ಪ್ರಯಾಣಿಕ ರೈಲು ಗುರಿಯಾಗಿಸಿ ದಾಳಿ 
ವಿದೇಶ

Russian strike: ಉಕ್ರೇನ್‌ ರೈಲು ನಿಲ್ದಾಣದಲ್ಲಿ ರಷ್ಯಾ 'ಡ್ರೋನ್' ದಾಳಿ; ಓರ್ವ ಸಾವು, 30 ಮಂದಿಗೆ ಗಾಯ! Video

ರಷ್ಯಾ ಉದ್ದೇಶಪೂರ್ವಕವಾಗಿ ಪ್ರಯಾಣಿಕ ರೈಲನ್ನು ಗುರಿಯಾಗಿಸಿಕೊಂಡಿದೆ ಎಂದು ಉಕ್ರೇನ್ ವಿದೇಶಾಂಗ ಸಚಿವರು ಹೇಳಿದ್ದಾರೆ.

ಕೈವ್‌: ಉಕ್ರೇನ್‌ನ ಸುಮಿ ಪ್ರಾಂತ್ಯದಲ್ಲಿರುವ ರೈಲ್ವೆ ನಿಲ್ದಾಣದಲ್ಲಿ ರೈಲನ್ನು ಗುರಿಯಾಗಿಸಿಕೊಂಡು ರಷ್ಯಾ ಶನಿವಾರ ನಡೆಸಿದ ಡ್ರೋನ್ ದಾಳಿಯಲ್ಲಿ ಒಬ್ಬರು ಮೃತಪಟ್ಟಿದ್ದು, ಇತರ 30 ಮಂದಿ ಗಾಯಗೊಂಡಿದ್ದಾರೆ.

ರಷ್ಯಾ ಉದ್ದೇಶಪೂರ್ವಕವಾಗಿ ಪ್ರಯಾಣಿಕ ರೈಲನ್ನು ಗುರಿಯಾಗಿಸಿಕೊಂಡಿದೆ ಎಂದು ಉಕ್ರೇನ್ ವಿದೇಶಾಂಗ ಸಚಿವರು ಹೇಳಿದ್ದಾರೆ.

"ಸುಮಿ ಪ್ರದೇಶದ ಶೋಸ್ಟ್ಕಾದಲ್ಲಿರುವ ರೈಲು ನಿಲ್ದಾಣದ ಮೇಲೆ ರಷ್ಯಾದ ಕ್ರೂರ ಡ್ರೋನ್ ದಾಳಿ ಎಂದು ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಟೆಲಿಗ್ರಾಮ್‌ನಲ್ಲಿ ಬರೆದುಕೊಂಡಿದ್ದಾರೆ. ದಾಳಿಯಿಂದ ಬೆಂಕಿಯಿಂದ ಹೊತ್ತಿ ಉರಿಯುತ್ತಿರು ಪ್ರಯಾಣಿಕರ ರೈಲಿನ ವಿಡಿಯೋವನ್ನು ಅವರು ಪೋಸ್ಟ್ ಮಾಡಿದ್ದಾರೆ.

ರಷ್ಯಾದೊಂದಿಗಿನ ಶಾಂತಿ ಮಾತುಕತೆ ವಿಫಲದಿಂದ ಹತಾಶೆಗೊಳಗಾಗಿರುವ ಝೆಲೆನ್ಸ್ಕಿ, ರಷ್ಯಾ ವಿರುದ್ಧ ಬಲವಾದ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಪ್ರತಿದಿನ ರಷ್ಯಾ ಮುಗ್ದ ಜನರ ಜೀವಗಳನ್ನು ತೆಗೆದುಕೊಳ್ಳುತ್ತಿದೆ. ಇದನ್ನು ಜಗತ್ತು ನಿರ್ಲಕ್ಷಿಸಬಾರದು. ಇದೊಂದು ಭಯೋತ್ಪಾದನಾ ಕೃತ್ಯ ಎಂದು ಕರೆದಿದ್ದಾರೆ.

ಯುರೋಪಿಯನ್ ಕಮಿಷನ್ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲೇಯೆನ್ ರಷ್ಯಾ ದಾಳಿಯನ್ನು ಖಂಡಿಸಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ಉಕ್ರೇನ್‌ನೊಂದಿಗೆ ಯುರೋಪಿಯನ್ ಕಮಿಷನ್ ನಿಂತಿದೆ. ರಷ್ಯಾ ಶಾಶ್ವತವಾಗಿ ಶಾಂತಿ ಒಪ್ಪಂದ ಒಪ್ಪುವವರೆಗೂ ಅದರ ಮೇಲೆ ಒತ್ತಡವನ್ನು ಹೆಚ್ಚಿಸುವುದನ್ನು ಮುಂದುವರಿಸಬೇಕು ಎಂದು ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್