ಶ್ರೀಲಂಕಾದಲ್ಲಿ ಪ್ರವಾಹ 
ವಿದೇಶ

ಶ್ರೀಲಂಕಾದಲ್ಲಿ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ 31 ಸಾವು, 14 ಮಂದಿ ನಾಪತ್ತೆ

ಭೂಕುಸಿತದಲ್ಲಿ ಸುಮಾರು 400 ಮನೆಗಳು ಹಾನಿಗೊಳಗಾಗಿದ್ದು, 1,100 ಕ್ಕೂ ಹೆಚ್ಚು ಕುಟುಂಬಗಳು ತಾತ್ಕಾಲಿಕ ಆಶ್ರಯ ತಾಣಗಳಿಗೆ ಸ್ಥಳಾಂತರಗೊಂಡಿವೆ.

ಕೊಲಂಬೊ: ಈ ವಾರ ಶ್ರೀಲಂಕಾದಾದ್ಯಂತ ಸುರಿದ ಭಾರೀ ಮಳೆಯಿಂದಾಗಿ ಉಂಟಾದ ಪ್ರವಾಹ ಮತ್ತು ಭೂಕುಸಿತಗಳಲ್ಲಿ ಕನಿಷ್ಠ 31 ಜನರು ಮೃತಪಟ್ಟು 14 ಜನರು ಕಾಣೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬದುಲ್ಲಾದ ಮಧ್ಯ ಚಹಾ ಬೆಳೆಯುವ ಜಿಲ್ಲೆಯಲ್ಲಿ ಹೆಚ್ಚಿನ ಸಾವುಗಳು ಸಂಭವಿಸಿವೆ. ಅಲ್ಲಿ ಪರ್ವತ ಇಳಿಜಾರುಗಳಲ್ಲಿ ಭೂಕುಸಿತ ಉಂಟಾಗಿ ಮನೆಗಳ ಮೇಲೆ ಬಿದ್ದು 16 ಜನರು ಜೀವಂತ ಸಮಾಧಿಯಾಗಿದ್ದಾರೆ ಎಂದು ವಿಪತ್ತು ನಿರ್ವಹಣಾ ಕೇಂದ್ರ (DMC) ಹೇಳಿಕೆಯಲ್ಲಿ ತಿಳಿಸಿದೆ.

ಪಕ್ಕದ ನುವಾರ ಎಲಿಯಾ ಜಿಲ್ಲೆಯಲ್ಲಿ ಇದೇ ರೀತಿ ನಾಲ್ವರು ಮೃತಪಟ್ಟಿದ್ದಾರೆ. ಉಳಿದ ಸಾವುನೋವುಗಳು ಬೇರೆಡೆ ವರದಿಯಾಗಿವೆ.

ಭೂಕುಸಿತದಲ್ಲಿ ಸುಮಾರು 400 ಮನೆಗಳು ಹಾನಿಗೊಳಗಾಗಿದ್ದು, 1,100 ಕ್ಕೂ ಹೆಚ್ಚು ಕುಟುಂಬಗಳು ತಾತ್ಕಾಲಿಕ ಆಶ್ರಯ ತಾಣಗಳಿಗೆ ಸ್ಥಳಾಂತರಗೊಂಡಿವೆ.

ಶ್ರೀಲಂಕಾದಾದ್ಯಂತ ನದಿಗಳಲ್ಲಿ ನೀರಿನ ಮಟ್ಟ ಏರುತ್ತಿದೆ. ತಗ್ಗು ಪ್ರದೇಶಗಳ ನಿವಾಸಿಗಳು ಎತ್ತರದ ಪ್ರದೇಶಗಳಿಗೆ ಸ್ಥಳಾಂತರಗೊಳ್ಳುವಂತೆ ಎಚ್ಚರಿಕೆ ನೀಡಲಾಗಿದೆ.

ಶ್ರೀಲಂಕಾ ಪ್ರಸ್ತುತ ಈಶಾನ್ಯ ಮಾನ್ಸೂನ್ ಋತುವನ್ನು ಅನುಭವಿಸುತ್ತಿದೆ, ಅದರ ಪೂರ್ವಕ್ಕೆ ವಾಯುಭಾರ ಕುಸಿತದಿಂದಾಗಿ ಮಳೆ ತೀವ್ರಗೊಂಡಿದೆ ಎಂದು ಅಲ್ಲಿನ ಹವಾಮಾನ ಇಲಾಖೆ ತಿಳಿಸಿದೆ. ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಹವಾಮಾನ ವೈಪರೀತ್ಯದ ಕಾರಣ ಸರ್ಕಾರ ದೇಶಾದ್ಯಂತ ಶಾಲಾ ಪರೀಕ್ಷೆಗಳನ್ನು ಎರಡು ದಿನಗಳವರೆಗೆ ಸ್ಥಗಿತಗೊಳಿಸಿದೆ.

ಶ್ರೀಲಂಕಾದಾದ್ಯಂತ 100 ಮಿಲಿಮೀಟರ್‌ಗಿಂತಲೂ ಹೆಚ್ಚು ಮಳೆಯಾಗುವ ನಿರೀಕ್ಷೆಯಿದ್ದು, ಈಶಾನ್ಯದ ಕೆಲವು ಪ್ರದೇಶಗಳಲ್ಲಿ 250 ಮಿಲಿಮೀಟರ್ ಮಳೆಯಾಗುವ ಮುನ್ಸೂಚನೆ ಇದೆ.

ಕಳೆದ ವರ್ಷ ಜೂನ್‌ನಲ್ಲಿ ಭಾರಿ ಮಳೆಯ ನಂತರ ಈ ವಾರ ಹವಾಮಾನ ಸಂಬಂಧಿತ ಸಾವುನೋವುಗಳು ಅತ್ಯಧಿಕವಾಗಿದ್ದು, ಆ ಸಮಯದಲ್ಲಿ 26 ಜನರು ಮೃತಪಟ್ಟಿದ್ದಾರೆ. ಡಿಸೆಂಬರ್‌ನಲ್ಲಿ, ಪ್ರವಾಹ ಮತ್ತು ಭೂಕುಸಿತದಿಂದ 17 ಜನರು ಮೃತಪಟ್ಟಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ.29'ರ ಬೆಳಗ್ಗೆ ಸಿದ್ದರಾಮಯ್ಯ ನಿವಾಸಕ್ಕೆ ಡಿಕೆಶಿ ಭೇಟಿ; ಕುತೂಹಲ ಕೆರಳಿಸಿದ CM, DCM ಬ್ರೇಕ್​ಫಾಸ್ಟ್ ಮೀಟಿಂಗ್

ಅಲ್ ಫಲಾಹ್ ಸ್ಥಾಪಕರಿಂದ ಸತ್ತವರ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಭೂಮಿ ಸ್ವಾಧೀನ : ತನಿಖೆಯಲ್ಲಿ ಬಯಲು

ಕೇರಳ: ಕೈಕೊಟ್ಟ ಕ್ರೇನ್, ಸ್ಕೈ ಡಿನ್ನಿಂಗ್ ಗಾಗಿ 150 ಅಡಿ ಎತ್ತರ ಇದ್ದವರ ಜೀವ ಉಳಿದಿದ್ದೇ ಹೆಚ್ಚು!

CM ಪಟ್ಟಕ್ಕಾಗಿ ಫೈಟ್: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಅವಿಶ್ವಾಸ ನಿರ್ಣಯ ಮಂಡಿಸಲು ಬಿಜೆಪಿ ಚಿಂತನೆ

ಪುಟಿದೆದ್ದ ಭಾರತದ ಆರ್ಥಿಕ ಬೆಳವಣಿಗೆ; ಆದರೆ ದ್ವಿತೀಯಾರ್ಧದಲ್ಲಿ ನಿಧಾನಗತಿಯ ಬಗ್ಗೆ ತಜ್ಞರ ಎಚ್ಚರಿಕೆ

SCROLL FOR NEXT