ವಿಶ್ವಸಂಸ್ಥೆಯ ಹವಾಮಾನ ಬದಲಾವಣೆ ಶೃಂಗಸಭೆಯಲ್ಲಿ ಭಾರಿ ಬೆಂಕಿ ಅವಘಡ  
ವಿದೇಶ

ಬ್ರೆಜಿಲ್: ವಿಶ್ವಸಂಸ್ಥೆಯ ಹವಾಮಾನ ಬದಲಾವಣೆ ಶೃಂಗಸಭೆಯಲ್ಲಿ ಭಾರಿ ಬೆಂಕಿ ಅವಘಡ; 13 ಮಂದಿಗೆ ಗಾಯ

ಈ ಬೆಂಕಿ ಅವಘಡದಲ್ಲಿ ಕನಿಷ್ಠ 13 ಜನರು ಗಾಯಗೊಂಡಿದ್ದು, ಸಾವಿರಾರು ಜನರು ಜೀವ ರಕ್ಷಿಸಿಕೊಳ್ಳಲು ಹೊರ ಓಡಿದ್ದಾರೆ ಎಂದು ವರದಿಯಾಗಿದೆ.

ಬೆಲೆಮ್: ಬ್ರೆಜಿಲ್‌ನ ಬೆಲೆಮ್‌ ನಗರದಲ್ಲಿ ನಡೆಯುತ್ತಿರುವ ವಿಶ್ವಸಂಸ್ಥೆಯ ಹವಾಮಾನ ಬದಲಾವಣೆ ಕುರಿತ ಶೃಂಗಸಭೆಯ (ಸಿಒಪಿ–30) ಮುಖ್ಯ ಸಭಾಂಗಣದಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದೆ.

ಈ ಬೆಂಕಿ ಅವಘಡದಲ್ಲಿ ಕನಿಷ್ಠ 13 ಜನರು ಗಾಯಗೊಂಡಿದ್ದು, ಸಾವಿರಾರು ಜನರು ಜೀವ ರಕ್ಷಿಸಿಕೊಳ್ಳಲು ಹೊರ ಓಡಿದ್ದಾರೆ ಎಂದು ವರದಿಯಾಗಿದೆ. ಮುಖ್ಯ ಸಭಾಂಗಣದಲ್ಲಿ ಬ್ಲೂ ಝೋನ್‌ನಲ್ಲಿ ಸಭೆ, ಮಾತುಕತೆ, ಮಾಧ್ಯಮ ಕೇಂದ್ರ ಮತ್ತು ಪ್ರಮುಖ ಗಣ್ಯರ ಕಚೇರಿಯನ್ನು ಸ್ಥಾಪಿಸಲಾಗಿದೆ. ಗುರುವಾರ ಮಧ್ಯಾಹ್ನ 2 ಗಂಟೆ ಹೊತ್ತಿಗೆ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಹರಡುತ್ತಿದ್ದಂತೆ ಸ್ಥಳದಲ್ಲಿದ್ದ ಜನರು ಹೊರಕ್ಕೆ ಓಡಿದ್ದಾರೆ ಎಂದು ಹೇಳಲಾಗಿದೆ.

ಬೆಂಕಿ ಅವಘಡ ಸಂಭವಿಸಿದಾಗ ಭಾರತದ ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಕೂಡ ಭಾರತೀಯ ನಿಯೋಗದೊಂದಿಗೆ ಬ್ಲೂ ಝೋನ್‌ ವಲಯದಲ್ಲಿದ್ದರು, ಆದರೆ ಅವರು ಮತ್ತು ಇತರ ಅಧಿಕಾರಿಗಳು ಸುರಕ್ಷಿತವಾಗಿ ಸ್ಥಳದಿಂದ ಹೊರಬಂದರು ಎಂದು ಸಚಿವಾಲಯದ ವಕ್ತಾರರು ಪಿಟಿಐಗೆ ತಿಳಿಸಿದ್ದಾರೆ.

ಮಾತುಕತೆಗಳು, ಮಾಧ್ಯಮ ಕೇಂದ್ರ ಮತ್ತು ಮುಖ್ಯ ಸಮಗ್ರ ಸಭಾಂಗಣ ಸೇರಿದಂತೆ ಎಲ್ಲಾ ಉನ್ನತ ಗಣ್ಯರ ಕಚೇರಿಗಳಿವೆ ಎಂದು ವರದಿಯಾಗಿದೆ. ಬೆಂಕಿ ದುರಂತದ ಸುದ್ದಿ ಹರಡಿದ ತಕ್ಷಣ, ಜನರು ಸುರಕ್ಷತೆಗಾಗಿ ಎಲ್ಲಾ ನಿರ್ಗಮನ ದ್ವಾರಗಳಿಂದ ಹೊರಗೆ ಓಡಿ ಹೋಗಿದ್ದು, ಅಧಿಕಾರಿಗಳು ಸಂಪೂರ್ಣ ಸುರಕ್ಷತಾ ಪರಿಶೀಲನೆಗಾಗಿ ಸ್ಥಳವನ್ನು ಮುಚ್ಚಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Coal mafia: ಜಾರ್ಖಂಡ್-ಪಶ್ಚಿಮ ಬಂಗಾಳದಲ್ಲಿ 40 ಕ್ಕೂ ಹೆಚ್ಚು ಸ್ಥಳಗಳ ಮೇಲೆ ED ದಾಳಿ, ತೀವ್ರ ಶೋಧ

LKG, UKG in Anganwadis: ರಾಜ್ಯದ 5000 ಅಂಗನವಾಡಿಗಳಲ್ಲಿ ನ.28ರಿಂದ ತರಗತಿಗಳು ಆರಂಭ..!

ಅಯ್ಯಪ್ಪ ಸ್ವಾಮಿ ಕಠಿಣ ವ್ರತ: ಶಬರಿಮಲೆ ಉಪವಾಸ ಹೇಗೆ ಪ್ರಾರಂಭಿಸಬೇಕು? 41 ದಿನಗಳವರೆಗೆ ಬ್ರಹ್ಮಚರ್ಯ ಏಕೆ ಪಾಲಿಸಬೇಕು?

ಬಳ್ಳಾರಿಯಲ್ಲಿ 36 ಜೀನ್ಸ್ ಘಟಕಗಳು ಸ್ಥಗಿತ: ಸರ್ಕಾರದ ವಿರುದ್ಧ ಮುಗಿಬಿದ್ದ ವಿಪಕ್ಷ, 22 ಕೋಟಿ ರೂ. ವೆಚ್ಚದ ತ್ಯಾಜ್ಯ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಸಿಎಂ ಅನುಮೋದನೆ

KPCC ಅಧ್ಯಕ್ಷ ಸ್ಥಾನದ ಬಗ್ಗೆ ಡಿ.ಕೆ.ಶಿವಕುಮಾರ್ ಅವರನ್ನೇ ಕೇಳಬೇಕು: ಸಚಿವ ಸತೀಶ್ ಜಾರಕಿಹೊಳಿ

SCROLL FOR NEXT