ವಿದೇಶ

ದುಬೈ ಏರ್ ಶೋ ವೇಳೆ ದುರಂತ: ಭಾರತದ ತೇಜಸ್ ಯುದ್ಧ ವಿಮಾನ ಪತನ, ಪೈಲಟ್ ಸಾವು! ತನಿಖೆಗೆ IAF ಆದೇಶ

ಸ್ಪೋಟದ ಬಳಿಕ ದಟ್ಟವಾದ ಕಪ್ಪು ಹೊಗೆ ಆವರಿಸಿದೆ. ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಅಭಿವೃದ್ಧಿಪಡಿಸಿದ ಏಕ ಆಸನದ ಹಗುರ ಯುದ್ಧ ವಿಮಾನ (LCA) ವಿಮಾನವು ಸ್ಥಳೀಯ ಸಮಯ ಮಧ್ಯಾಹ್ನ 2:10 ರ ಸುಮಾರಿಗೆ ಪತನವಾಗಿದೆ.

ದುಬೈ: ದುಬೈ ಏರೋ ಶೋ ವೇಳೆ ಶುಕ್ರವಾರ ಮಧ್ಯಾಹ್ನ ಭಾರತದ ತೇಜಸ್ ಯುದ್ಧ ವಿಮಾನ ಪತನಗೊಂಡಿದೆ. ಅಲ್ ಮಕ್ತೌಮ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಹಾರಾಟ ನಡೆಸುತ್ತಿದ್ದ ವಿಮಾನ ನೋಡ ನೋಡುತ್ತಿದ್ದಂತೆಯೇ ಬೆಂಕಿಯುಂಡೆಯಾಗಿ ನೆಲಕ್ಕೆ ಅಪ್ಪಳಿಸಿದೆ.

ಸ್ಪೋಟದ ಬಳಿಕ ದಟ್ಟವಾದ ಕಪ್ಪು ಹೊಗೆ ಆವರಿಸಿದೆ. ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಅಭಿವೃದ್ಧಿಪಡಿಸಿದ ಏಕ ಆಸನದ ಹಗುರ ಯುದ್ಧ ವಿಮಾನ (LCA) ವಿಮಾನವು ಸ್ಥಳೀಯ ಸಮಯ ಮಧ್ಯಾಹ್ನ 2:10 ರ ಸುಮಾರಿಗೆ ಪತನವಾಗಿದೆ.

ಪೈಲಟ್‌ನ ಸ್ಥಿತಿ ಅಥವಾ ಸ್ಫೋಟ ಸಂಭವಿಸಿದೆಯೇ ಎಂಬುದರ ಕುರಿತು ಅಧಿಕಾರಿಗಳು ತಕ್ಷಣಕ್ಕೆ ದೃಢಿಕರಿಸಿಲ್ಲ. ಭಾರತೀಯ ವಾಯುಪಡೆಯಿಂದ ಅಧಿಕೃತ ಹೇಳಿಕೆಯನ್ನು ನಿರೀಕ್ಷಿಸಲಾಗಿದೆ.

ವಿಶ್ವದ ಅತಿದೊಡ್ಡ ವಾಯುಯಾನ ಪ್ರದರ್ಶನಗಳಲ್ಲಿ ಒಂದಾದ ದ್ವೈವಾರ್ಷಿಕ ದುಬೈ ಏರ್ ಶೋ ವೇಳೆ ಈ ಅಪಘಾತ ಸಂಭವಿಸಿದೆ. ಎಮಿರೇಟ್ಸ್ ಮತ್ತು ಪ್ಲೈ ದುಬೈನಿಂದ ಬಹು ಬಿಲಿಯನ್ ಡಾಲರ್ ಮೊತ್ತದ ವಿಮಾನ ಖರೀದಿ ಸೇರಿದಂತೆ ಹಲವು ಮಹತ್ವದ ಘೋಷಣೆಗಳನ್ನು ಏರ್ ಶೋ ವೇಳೆಯಲ್ಲಿ ಘೋಷಿಸಲಾಗಿದೆ. ಇದು ಎರಡನೇ ತೇಜಸ್ ವಿಮಾನದ ಅಪಘಾತವಾಗಿದೆ. ಮಾರ್ಚ್ 2024ರಲ್ಲಿ ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ತೇಜಸ್ ಯುದ್ಧವಿಮಾನವು ಪತನಗೊಂಡಿತ್ತು.ಆದರೆ ಪೈಲಟ್ ಸುರಕ್ಷಿತವಾಗಿ ಜಿಗಿಯುವ ಮೂಲಕ ಪ್ರಾಣಾಪಾಯದಿಂದ ಪಾರಾಗಿದ್ದರು.

ತೇಜಸ್ 4.5 ಪೀಳಿಗೆಯ ಬಹುಪಯೋಗಿ ಯುದ್ಧ ವಿಮಾನವಾಗಿದ್ದು, ವಾಯು-ರಕ್ಷಣಾ ಕಾರ್ಯಾಚರಣೆ, ಆಕ್ರಮಣಕಾರಿ ವಾಯು ಬೆಂಬಲ ಮತ್ತು ಯುದ್ಧ ಕಾರ್ಯಾಚರಣೆಗಳನ್ನು ನಿರ್ವಹಿಸಲು ನಿರ್ಮಿಸಲಾಗಿದೆ. ಇದು ಹಗುರವಾದ ಮತ್ತು ಚಿಕ್ಕ ಯುದ್ಧವಿಮಾನಗಳಲ್ಲಿ ಒಂದಾಗಿದೆ.

ಪೈಲಟ್ ಸಾವು ದೃಢ

ಅಪಘಾತದಲ್ಲಿ ಪೈಲಟ್ ಸಾವನ್ನಪ್ಪಿರುವುದನ್ನು ಭಾರತೀಯ ವಾಯುಪಡೆ ದೃಢಪಡಿಸಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಪೈಲಟ್ ಸಾವನ್ನಪ್ಪಿದ್ದಾರೆ. ಈ ದು:ಖದ ಸಂದರ್ಭದಲ್ಲಿ ಅವರ ಕುಟುಂಬದೊಂದಿಗೆ ದೃಢವಾಗಿ ನಿಲ್ಲುವುದಾಗಿ ತಿಳಿಸಿದೆ.

ಅಪಘಾತಕ್ಕೆ ಏನು ಕಾರಣ ಎಂಬುದನ್ನು ತಿಳಿಯಲು ವಿಚಾರಣಾ ನ್ಯಾಯಾಲಯ ಸ್ಥಾಪಿಸಲಾಗುವುದು ಎಂದು ಭಾರತೀಯ ವಾಯುಪಡೆ ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕರ್ನಾಟಕ ಸೇರಿ ದೇಶಾದ್ಯಂತ Pakನ ISI ಬೆಂಬಲಿತ ಗ್ಯಾಂಗಸ್ಟರ್ ಶಹಜಾದ್ ಭಟ್ಟಿ ಜಾಲದ 200ಕ್ಕೂ ಹೆಚ್ಚು ಜನರ ಬಂಧನ: ಅಮಿತ್ ಶಾ

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸಭೆಯಲ್ಲಿ ಪ್ರತಿಭಟನೆ, ಗದ್ದಲ, ಕಲಾಪಕ್ಕೆ ಅಡ್ಡಿ!

'ಸ್ವಲ್ಪ ತಾಳ್ಮೆಯಿಂದ ಕಾಯಿರಿ' ಪಾಕಿಸ್ತಾನ, ಬಾಂಗ್ಲಾದೇಶ, ಅಪ್ಘಾನಿಸ್ತಾನ ಮತ್ತೆ ಭಾರತಕ್ಕೆ ಸೇರಿಕೊಳ್ಳುವ ದಿನ ಬರುತ್ತದೆ- ಬಾಬಾ ರಾಮದೇವ್!

ಆಪ್ ಕಿ ಅದಾಲತ್‌ನಲ್ಲಿ 'ಗಡ್ಡದ ಹಿಂದಿನ ಕಥೆ ಬಿಚ್ಚಿಟ್ಟ ಸೂಪರ್ ಸ್ಟಾರ್ ಯಶ್! Video

BJYM: Tejasvi Surya ಸ್ಥಾನಕ್ಕೆ ನೂತನ ನೇಮಕ; ಯಾರು ಈ ಡಾ. ಹೇಮಾಂಗ್ ಜೋಶಿ?