇದು ಆನ್ ಲೈನ್ ಬಳಕೆದಾರರ ಕಣ್ಣಿಗೆ ಬೀಳುತ್ತಿದ್ದಂತೆಯೇ ಇದು ನಾಲ್ಕು ವರ್ಷ ಹಳೆಯದಾದ ಚೀನಾ ಮಿಲಿಟರಿ ಕಾರ್ಯಾಚರಣೆಯ ಫೋಟೋ ಎಂಬುದು ಕಂಡುಬಂದಿದೆ.

ಇಸ್ಲಾಮಾಬಾದ್‌: ಇತ್ತೀಚಿಗೆ ನಡೆದ ಸೇನಾ ಕಾರ್ಯಾಚರಣೆ ವೇಳೆಯಲ್ಲಿ ಭಾರತದ ವಿರುದ್ಧ ಗೆಲುವು ಸಾಧಿಸಿರುವುದಾಗಿ ಬೊಗಳೆ ಪ್ರಚಾರ ನಡೆಸುತ್ತಿರುವ ಪಾಕಿಸ್ತಾನಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮತ್ತೊಂದು ಮುಜುಗರ ಎದುರಾಗಿದೆ.

ಹೌದು. ಹೈ ಪ್ರೊಫೈಲ್ ಔತಣ ಕೂಟದಲ್ಲಿ ಹಳೆಯದಾದ ಫ್ರೇಮ್ ಮಾಡಿದ ಫೋಟೋವೊಂದನ್ನು ಪ್ರಧಾನಿ ಶರೀಫ್‌ ಅವರಿಗೆ ಗಿಫ್ಟ್ ಆಗಿ ನೀಡಿದ ಸೇನಾ ಮುಖ್ಯಸ್ಥ ಫೀಲ್ಡ್ ಮಾರ್ಷಲ್ ಜನರಲ್ ಅಸಿಮ್ ಮುನೀರ್ ಅವರನ್ನು ಪಾಕಿಸ್ತಾನ ಸೇರಿದಂತೆ ವಿಶ್ವದಾದ್ಯಂತ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡಲಾಗುತ್ತಿದೆ.

ಇದು ಹಳೆಯದಾದ ಚೀನಾದ ಮಿಲಿಟರಿ ಕಾರ್ಯಾಚರಣೆಯಂತೆ ತೋರುತ್ತದೆ. ಇದು ಆನ್ ಲೈನ್ ಬಳಕೆದಾರರ ಕಣ್ಣಿಗೆ ಬೀಳುತ್ತಿದ್ದಂತೆಯೇ ಇದು ನಾಲ್ಕು ವರ್ಷ ಹಳೆಯದಾದ ಚೀನಾ ಮಿಲಿಟರಿ ಕಾರ್ಯಾಚರಣೆಯ ಫೋಟೋ ಎಂಬುದು ಕಂಡುಬಂದಿದೆ. ಚೀನೀ ಪೀಪಲ್ಸ್ ಲಿಬರೇಶನ್ ಆರ್ಮಿ ಕಾರ್ಯಾಚರಣೆಯ ಫೋಟೋಗಳನನು ನೇರವಾಗಿ ತೆಗೆದುಹಾಕಲಾಗಿದೆ ಎಂದು ಹಲವಾರು ಬಳಕೆದಾರರು ಹೇಳಿದ್ದು, ಆಪರೇಷನ್‌ ಬನ್ಯಾನ್‌' ಕಾರ್ಯಾಚರಣೆ ಕುರಿತ ಪಾಕಿಸ್ತಾನದ ದೃಢತೆಯನ್ನು ಪ್ರಶ್ನಿಸುತ್ತಿದ್ದಾರೆ.

ಭಾರತದ ವಿರುದ್ಧ ಪಾಕ್ ಸೇನೆಯ ದಾಳಿಯದು ಎಂದು ವಿವರಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥರು ಪಿಎಂ ಶೆಹಬಾಜ್ ಷರೀಫ್ ಅವರಿಗೆ ಚೀನಾದ ಮಿಲಿಟರಿ ಕಾರ್ಯಾಚರಣೆಯ ಫೋಟೋವೊಂದನ್ನು ಗಿಫ್ಟ್ ಆಗಿ ನೀಡಿದ್ದಾರೆ. ಹೀಗಾಗಿ ಕೇವಲ ನಕಲಿ ಗೆಲುವಿನ ನಿರೂಪಣೆ ಮಾತ್ರವಲ್ಲದೇ ಅದರೊಂದಿಗೆ ನಕಲಿ ಫೋಟೋ ಕೂಡ ಇದೆ. ವಾಟ್ ಎ ಜೋಕ್ ಎಂದು ಎಕ್ಸ್ ಬಳಕೆದಾರರೊಬ್ಬರು ಬರೆದುಕೊಂಡಿದ್ದಾರೆ.

ಪಾಕಿಸ್ತಾನದವರು ಅವರ ಮಿಲಿಟರಿ ಕಾರ್ಯಾಚರಣೆಯ ಮೂಲ ದೃಶ್ಯಗಳನ್ನು ಸಹ ತಯಾರಿಸಲು ಸಾಧ್ಯವಾಗಿಲ್ಲ ಎಂದು ಮತ್ತೋರ್ವ ಎಕ್ಸ್ ಬಳಕೆದಾರರು ವ್ಯಂಗ್ಯವಾಡಿದ್ದಾರೆ. ಒಟ್ಟಿನಲ್ಲಿ ಈ ಘಟನೆಯಿಂದಾಗಿ ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್‌ ಮುನೀರ್‌ ಮತ್ತು ಪ್ರಧಾನಿ ಶೆಹಬಾಜ್‌ ಷರೀಫ್ ಇಬ್ಬರೂ ಭಾರೀ ಮುಜುಗರದ ಸನ್ನಿವೇಶವನ್ನು ಎದುರಿಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಂಡಿಗೋ ವಿಮಾನ ಹಾರಾಟ 3 ದಿನಗಳಲ್ಲಿ ಸಹಜ ಸ್ಥಿತಿಗೆ: ಸರ್ಕಾರ; 10 ದಿನ ಎಂದ ವಿಮಾನಯಾನ ಸಂಸ್ಥೆ!

ರಾಹುಲ್ ಗಾಂಧಿ ಅಥವಾ ಖರ್ಗೆ ಅಲ್ಲ; ಪುಟಿನ್ ಜೊತೆಗಿನ ಭೋಜನಕೂಟಕ್ಕೆ ಕಾಂಗ್ರೆಸ್ ನ ಈ ನಾಯಕನಿಗೆ ಮಾತ್ರ ಆಹ್ವಾನ!

ಅಬಕಾರಿ ಇಲಾಖೆಗೆ 43,000 ಕೋಟಿ ರೂ ತೆರಿಗೆ ಸಂಗ್ರಹದ ಗುರಿ! ವಾಣಿಜ್ಯ ಇಲಾಖೆಗೆ 'ಟಾರ್ಗೆಟ್' ಎಷ್ಟು?

ಇಂಡಿಗೋ ಬಿಕ್ಕಟ್ಟು: ಸ್ಪೈಸ್‌ಜೆಟ್ ನಿಂದ 100 ಹೆಚ್ಚುವರಿ ವಿಮಾನ ಸಂಚಾರ

ರಾಜ್ಯ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ಬಗ್ಗೆ ಇನ್ನೂ ನಿರ್ಧಾರ ತೆಗೆದುಕೊಂಡಿಲ್ಲ: ಆರ್. ಅಶೋಕ್

SCROLL FOR NEXT