ಭಾರತ-ಪಾಕಿಸ್ತಾನ  
ವಿದೇಶ

ಭಾರತೀಯ ನಾಯಕರ ಹೇಳಿಕೆಗಳು ದುರಂತ ವಿನಾಶಕ್ಕೆ ದಾರಿ ಮಾಡಿಕೊಡುತ್ತವೆ: ಪಾಕಿಸ್ತಾನ ಸೇನೆ ಎಚ್ಚರಿಕೆ

ರಕ್ಷಣಾ ಸಚಿವ ರಾಜನಾಥ್ ಸಿಂಗ್, ನಾಗರಿಕರನ್ನು ರಕ್ಷಿಸಲು ಮತ್ತು ದೇಶದ ಏಕತೆ ಮತ್ತು ಸಮಗ್ರತೆಯನ್ನು ಕಾಪಾಡಲು ಭಾರತವು ಅಗತ್ಯವಿದ್ದಾಗ ಯಾವುದೇ ಗಡಿಯನ್ನು ದಾಟಬಹುದು ಎಂದು ಹೇಳಿದ್ದರು.

ಇಸ್ಲಾಮಾಬಾದ್: ಭಾರತೀಯ ಸೇನಾಧಿಕಾರಿಗಳು ಮತ್ತು ರಾಜಕೀಯ ನಾಯಕರು ಇತ್ತೀಚೆಗೆ ನೀಡಿರುವ ಹೇಳಿಕೆಗಳನ್ನು ಪಾಕಿಸ್ತಾನ ಸೇನೆ ಶನಿವಾರ ಟೀಕಿಸಿದ್ದು, ಎರಡೂ ದೇಶಗಳ ನಡುವಿನ ಭವಿಷ್ಯದ ಸಂಘರ್ಷವು ದುರಂತ ವಿನಾಶಕ್ಕೆ ಕಾರಣವಾಗಬಹುದು ಎಂದು ಎಚ್ಚರಿಕೆ ನೀಡಿದೆ.

ಪಾಕಿಸ್ತಾನ ಸೇನೆಯು ಹೇಳಿಕೆಯಲ್ಲಿ, ಇತಂಹ ಬೇಜವಾಬ್ದಾರಿ ಹೇಳಿಕೆಗಳು ದಕ್ಷಿಣ ಏಷ್ಯಾದಲ್ಲಿ ಶಾಂತಿ ಮತ್ತು ಸ್ಥಿರತೆಗೆ ಆಕ್ರಮಣಕ್ಕಾಗಿ ಅನಿಯಂತ್ರಿತ ನೆಪಗಳನ್ನು ಸೃಷ್ಟಿಸುವ ಹೊಸ ಪ್ರಯತ್ನವನ್ನು ಸೂಚಿಸುತ್ತವೆ ಎಂದು ಹೇಳಿದೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್, ನಾಗರಿಕರನ್ನು ರಕ್ಷಿಸಲು ಮತ್ತು ದೇಶದ ಏಕತೆ ಮತ್ತು ಸಮಗ್ರತೆಯನ್ನು ಕಾಪಾಡಲು ಭಾರತವು ಅಗತ್ಯವಿದ್ದಾಗ ಯಾವುದೇ ಗಡಿಯನ್ನು ದಾಟಬಹುದು ಎಂದು ಹೇಳಿದ್ದರು.

ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಪಾಕಿಸ್ತಾನಕ್ಕೆ ಕಠಿಣ ಎಚ್ಚರಿಕೆ ನೀಡಿದ್ದು, ನೆರೆಯ ದೇಶವು ವಿಶ್ವ ಭೂಪಟದಲ್ಲಿ ತನ್ನ ಸ್ಥಾನವನ್ನು ಉಳಿಸಿಕೊಳ್ಳಲು ಬಯಸಿದರೆ ತನ್ನ ನೆಲದಲ್ಲಿ ಭಯೋತ್ಪಾದನೆಯನ್ನು ಪ್ರಾಯೋಜಿಸುವುದನ್ನು ನಿಲ್ಲಿಸುವಂತೆ ಒತ್ತಾಯಿಸಿದ್ದಾರೆ.

ಭವಿಷ್ಯದಲ್ಲಿ ಮಿಲಿಟರಿ ಸಂಘರ್ಷ ಉಂಟಾದರೆ ಆಪರೇಷನ್ ಸಿಂದೂರ್ ಸಮಯದಲ್ಲಿ ಭಾರತ ತೋರಿಸಿದ ಸಂಯಮವನ್ನು ಪುನರಾವರ್ತಿಸಲಾಗುವುದಿಲ್ಲ ಎಂದು ಅವರು ಹೇಳಿದರು. ಭಾರತೀಯ ಸೈನಿಕರು ಕ್ರಮಕ್ಕೆ ಸಿದ್ಧರಾಗಿರಲು ಕರೆ ನೀಡಿದರು.

ಆಪರೇಷನ್ ಸಿಂದೂರ್ ಸಮಯದಲ್ಲಿ ಭಾರತೀಯ ದಾಳಿಯಲ್ಲಿ ಅಮೆರಿಕ ಮೂಲದ ಎಫ್ -16 ಜೆಟ್‌ಗಳು ಸೇರಿದಂತೆ ಕನಿಷ್ಠ ಒಂದು ಡಜನ್ ಪಾಕಿಸ್ತಾನಿ ಮಿಲಿಟರಿ ವಿಮಾನಗಳು ನಾಶವಾಗಿವೆ ಅಥವಾ ಹಾನಿಗೊಳಗಾಗಿವೆ ಎಂದು ವಾಯುಪಡೆಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಎ ಪಿ ಸಿಂಗ್ ಹೇಳಿದ್ದಾರೆ.

ಭಾರತೀಯ ರಕ್ಷಣಾ ಸಚಿವರು ಮತ್ತು ಭೂಸೇನೆ ಮತ್ತು ವಾಯುಪಡೆ ಮುಖ್ಯಸ್ಥರ ಹೆಚ್ಚು ಪ್ರಚೋದನಕಾರಿ ಹೇಳಿಕೆಗಳ ಹಿನ್ನೆಲೆಯಲ್ಲಿ, ಭವಿಷ್ಯದ ಸಂಘರ್ಷವು ಭೀಕರ ವಿನಾಶಕ್ಕೆ ಕಾರಣವಾಗಬಹುದು ಎಂದು ನಾವು ಎಚ್ಚರಿಸುತ್ತೇವೆ. ಹೊಸ ಸುತ್ತಿನ ಯುದ್ಧ ಆರಂಭವಾದರೆ, ಪಾಕಿಸ್ತಾನ ಹಿಂಜರಿಯುವುದಿಲ್ಲ. ಯಾವುದೇ ಹಿಂಜರಿಕೆ ಅಥವಾ ಸಂಯಮವಿಲ್ಲದೆ ನಾವು ದೃಢನಿಶ್ಚಯದಿಂದ ಪ್ರತಿಕ್ರಿಯಿಸುತ್ತೇವೆ ಎಂದು ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel