ಡೊನಾಲ್ಡ್ ಟ್ರಂಪ್ ಮತ್ತು ಎಲಾನ್ ಮಸ್ಕ್  
ವಿದೇಶ

ಅನಿರೀಕ್ಷಿತ ಬೆಳವಣಿಗೆ: ಡೊನಾಲ್ಡ್ ಟ್ರಂಪ್ ಆಡಳಿತದಿಂದ ಎಲಾನ್ ಮಸ್ಕ್ ನಿರ್ಗಮನ!

ವಿಶೇಷ ಸರ್ಕಾರಿ ಉದ್ಯೋಗಿಯಾಗಿ ನನ್ನ ನಿಗದಿತ ಅವಧಿ ಕೊನೆಗೊಂಡಿದೆ. ಅನಗತ್ಯ ವೆಚ್ಚಗಳನ್ನು ಕಡಿತ ಮಾಡಲು ಅವಕಾಶ ನೀಡಿದ್ದಕ್ಕಾಗಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಧನ್ಯವಾದಗಳು ಎಂದು ತಿಳಿಸಿದ್ದಾರೆ.

ವಾಷಿಂಗ್ಟನ್: ಅನಿರೀಕ್ಷಿತ ಬೆಳವಣಿಗೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತದಿಂದ ನಿರ್ಗಮಿಸುತ್ತಿರುವುದಾಗಿ ಸ್ಪೇಸ್ ಎಕ್ಸ್ ಒಡೆತನನದ ಬಿಲಿಯನೇರ್ ಎಲಾನ್ ಮಸ್ಕ್ ಘೋಷಿಸಿದ್ದಾರೆ.

ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ತೆರಿಗೆ ನೀತಿಯನ್ನು ಟೀಕಿಸಿದ ಒಂದು ದಿನದ ಬಳಿಕ ವಿಶ್ವದ ಶ್ರೀಮಂತ ವ್ಯಕ್ತಿ ಎಲೋನ್‌ ಮಸ್ಕ್ ಅವರು ಅಮೆರಿಕದ ಸರ್ಕಾರಿ ದಕ್ಷತೆ ಇಲಾಖೆಯ ಮುಖ್ಯಸ್ಥ ಹುದ್ದೆಯಿಂದ ಕೆಳಗೆ ಇಳಿದಿದಿದ್ದಾರೆ. ಈ ಕುರಿತು ತಮ್ಮದೇ ಒಡೆತನದ ಸಾಮಾಜಿಕ ಮಾಧ್ಯಮ 'ಎಕ್ಸ್' ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ವಿಶೇಷ ಸರ್ಕಾರಿ ಉದ್ಯೋಗಿಯಾಗಿ ನನ್ನ ನಿಗದಿತ ಅವಧಿ ಕೊನೆಗೊಂಡಿದೆ. ಅನಗತ್ಯ ವೆಚ್ಚಗಳನ್ನು ಕಡಿತ ಮಾಡಲು ಅವಕಾಶ ನೀಡಿದ್ದಕ್ಕಾಗಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಧನ್ಯವಾದಗಳು ಎಂದು ತಿಳಿಸಿದ್ದಾರೆ. ಅಮೆರಿಕ ಸರ್ಕಾರದ ಕಾರ್ಯದಕ್ಷತಾ ಇಲಾಖೆ (ಡಿಒಜಿಇ) ಕಾಲಕ್ರಮೇಣ ಬಲಗೊಳ್ಳಲಿದ್ದು, ಸರ್ಕಾರದ ಕಾರ್ಯವಿಧಾನ ಭಾಗವಾಗಿದೆ ಎಂದು ಅವರು ಹೇಳಿದ್ದಾರೆ.

ತೆರಿಗೆ ಬಿಲ್‌ಗೆ ಸಂಬಂಧಿಸಿ ಉಂಟಾಗಿರುವ ಭಿನ್ನಾಭಿಪ್ರಾಯದಿಂದ ಟ್ರಂಪ್ ಆಡಳಿತವನ್ನು ತೊರೆಯಲು ಮಸ್ಕ್ ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದಾಯಕ್ಕಿಂತ ಖರ್ಚು ಹೆಚ್ಚುವುದು ಡಿಒಜಿಇ ದಕ್ಷತೆಯ ಮೇಲೆ ಪರಿಣಾಮ ಬೀರಲಿದ್ದು, ದುರ್ಬಲಗೊಳಿಸಲಿದೆ ಎಂದು ಟ್ರಂಪ್ ತೀರ್ಮಾನದ ವಿರುದ್ಧ ಮಸ್ಕ್ ಅಸಮಾಧಾನ ವ್ಯಕ್ತಪಡಿಸಿದ್ದರು ಎನ್ನಲಾಗಿದೆ.

ಎರಡನೇ ಅವಧಿಗೆ ಅಮೆರಿಕದ ಚುಕ್ಕಾಣಿ ಹಿಡಿದ ಡೊನಾಲ್ಡ್ ಟ್ರಂಪ್, ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸಿದ್ದ ಟೆಸ್ಲಾ ಮಾಲೀಕ ಎಲಾನ್ ಮಸ್ಕ್ ಅವರನ್ನು ಅಮೆರಿಕ ಸರ್ಕಾರದ ಕಾರ್ಯದಕ್ಷತಾ ಇಲಾಖೆ (ಡಿಒಜಿಇ)ಯ ಉಸ್ತುವಾರಿಯಾಗಿ ನೇಮಿಸಿದ್ದರು. ಆಡಳಿತ ವ್ಯವಸ್ಥೆ ಸುಧಾರಣೆಗೆ ಕ್ರಮ ಕೈಗೊಳ್ಳುವುದರ ಜೊತೆಗೆ ಅನಗತ್ಯ ವೆಚ್ಚಗಳನ್ನು ಕಡಿತ ಮಾಡುವುದು ಈ ಇಲಾಖೆಯ ಉದ್ದೇಶವಾಗಿತ್ತು.

ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಮಸ್ಕ್‌ ಅವರು ಡೊನಾಲ್ಡ್‌ ಟ್ರಂಪ್‌ ಪರ ಮತಯಾಚನೆ ಮಾಡಿದ್ದರು. ನಂತರ ಟ್ರಂಪ್‌ DOGE ಮುಖ್ಯಸ್ಥರನ್ನಾಗಿ ಮಸ್ಕ್‌ ಅವರನ್ನು ನೇಮಿಸಿದ್ದರು.

ನೇಮಿಸಿದ ನಂತರ ಹಲವಾರು ಸರ್ಕಾರಿ ಇಲಾಖೆಗಳನ್ನು ಮುಚ್ಚಿದ್ದರು. ಉದ್ಯೋಗಿಗಳನ್ನು ಮನೆಗೆ ಕಳುಹಿಸಿದರು. ಅಮೆರಿಕದ ಹಲವು ದೇಶಗಳಿಗೆ ನೀಡುತ್ತಿದ್ದ USAID ನಿಲ್ಲಿಸಿದ್ದರು. ಇದರಿಂದಾಗಿ ಸರ್ಕಾರಿ ಇಲಾಖೆಯ ಕೆಂಗಣ್ಣಿಗೆ ಮಸ್ಕ್‌ ಗುರಿಯಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT