ಶೇಖ್ ಹಸೀನಾ 
ವಿದೇಶ

ಗಲ್ಲು ಶಿಕ್ಷೆ ಬೆನ್ನಲ್ಲೇ ಬಾಂಗ್ಲಾದೇಶ ಪದಚ್ಯುತ ಪ್ರಧಾನಿ ಶೇಖ್ ಹಸೀನಾಗೆ 21 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್

ಸರ್ಕಾರಿ ವಸತಿ ಯೋಜನೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪದ ಮೇಲೆ 78 ವರ್ಷದ ಹಸೀನಾ, ಅವರ ಮಗ ಸಾಜಿಬ್ ವಾಜೆದ್ ಜಾಯ್ ಮತ್ತು ಮಗಳು ಸೈಮಾ ವಾಜೆದ್ ಪುಟುಲ್ ಅವರಿಗೆ ಮೂರು ಪ್ರಕರಣಗಳಲ್ಲಿ ಢಾಕಾ ವಿಶೇಷ ನ್ಯಾಯಾಲಯ ಶಿಕ್ಷೆ ವಿಧಿಸಿದೆ.

ಢಾಕಾ: ಸರ್ಕಾರಿ ವಸತಿ ಯೋಜನೆಯಡಿ ನಿವೇಶನ ಹಂಚಿಕೆಯಲ್ಲಿ ಅಕ್ರಮಕ್ಕೆ ಸಂಬಂಧಿಸಿದಂತೆ ಬಾಂಗ್ಲಾದೇಶ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರಿಗೆ ಢಾಕಾ ನ್ಯಾಯಾಲಯ ಗುರುವಾರ 21 ವರ್ಷ ಜೈಲು ಶಿಕ್ಷೆ ಮತ್ತು ಅವರ ಇಬ್ಬರು ಮಕ್ಕಳಿಗೆ ತಲಾ ಐದು ವರ್ಷ ಜೈಲು ಶಿಕ್ಷೆ ವಿಧಿಸಿದೆ.

ರಾಜಧಾನಿಗೆ ಹೊಂದಿಕೊಂಡಿರುವ ಪುರ್ಬಾಚಲ್‌ನಲ್ಲಿರುವ ಸರ್ಕಾರಿ ವಸತಿ ಯೋಜನೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪದ ಮೇಲೆ ಈಗಾಗಲೇ ಗಲ್ಲು ಶಿಕ್ಷೆಗೆ ಗುರಿಯಾಗಿರುವ 78 ವರ್ಷದ ಹಸೀನಾ, ಅವರ ಮಗ ಸಾಜಿಬ್ ವಾಜೆದ್ ಜಾಯ್ ಮತ್ತು ಮಗಳು ಸೈಮಾ ವಾಜೆದ್ ಪುಟುಲ್ ಅವರಿಗೆ ಮೂರು ಪ್ರಕರಣಗಳಲ್ಲಿ ಢಾಕಾ ವಿಶೇಷ ನ್ಯಾಯಾಲಯ ಶಿಕ್ಷೆ ವಿಧಿಸಿದೆ.

"ಯಾವುದೇ ಅರ್ಜಿ ಸಲ್ಲಿಸದ ಶೇಖ್ ಹಸೀನಾ ಅವರಿಗೆ ಅಧಿಕೃತ ನ್ಯಾಯವ್ಯಾಪ್ತಿಯನ್ನು ಮೀರಿ ನಿವೇಶನ ಹಂಚಿಕೆ ಮಾಡಲಾಗಿದೆ" ಎಂದು ನ್ಯಾಯಾಧೀಶ ಮೊಹಮ್ಮದ್ ಅಬ್ದುಲ್ಲಾ ಅಲ್ ಮಾಮುನ್ ಅವರು ತೀರ್ಪು ನೀಡುತ್ತಾ ಹೇಳಿದ್ದಾರೆ.

ಹಂಚಿಕೆಗೆ ಸಂಬಂಧಿಸಿದ ಮೂರು ಪ್ರಕರಣಗಳಲ್ಲಿ ತಲಾ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದ್ದು, ಪದಚ್ಯುತ ಪ್ರಧಾನಿಗೆ ಒಟ್ಟು 21 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಹಸೀನಾ ಕುಟುಂಬದ ಹೊರತಾಗಿ, ಮಾಜಿ ಕಿರಿಯ ವಸತಿ ಸಚಿವ ಷರೀಫ್ ಅಹ್ಮದ್ ಮತ್ತು ವಸತಿ ಸಚಿವಾಲಯ ಅಧಿಕಾರಿಗಳು ಸೇರಿದಂತೆ ಇತರ 20 ಜನರನ್ನು ಪ್ರಕರಣಗಳಲ್ಲಿ ವಿಚಾರಣೆಗೆ ಒಳಪಡಿಸಲಾಗಿದೆ ಮತ್ತು ಒಬ್ಬರನ್ನು ಹೊರತುಪಡಿಸಿ, ಎಲ್ಲರಿಗೂ ವಿಭಿನ್ನ ಜೈಲು ಶಿಕ್ಷೆ ವಿಧಿಸಲಾಗಿದೆ. ಖುಲಾಸೆಗೊಂಡ ವ್ಯಕ್ತಿ ಸಚಿವಾಲಯದ ಕಿರಿಯ ಅಧಿಕಾರಿಯಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತಮಿಳುನಾಡು ಬಳಿಕ ಕರ್ನಾಟಕ ವಿಧಾನಸಭೆ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲರ ನಿರಾಕರಣೆ!

'OYO ಅಲ್ಲ': 2 ಗಂಟೆ ರೈಲಿನ ಶೌಚಾಲಯದೊಳಗೆ ಲಾಕ್ ಮಾಡಿಕೊಂಡಿದ್ದ ಜೋಡಿ, 'ನನ್ನ ಇಷ್ಟ' ಎಂದ ಯುವತಿ - Video

ಸುಲಿಗೆ ಪ್ರಕರಣ: 111 ವಿದೇಶಿ ಪ್ರಜೆಗಳ ಪಾತ್ರದ ಬಗ್ಗೆ ಕೆನಡಾ ತನಿಖೆ, ಪಂಜಾಬ್‌ ಮೂಲದವರೇ ಹೆಚ್ಚು!

ಮಲೆ ಮಹದೇಶ್ವರ ದೇವಸ್ಥಾನಕ್ಕೆ ತೆರಳುತ್ತಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ; ಭಕ್ತ ಸಾವು; ಪಾದಯಾತ್ರೆ ಸ್ಥಗಿತ!

ಶಿವಕುಮಾರ ಸ್ವಾಮೀಜಿಯ ಆದರ್ಶಗಳು ಆಡಳಿತಕ್ಕೆ ಮಾರ್ಗದರ್ಶನ ನೀಡುತ್ತವೆ: ಉಪ ರಾಷ್ಟ್ರಪತಿ ರಾಧಾಕೃಷ್ಣನ್

SCROLL FOR NEXT