ಮೃತ ಮಹಿಳೆ ಸಮನ್ವಿತಾ 
ವಿದೇಶ

ಆಸ್ಟ್ರೇಲಿಯಾದಲ್ಲಿ ಭೀಕರ ರಸ್ತೆ ಅಪಘಾತ: ಭಾರತೀಯ ಮೂಲದ 8 ತಿಂಗಳ ಗರ್ಭಿಣಿ, ಹೊಟ್ಟೆಯಲ್ಲಿದ್ದ ಮಗು ಸಾವು

ಸಮನ್ವಿತಾ ಮತ್ತು ಅವರ ಕುಟುಂಬ ಫುಟ್‌ಪಾತ್‌ನಲ್ಲಿ ರಸ್ತೆ ದಾಟಲು ನಿಂತಿದ್ದಾಗ, ಹಿಂದಿನಿಂದ ಬಂದ BMW ಕಾರು , ಮುಂದೆ ನಿಧಾನವಾಗಿ ಹೋಗುತ್ತಿದ್ದ ಕಿಯಾ ಕಾರ್ನಿವಲ್ ಕಾರಿಗೆ ಡಿಕ್ಕಿ ಹೊಡೆದಿದೆ.

ಮೆಲ್ಬರ್ನ್‌: ಆಸ್ಟ್ರೇಲಿಯಾದ ಸಿಡ್ನಿ ನಗರದಲ್ಲಿ ಸಂಭವಿಸಿದ ಅಪಘಾತದಲ್ಲಿ ಎಂಟು ತಿಂಗಳ ಗರ್ಭಿಣಿ ಹಾಗೂ ಹೊಟ್ಟೆಯೊಳಗಿದ್ದ ಮಗು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

ಸಮನ್ವಿತಾ ಧಾರೇಶ್ವರ್‌ (33) ಮೃತ ಮಹಿಳೆ. ಕಳೆದ ಶುಕ್ರವಾರ ರಾತ್ರಿ 8ರ ಸುಮಾರಿಗೆ ಸಮನ್ವಿತಾ ಅವರು ತಮ್ಮ ಪತಿ ಹಾಗು 3 ವರ್ಷದ ಮಗನೊಂದಿಗೆ ಜರ್ಜ್ ಸೇಂಟ್‌ ಇನ ಹಾರ್ನ್‌ಸ್ಬಿ ಬಳಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ರಸ್ತೆ ಅಪಘಾತ ಸಂಭವಿಸಿದೆ. ಹೆರಿಗೆಗೆ ಇನ್ನು ಕೆಲವೇ ವಾರಗಳು ಬಾಕಿ ಇರುವಾಗಲೇ ಈ ದುರ್ಘಟನೆ ಸಂಭವಿಸಿದೆ.

ಶುಕ್ರವಾರ ರಾತ್ರಿ ಸುಮಾರು 8 ಗಂಟೆಗೆ ಹಾರ್ನ್ಸ್‌ಬೈನಲ್ಲಿರುವ ಜಾರ್ಜ್ ಸ್ಟ್ರೀಟ್‌ನಲ್ಲಿ ಈ ದುರ್ಘಟನೆ ನಡೆದಿದೆ. ಸಮನ್ವಿತಾ ಮತ್ತು ಅವರ ಕುಟುಂಬ ಫುಟ್‌ಪಾತ್‌ನಲ್ಲಿ ರಸ್ತೆ ದಾಟಲು ನಿಂತಿದ್ದಾಗ, ಹಿಂದಿನಿಂದ ಬಂದ BMW ಕಾರು , ಮುಂದೆ ನಿಧಾನವಾಗಿ ಹೋಗುತ್ತಿದ್ದ ಕಿಯಾ ಕಾರ್ನಿವಲ್ ಕಾರಿಗೆ ಡಿಕ್ಕಿ ಹೊಡೆದಿದೆ. ಈ ಪರಿಣಾಮ ಕಿಯಾ ಕಾರ್ ಮುಂದೆ ನುಗ್ಗಿ, ರಸ್ತೆ ದಾಟುತ್ತಿದ್ದ ಸಮನ್ವಿತಾಗೆ ಅಪ್ಪಳಿಸಿದೆ.

ಈ ಭೀಕರ ಅಪಘಾತದಲ್ಲಿ ಸಮನ್ವಿತಾಗೆ ಗಂಭೀರ ಗಾಯಗಳಾಗಿದ್ದವು. ಅವರನ್ನು ತಕ್ಷಣವೇ ವೆಸ್ಟ್‌ಮೀಡ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ದುರದೃಷ್ಟವಶಾತ್, ಸಮನ್ವಿತಾ ಮತ್ತು ಅವರ ಗರ್ಭದಲ್ಲಿದ್ದ ಮಗುವನ್ನು ಉಳಿಸಲು ಸಾಧ್ಯವಾಗಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಈ BMW ಕಾರನ್ನು 19 ವರ್ಷದ ಆರೋನ್ ಪಪಜೋಗ್ಲು ಎಂಬಾತ ಚಲಾಯಿಸುತ್ತಿದ್ದ ಎನ್ನಲಾಗಿದೆ. ಇವನು 'P-plater' ಆಗಿದ್ದನು, ಅಂದರೆ ತಾತ್ಕಾಲಿಕ ಅಥವಾ ಪ್ರೊಬೇಷನರಿ ಲೈಸೆನ್ಸ್ ಹೊಂದಿದ್ದನು. ಬಿಎಂಡಬ್ಲ್ಯೂ ಓಡಿಸುತ್ತಿದ್ದ 19 ವರ್ಷದ ಯುವಕ ಮತ್ತು ಕಿಯಾ ಚಾಲನೆ ಮಾಡುತ್ತಿದ್ದ 48 ವರ್ಷದ ವ್ಯಕ್ತಿಗೆ ಯಾವುದೇ ಗಾಯಗಳಾಗಿಲ್ಲ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾಂತಾರಾ ಅಪಹಾಸ್ಯ ಪ್ರಕರಣ: 'ಸೂಪರ್ ಸ್ಟಾರ್ ಆದ್ರೇನು.. ನಾಲಿಗೆ ಮೇಲೆ ಹಿಡಿತ ಇರ್ಬೇಕು..': ನಟ ರಣವೀರ್ ಸಿಂಗ್ ಹೈಕೋರ್ಟ್ ಚಾಟಿ!

ಕಾಂಗ್ರೆಸ್ ಅರೆಬೆತ್ತಲೆ ಪ್ರತಿಭಟನೆಗೆ ಸ್ವಪಕ್ಷದಲ್ಲೇ ತೀವ್ರ ವಿರೋಧ: ಆದರೆ ದೇಶದ ಹಿತಕ್ಕಾಗಿ ಇದು ಒಳ್ಳೆಯದ್ದು ಎಂದ ಖರ್ಗೆ

ಶಾಲೆಗಳ ಬಳಿ ಮಾಂಸದ ಅಂಗಡಿಗಳು ಹಿಂಸಾಚಾರವನ್ನು ಉತ್ತೇಜಿಸುತ್ತವೆ: ಬಿಹಾರ ಉಪ ಮುಖ್ಯಮಂತ್ರಿ

ಪಶ್ಚಿಮ ಬಂಗಾಳ SIR ಪರಿಶೀಲನೆ: ಜಾರ್ಖಂಡ್-ಒಡಿಶಾ ನ್ಯಾಯಾಧೀಶರ ನಿಯೋಜನೆಗೆ ಸುಪ್ರೀಂ ಕೋರ್ಟ್ ಅನುಮತಿ

ಜಾರ್ಖಂಡ್ ಏರ್ ಆಂಬುಲೆನ್ಸ್ ದುರಂತ: ಮೃತಪಟ್ಟ ಎಲ್ಲಾ ಏಳು ಮಂದಿ ಮೃತದೇಹ ಮರಣೋತ್ತರ ಪರೀಕ್ಷೆಗೆ ರವಾನೆ; Video

SCROLL FOR NEXT