ಸಾಂದರ್ಭಿಕ ಚಿತ್ರ 
ವಿದೇಶ

ಕಾಪಿ ಕಾಪಿ ಕಾಪಿ...: CDF ಹುದ್ದೆ ಸೃಷ್ಟಿ; ಭಾರತದ ಪ್ರತಿ ಹೆಜ್ಜೆಯನ್ನೂ ಒಂದೊಂದಾಗಿ ಕಾಪಿ ಮಾಡುತ್ತಿರುವ ಪಾಕಿಸ್ತಾನ!

ಮೂರು ಸೇವೆಗಳ ನಡುವೆ ಹೆಚ್ಚಿನ ಸಮನ್ವಯ ಮತ್ತು ಏಕೀಕೃತ ಆದೇಶ ಖಾತ್ರಿಗೆ ರಕ್ಷಣಾ ಪಡೆಗಳ ಮುಖ್ಯಸ್ಥರ ಹೊಸ ಹುದ್ದೆಯನ್ನು ಸೃಷ್ಟಿಸಲು ಶನಿವಾರ ಸಾಂವಿಧಾನಿಕ ತಿದ್ದುಪಡಿಯನ್ನು ತಂದಿದೆ.

ಇಸ್ಲಾಮಾಬಾದ್: 'ಆಪರೇಷನ್ ಸಿಂಧೂರ' ನಂತರ ಭಾರತದ ಪ್ರತಿಯೊಂದು ನಡೆಯನ್ನು ಕಾಪಿ ಮಾಡುತ್ತಿರುವ ಪಾಕಿಸ್ತಾನ ಇದೀಗ ಭಾರತದ CDS ಹುದ್ದೆಯಂತೆ ಹೊಸದಾಗಿ ರಕ್ಷಣಾ ಪಡೆಗಳ ಮುಖ್ಯಸ್ಥರ ಹುದ್ದೆ (CDF) ಸೃಷ್ಟಿಸುತ್ತಿದೆ.

ಮೂರು ಸೇವೆಗಳ ನಡುವೆ ಹೆಚ್ಚಿನ ಸಮನ್ವಯ ಮತ್ತು ಏಕೀಕೃತ ಆದೇಶ ಖಾತ್ರಿಗೆ ರಕ್ಷಣಾ ಪಡೆಗಳ ಮುಖ್ಯಸ್ಥರ ಹೊಸ ಹುದ್ದೆಯನ್ನು ಸೃಷ್ಟಿಸಲು ಶನಿವಾರ ಸಾಂವಿಧಾನಿಕ ತಿದ್ದುಪಡಿಯನ್ನು ತಂದಿದೆ.

ಸಂಸತ್ತಿನಲ್ಲಿ ಮಂಡಿಸಲಾದ 27 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯು ಸಂವಿಧಾನದ 243 ನೇ ವಿಧಿಗೆ ಬದಲಾವಣೆಯ ಉದ್ದೇಶ ಹೊಂದಿದ್ದು, ಇದು ಸಶಸ್ತ್ರ ಪಡೆಗಳು ಮತ್ತಿತರ ವಿಷಯಗಳಿಗೆ ಸಂಬಂಧಿಸಿದೆ.

ಈ ತಿದ್ದುಪಡಿ ಮಸೂದೆಯಡಿ ರಾಷ್ಟ್ರಪತಿಗಳು ಪ್ರಧಾನ ಮಂತ್ರಿಯ ಸಲಹೆಯ ಮೇರೆಗೆ ಸೇನಾ ಮುಖ್ಯಸ್ಥ ಮತ್ತು ರಕ್ಷಣಾ ಪಡೆಗಳ ಮುಖ್ಯಸ್ಥರನ್ನು ನೇಮಿಸುತ್ತಾರೆ. ರಕ್ಷಣಾ ಪಡೆಗಳ ಮುಖ್ಯಸ್ಥರೂ ಆಗಿರುವ ಸೇನಾ ಮುಖ್ಯಸ್ಥರು, ಪ್ರಧಾನ ಮಂತ್ರಿಯೊಂದಿಗೆ ಸಮಾಲೋಚಿಸಿ ರಾಷ್ಟ್ರೀಯ ಕಾರ್ಯತಂತ್ರದ ಕಮಾಂಡ್‌ನ ಮುಖ್ಯಸ್ಥರನ್ನು ನೇಮಿಸುತ್ತಾರೆ.

ರಾಷ್ಟ್ರೀಯ ಕಾರ್ಯತಂತ್ರದ ಕಮಾಂಡ್‌ನ ಮುಖ್ಯಸ್ಥರು ಪಾಕಿಸ್ತಾನ ಸೇನೆಯವರಾಗಿರುತ್ತಾರೆ ಎಂದು ಅದು ಹೇಳುತ್ತದೆ. ಸಶಸ್ತ್ರ ಪಡೆಗಳ ವ್ಯಕ್ತಿಗಳನ್ನು ಫೀಲ್ಡ್ ಮಾರ್ಷಲ್, ವಾಯುಪಡೆಯ ಮಾರ್ಷಲ್ ಮತ್ತು ಅಡ್ಮಿರಲ್ ಹುದ್ದೆಗಳಿಗೆ ಬಡ್ತಿ ನೀಡಲು ಸರ್ಕಾರಕ್ಕೆ ಸಾಧ್ಯವಾಗಲಿದೆ. ಫೀಲ್ಡ್ ಮಾರ್ಷಲ್‌ನ ಶ್ರೇಣಿ ಮತ್ತು ಸವಲತ್ತುಗಳು ಜೀವಿತಾವಧಿವರೆಗೂ ಸಿಗಲಿದೆ. ಜಂಟಿ ಮುಖ್ಯಸ್ಥರ ಸಮಿತಿಯ ಅಧ್ಯಕ್ಷರ ಹುದ್ದೆಯು ನವೆಂಬರ್ 27, 2025 ರಂದು ಮುಕ್ತಾಯಗೊಳ್ಳುತ್ತದೆ ಎಂದು ಮಸೂದೆ ಹೇಳುತ್ತದೆ.

ಮೇ ತಿಂಗಳಲ್ಲಿ ಪಾಕಿಸ್ತಾನ ಮತ್ತು ಭಾರತ ನಡುವಿನ ನಾಲ್ಕು ದಿನಗಳ ಸೇನಾ ಸಂಘರ್ಷ ಮತ್ತು ಸಮಗ್ರ ಕಾರ್ಯಾಚರಣೆಯ ಪ್ರತಿಕ್ರಿಯೆಗೆ ಅಗತ್ಯವಿರುವ ಆಧುನಿಕ ಯುದ್ಧದ ಸ್ವರೂಪದಿಂದ ಪಡೆದ ಪಾಠಗಳಿಂದ ಪಾಕಿಸ್ತಾನ ಈದೀಗ ಈ ಕ್ರಮಕ್ಕೆ ಮುಂದಾಗಿದೆ ಎಂದು ವರದಿಗಳು ಹೇಳುತ್ತವೆ.

ಏಪ್ರಿಲ್ 22 ರ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಭಾರತವು ಮೇ 7 ರಂದು ಪಾಕಿಸ್ತಾನ ನಿಯಂತ್ರಣದಲ್ಲಿರುವ ಪ್ರದೇಶಗಳಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು 'ಆಪರೇಷನ್ ಸಿಂಧೂರ್' ಕಾರ್ಯಾಚರಣೆ ಪ್ರಾರಂಭಿಸಿತು. ಈ ದಾಳಿ ನಾಲ್ಕು ದಿನಗಳ ತೀವ್ರ ಘರ್ಷಣೆಗಳಿಗೆ ಕಾರಣವಾಗುವುದರೊಂದಿಗೆ ಮೇ 10 ರಂದು ಕದನ ವಿರಾಮ ಒಪ್ಪಂದದೊಂದಿಗೆ ಅದು ಅಂತ್ಯಗೊಂಡಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

‘ಸ್ವಯಂ ರಕ್ಷಣೆ’ ಹೆಸರಿನಲ್ಲಿ ಇರಾನ್ ಕ್ಷಿಪಣಿ ಉಡಾವಣೆ ತಾಣಗಳ ಮೇಲೆ ಅಮೆರಿಕಾ ವಾಯುದಾಳಿ: ಟ್ರಂಪ್ ದ್ವಿಮುಖ ನಡೆ ವಿರುದ್ಧ ಟೀಕೆ, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ..!

ಸತತ 4ನೇ ಬಾರಿ CNG ದರ ಏರಿಕೆ: ಕೆಜಿಗೆ 2 ರೂ. ಹೆಚ್ಚಳ, ವಾಹನ ಸವಾರರಿಗೆ ಶಾಕ್‌

ಗೃಹಲಕ್ಷ್ಮಿ ಯೋಜನೆಯಲ್ಲಿ 100 ಕೋಟಿ ರೂ.ದುರ್ಬಳಕೆ: ಫಲಾನುಭವಿಗಳ ಮರುಪರಿಶೀಲನೆಗೆ ಸರ್ಕಾರ ಚಿಂತನೆ..!

Main Tera Hero: ರಿರಿಲೀಸ್; ಗರ್ಲ್ ಫ್ರೆಂಡ್ ಗಾಗಿ ಅಭಿಮಾನಿಯ ಡ್ಯಾನ್ಸ್ , ವಿಡಿಯೋ ವೈರಲ್, ವರುಣ್ ಧವನ್ ಹೇಳಿದ್ದೇನು?

ವಿಜಯ್ ಸಿಎಂ ಆಗುತ್ತಿದ್ದಂತೆಯೇ ಆಂಧ್ರದಲ್ಲಿ ಗಂಭೀರವಾದ DCM ಪವನ್ ಕಲ್ಯಾಣ್ ! JSP ಕಾರ್ಯಕರ್ತರಿಗೆ ಖಡಕ್ ಸೂಚನೆ

SCROLL FOR NEXT