ಇಸ್ಲಾಮಾಬಾದ್ ಕೋರ್ಟ್ ನಲ್ಲಿ ಕಾರ್ ಬಾಂಬ್ ಸ್ಫೋಟ AP
ವಿದೇಶ

ಪಾಕಿಸ್ತಾನದಲ್ಲೂ ಭೀಕರ ಸ್ಫೋಟ: ಜಿಲ್ಲಾ ನ್ಯಾಯಾಲಯದಲ್ಲಿ ಕಾರ್ ಬಾಂಬ್ ಬ್ಲಾಸ್ಟ್; ಕನಿಷ್ಠ 12 ಮಂದಿ ಸಾವು

ಸಾವಿಗೀಡಾದವರಲ್ಲಿ ಹೆಚ್ಚಿನವರು ನ್ಯಾಯಾಲಯಕ್ಕೆ ಆಗಮಿಸಿದ್ದವರು ಅಥವಾ ಪಾದಚಾರಿಗಳು. ಸ್ಫೋಟದಿಂದ ಹಲವಾರು ವಾಹನಗಳಿಗೆ ಹಾನಿಯಾಗಿದ್ದು, ಯಾವುದೇ ಸಂಘಟನೆ ಈ ಘಟನೆಯ ಹೊಣೆ ಹೊತ್ತಿಲ್ಲ.

ಇಸ್ಲಾಮಾಬಾದ್: ದೆಹಲಿ ಬಾಂಬ್ ಸ್ಫೋಟ ಪ್ರಕರಣ ಹಸಿರಾಗಿರುವಂತೆಯೇ ಅತ್ತ ಪಾಕಿಸ್ತಾನದಲ್ಲೂ ಭೀಕರ ಕಾರ್ ಬಾಂಬ್ ಸ್ಫೋಟ ಸಂಭವಿಸಿ ಕನಿಷ್ಠ 12 ಮಂದಿ ಸಾವನ್ನಪ್ಪಿದ್ದಾರೆ.

ಇಸ್ಲಾಮಾಬಾದ್‌ನ ಜಿಲ್ಲಾ ನ್ಯಾಯಾಲಯದ ಹೊರಗೆ ನಡೆದ ಕಾರು ಸ್ಫೋಟದಲ್ಲಿ 12 ಮಂದಿ ಮೃತಪಟ್ಟಿದ್ದು, 20 ಮಂದಿ ಗಾಯಗೊಂಡಿದ್ದಾರೆ. ಸಾವಿಗೀಡಾದವರಲ್ಲಿ ಹೆಚ್ಚಿನವರು ನ್ಯಾಯಾಲಯಕ್ಕೆ ಆಗಮಿಸಿದ್ದವರು ಅಥವಾ ಪಾದಚಾರಿಗಳು. ಸ್ಫೋಟದಿಂದ ಹಲವಾರು ವಾಹನಗಳಿಗೆ ಹಾನಿಯಾಗಿದ್ದು, ಯಾವುದೇ ಸಂಘಟನೆ ಈ ಘಟನೆಯ ಹೊಣೆ ಹೊತ್ತಿಲ್ಲ.

ಇಸ್ಲಾಮಾಬಾದ್ ಜಿಲ್ಲಾ ನ್ಯಾಯಾಲಯದ ಹೊರಭಾಗದಲ್ಲಿ ಮಂಗಳವಾರ ಮಧ್ಯಾಹ್ನ ನಡೆದ ಭಾರೀ ತೀವ್ರತೆಯ ಕಾರ್ ಬಾಂಬ್ ಸ್ಫೋಟದಲ್ಲಿ ಕನಿಷ್ಠ 12 ಮಂದಿ ಮೃತಪಟ್ಟಿದ್ದಾರೆ ಹಾಗೂ 20 ಮಂದಿ ಗಾಯಗೊಂಡಿದ್ದಾರೆ ಎಂದು ಸರ್ಕಾರಿ ಮಾಧ್ಯಮ ಸಂಸ್ಥೆ ಪಾಕಿಸ್ತಾನ್ ಟಿವಿ ವರದಿ ಮಾಡಿದೆ.

ಪೊಲೀಸರು ಮತ್ತು ಆಂಬುಲೆನ್ಸ್ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ಪ್ರದೇಶವನ್ನು ಸುತ್ತುವರಿಸಿದ್ದಾರೆ. ಸ್ಫೋಟ ಶಬ್ದವು ನಗರದಿಂದ ಮೈಲಿಗಳಷ್ಟು ದೂರದವರೆಗೆ ಕೇಳಿಬಂದಿದೆ. ಸ್ಫೋಟದ ತೀವ್ರತೆಗೆ ನ್ಯಾಯಾಲಯದ ಹೊರಗೆ ನಿಲ್ಲಿಸಿದ್ದ ಹಲವಾರು ವಾಹನಗಳು ಸಹ ಹಾನಿಗೊಳಗಾಗಿವೆ. ನ್ಯಾಯಾಲಯಕ್ಕೆ ಹಾಜರಾಗಿದ್ದವರು ಹಾಗೂ ಪಾದಚಾರಿಗಳು ಮೃತರು ಮತ್ತು ಗಾಯಾಳುಗಳಲ್ಲಿ ಸೇರಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

5 ಕಿ.ಮೀ. ದೂರದವರೆಗೂ ಕೇಳಿದ ಸ್ಫೋಟದ ಸದ್ದು!

ಮಧ್ಯಾಹ್ನದ ಹೊತ್ತಿನಲ್ಲಿ ಜನರು ಹೆಚ್ಚಾಗಿರುವ ಸಮಯದಲ್ಲೇ ಈ ಬಾಂಬ್ ಸ್ಫೋಟ ಸಂಭವಿಸಿದ್ದು, ಉಗ್ರರಿಂದಲೇ ಆಗಿರುವ ಕೃತ್ಯ ಎಂಬ ಆರೋಪ ಕೇಳಿ ಬಂದಿದೆ. ಇನ್ನು ಸ್ಫೋಟದ ತೀವ್ರತೆ ಎಷ್ಟಿತ್ತು ಎಂದರೆ ಬರೊಬ್ಬರಿ 5 ಕಿ.ಮೀದೂರದವರೆಗೂ ಬಾಂಬ್ ಸ್ಫೋಟದ ಶಬ್ದಕೇಳಿದೆ.

ಅಂತೆಯೇ ಸುತ್ತಮುತ್ತಲು ಇದ್ದ ವಾಹನಗಳು ಕೂಡ ಸ್ಫೋಟದಲ್ಲಿ ಹಾನಿಗೀಡಾಗಿದ್ದು, ಗಾಯಗೊಂಡವರ ಪೈಕಿ ಹೆಚ್ಚಿನ ಜನರು ವಕೀಲರು ಮತ್ತು ಕೋರ್ಟ್‌ನಲ್ಲಿ ಕೆಲಸ ಮಾಡುವ ಸಿಬ್ಬಂದಿಗಳು ಎನ್ನಲಾಗಿದೆ. ಮತ್ತೊಂದು ಕಡೆ ಪೊಲೀಸರು ಆತ್ಮಹತ್ಯಾ ದಾಳಿ ಇದಾಗಿರಬಹುದು ಎಂದು ಶಂಕಿಸಿದ್ದಾರೆ.

ದಕ್ಷಿಣ ವಜಿರಿಸ್ತಾನದ ಕೆಡೆಟ್ ಕಾಲೇಜು ವಾನಾದಲ್ಲಿ ತೆಹ್ರೀಕ್-ಇ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ನಡೆಸಿದ ದಾಳಿಯನ್ನು ಪಾಕಿಸ್ತಾನಿ ಭದ್ರತಾ ಪಡೆಗಳು ವಿಫಲಗೊಳಿಸಿದ ಕೆಲವೇ ಗಂಟೆಗಳ ನಂತರ ಈ ಸ್ಫೋಟ ಸಂಭವಿಸಿದೆ. ಈ ಕಾರ್ಯಾಚರಣೆಯಲ್ಲಿ ಇಬ್ಬರು ಟಿಟಿಪಿ ಭಯೋತ್ಪಾದಕರು ಸಾವನ್ನಪ್ಪಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ಕರ್ನಾಟಕದ ಇತಿಹಾಸದಲ್ಲೇ ಮೊದಲು; ಪ್ರತಿಭಟಿಸುವುದಾದರೇ ಸದನದ ಬಾವಿಗೆ ಬನ್ನಿ: ವಿಪಕ್ಷ ಶಾಸಕರಿಗೆ ಸ್ಪೀಕರ್ ಆಹ್ವಾನ, BJP ಕಿಡಿ!

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸೌಧ ಆವರಣದಲ್ಲಿ ಪ್ರತಿಭಟನೆ, ಸಿಎಂ ಡಿಕೆಶಿ ವಿರುದ್ಧ ವಾಗ್ದಾಳಿ Video

ತಪ್ಪಾದ DPR ಸಿದ್ಧಪಡಿಸುವ ಸಲಹೆಗಾರರೇ ಹೆದ್ದಾರಿ ಅಪಘಾತಗಳು ಮತ್ತು ಸಾವುಗಳಿಗೆ 'ತಪ್ಪಿತಸ್ಥರು': ನಿತಿನ್ ಗಡ್ಕರಿ ಕಠಿಣ ಕ್ರಮದ ಎಚ್ಚರಿಕೆ!

ಕೇವಲ 4 ಚಿತ್ರ ಮಾಡಿದ ನಟನಿಗೆ 'ಸರ್' ಅಂತೀರಲ್ಲ ಶಿವಣ್ಣ; ಸೆಂಚೂರಿ ಸ್ಟಾರ್ ವಿರುದ್ಧ ಕನ್ನಡಿಗರ ಬೇಸರ, Video!