ಭೂತಾನ್ ನಲ್ಲಿ ಮಾತನಾಡಿದ ಪ್ರಧಾನಿ ಮೋದಿ. 
ವಿದೇಶ

PM Modi in Bhutan: ದೆಹಲಿ ಸ್ಫೋಟದ ಹಿಂದಿನ ಸಂಚುಕೋರರನ್ನು ಸುಮ್ಮನೆ ಬಿಡುವುದಿಲ್ಲ, ಪಿತೂರಿ ನಡೆಸಿದವರಿಗೆ ತಕ್ಕ ಶಿಕ್ಷೆ ಖಚಿತ; Video

ದೆಹಲಿ ಸ್ಫೋಟದಿಂದ ಬಾಧಿತರಾದವರ ಕುಟುಂಬಗಳೊಂದಿಗೆ ಇಡೀ ರಾಷ್ಟ್ರವು ನಿಂತಿದೆ. ದೆಹಲಿಯಲ್ಲಿ ನಡೆದ ಭಯಾನಕ ಘಟನೆ ಎಲ್ಲರನ್ನೂ ಆಘಾತಗೊಳಿಸಿದೆ ಎಂದು ಹೇಳಿದ್ದಾರೆ.

ಥಿಂಪು(ಭೂತಾನ್): ನಿನ್ನೆ ಸೋಮವಾರ ಸಂಜೆ ದೆಹಲಿಯಲ್ಲಿ ನಡೆದ ನಿಗೂಢ ಸ್ಫೋಟಕ್ಕೆ ಸಂಬಂಧಿಸಿದಂತೆ ಇಂದು ಭೂತಾನ್​ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದಾರೆ. ಸಂಚುಕೋರರನ್ನು ಸುಮ್ಮನೆ ಬಿಡುವುದಿಲ್ಲ ಅಪರಾಧಿಗಳಿಗೆ ಖಂಡಿತಾ ಶಿಕ್ಷೆಯಾಗುತ್ತದೆ" ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಇಂದಿನಿಂದ ಎರಡು ದಿನಗಳ ಕಾಲ ಭೂತಾನ್ ಭೇಟಿಯಲ್ಲಿರುವ ಪ್ರಧಾನಿ, ನಮ್ಮ ತನಿಖಾ ಸಂಸ್ಥೆಗಳು ಪಿತೂರಿಯ ಬೇರುಗಳನ್ನು ಆಳವಾಗಿ ಅಗೆಯುತ್ತವೆ. ದೆಹಲಿ ಸ್ಫೋಟದಿಂದ ಬಾಧಿತರಾದವರ ಕುಟುಂಬಗಳೊಂದಿಗೆ ಇಡೀ ರಾಷ್ಟ್ರವು ನಿಂತಿದೆ. ದೆಹಲಿಯಲ್ಲಿ ನಡೆದ ಭಯಾನಕ ಘಟನೆ ಎಲ್ಲರನ್ನೂ ಆಘಾತಗೊಳಿಸಿದೆ ಎಂದು ಹೇಳಿದ್ದಾರೆ.

ಇಂದು ನಾನು ತುಂಬಾ ಭಾರವಾದ ಹೃದಯದಿಂದ ಇಲ್ಲಿಗೆ ಬಂದಿದ್ದೇನೆ. ನಿನ್ನೆ ಸಂಜೆ ದೆಹಲಿಯಲ್ಲಿ ನಡೆದ ಭೀಕರ ಘಟನೆ ಎಲ್ಲರನ್ನೂ ತೀವ್ರವಾಗಿ ದುಃಖಿಸಿದೆ. ಸಂತ್ರಸ್ತ ಕುಟುಂಬಗಳ ದುಃಖ ನನಗೆ ಅರ್ಥವಾಗುತ್ತದೆ. ಇಡೀ ರಾಷ್ಟ್ರ ಇಂದು ಅವರೊಂದಿಗೆ ನಿಂತಿದೆ ಎಂದರು.

ಈ ಘಟನೆಯ ತನಿಖೆ ನಡೆಸುತ್ತಿರುವ ಎಲ್ಲಾ ಸಂಸ್ಥೆಗಳೊಂದಿಗೆ ನಾನು ನಿನ್ನೆ ರಾತ್ರಿಯಿಡೀ ಸಂಪರ್ಕದಲ್ಲಿದ್ದೆ. ನಮ್ಮ ಸಂಸ್ಥೆಗಳು ಈ ಪಿತೂರಿಯ ಆಳವನ್ನು ಹುಡುಕುವ ಪ್ರಯತ್ನ ಮಾಡುತ್ತಿದೆ. ಇದರ ಹಿಂದಿನ ಪಿತೂರಿಗಾರರನ್ನು ಬಿಡಲಾಗುವುದಿಲ್ಲ. ಹೊಣೆಗಾರರಾದ ಎಲ್ಲರಿಗೂ ಶಿಕ್ಷೆಯಾಗುವುದು ಖಚಿತ ಎಂದರು.

ದೆಹಲಿಯಲ್ಲಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ದೇಶದ ಇತರ ಭಾಗಗಳಲ್ಲಿನ ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸಿದರು, ಕೆಂಪು ಕೋಟೆ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ.

ಸಭೆಯಲ್ಲಿ ಕೇಂದ್ರ ಗೃಹ ಕಾರ್ಯದರ್ಶಿ ಗೋವಿಂದ್ ಮೋಹನ್, ಗುಪ್ತಚರ ಬ್ಯೂರೋ ನಿರ್ದೇಶಕ ತಪನ್ ದೇಕಾ, ದೆಹಲಿ ಪೊಲೀಸ್ ಆಯುಕ್ತ ಸತೀಶ್ ಗೋಲ್ಚಾ ಮತ್ತು ಎನ್ಐಎ ಡಿಜಿ ಸದಾನಂದ ವಸಂತ್ ಡೇಟ್ ಭಾಗವಹಿಸಿದ್ದರು. ಜಮ್ಮು ಮತ್ತು ಕಾಶ್ಮೀರದ ಡಿಜಿಪಿ ನಳಿನ್ ಪ್ರಭಾತ್ ಕೂಡ ವರ್ಚುವಲ್ ಮೂಲಕ ಸಭೆಯಲ್ಲಿ ಭಾಗವಹಿಸಿದ್ದರು. ಸಭೆಯಲ್ಲಿ, ಉನ್ನತ ಅಧಿಕಾರಿಗಳು ಸ್ಫೋಟದ ನಂತರದ ಪರಿಸ್ಥಿತಿಯ ಕುರಿತು ವಿವರವಾದ ಮಾಹಿತಿ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

SCROLL FOR NEXT