ಸಾಂದರ್ಭಿಕ ಚಿತ್ರ 
ವಿದೇಶ

ಇಟಲಿಯಲ್ಲಿ ಭೀಕರ ಅಪಘಾತ: ನಾಲ್ವರು ಭಾರತೀಯರು ಸಾವು, 6 ಮಂದಿಗೆ ಗಾಯ

ಭಾರತೀಯರು ಪ್ರಯಾಣಿಸುತ್ತಿದ್ದ ರೆನಾಲ್ಟ್ ಸಿನಿಕ್‌ ಎಸ್ ಯುವಿ ಕಾರು, ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಏಳು ಆಸನಗಳ ಈ ಕಾರಿನಲ್ಲಿ 10 ಜನ ಪ್ರಯಾಣಿಸುತ್ತಿದ್ದರು.

ಮಟೇರಾ: ದಕ್ಷಿಣ ಇಟಲಿಯ ಮಟೇರಾ ನಗರದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಭಾರತೀಯರು ಸಾವನ್ನಪ್ಪಿದ್ದಾರೆ ಎಂದು ರೋಮ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಸೋಮವಾರ ತಿಳಿಸಿದೆ.

ಶನಿವಾರ ಅಗ್ರಿ ವ್ಯಾಲಿಯ ಮಟೇರಾ ನಗರದ ಸ್ಕ್ಯಾಂಜಾನೊ ಜೊನಿಕೊ ಪುರಸಭೆಯಲ್ಲಿ ಭಾರತೀಯರು ಪ್ರಯಾಣಿಸುತ್ತಿದ್ದ ರೆನಾಲ್ಟ್ ಸಿನಿಕ್‌ ಎಸ್ ಯುವಿ ಕಾರು, ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಏಳು ಆಸನಗಳ ಈ ಕಾರಿನಲ್ಲಿ 10 ಜನ ಪ್ರಯಾಣಿಸುತ್ತಿದ್ದರು ಎಂದು ಇಟಾಲಿಯನ್ ಸುದ್ದಿ ಸಂಸ್ಥೆ ANSA ಭಾನುವಾರ ವರದಿ ಮಾಡಿದೆ.

ಮೃತರನ್ನು ಕುಮಾರ್ ಮನೋಜ್(34), ಸಿಂಗ್ ಸುರ್ಜಿತ್(33), ಸಿಂಗ್ ಹರ್ವಿಂದರ್(31) ಮತ್ತು ಸಿಂಗ್ ಜಸ್ಕರನ್(20) ಎಂದು ಗುರುತಿಸಲಾಗಿದೆ.

"ದಕ್ಷಿಣ ಇಟಲಿಯ ಮಟೇರಾದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ನಾಲ್ವರು ಭಾರತೀಯ ಪ್ರಜೆಗಳ ದುರಂತ ಸಾವಿಗೆ ಭಾರತೀಯ ರಾಯಭಾರ ಕಚೇರಿ ತೀವ್ರ ಸಂತಾಪ ಸೂಚಿಸುತ್ತದೆ" ಎಂದು ಭಾರತೀಯ ರಾಯಭಾರ ಕಚೇರಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದೆ.

"ವಿವರಗಳನ್ನು ಪಡೆಯಲು ನಾವು ಸ್ಥಳೀಯ ಇಟಾಲಿಯನ್ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದೇವೆ. ಸಂಬಂಧಪಟ್ಟ ಕುಟುಂಬಗಳಿಗೆ ರಾಯಭಾರ ಕಚೇರಿ ಎಲ್ಲಾ ಸಂಭಾವ್ಯ ಕಾನ್ಸುಲರ್ ಸಹಾಯ ಒದಗಿಸುತ್ತದೆ" ಎಂದು ರಾಯಭಾರ ಕಚೇರಿ ತಿಳಿಸಿದೆ.

ಅಪಘಾತದಲ್ಲಿ ಗಾಯಗೊಂಡ ಐದು ಮಂದಿಯನ್ನು ಪೊಲಿಕೊರೊ(ಮಟೆರಾ) ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ಮತ್ತೊಬ್ಬರನ್ನು ಪೊಟೆಂಜಾದ ಸ್ಯಾನ್ ಕಾರ್ಲೊ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ANSA ವರದಿ ಮಾಡಿದೆ.

ಟ್ರಕ್ ಚಾಲಕನಿಗೆ ಯಾವುದೇ ಹಾನಿಯಾಗಿಲ್ಲ. ಮಟೆರಾ ಪಬ್ಲಿಕ್ ಪ್ರಾಸಿಕ್ಯೂಟರ್ ಕಚೇರಿ ಈ ಅಪಘಾತದ ತನಿಖೆ ನಡೆಸುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೇಶವಿರೋಧಿ ಚಟುವಟಿಕೆ ಆರೋಪ: ಕಾಶ್ಮೀರ ಟೈಮ್ಸ್ ದಿನಪತ್ರಿಕೆ ಕಚೇರಿಯ SIA ದಾಳಿ; Ak-47 ಕಾರ್ಟ್ರಿಡ್ಜ್‌, ಗ್ರೆನೇಡ್ ಲಿವರ್‌ ವಶಕ್ಕೆ!

ರೋಚಕ ಘಟ್ಟ ತಲುಪಿದ 'ಸಿಎಂ ಬದಲಾವಣೆ' ಚರ್ಚೆ: ಡಿಕೆಶಿ ಪರ ಶಾಸಕರು ದಿಢೀರ್ ದೆಹಲಿ ಯಾತ್ರೆ; ಹೈಕಮಾಂಡ್ ಮುಂದೆ ಶಕ್ತಿ ಪ್ರದರ್ಶನಕ್ಕೆ ಸಜ್ಜು!

ಅಕ್ರಮ ವಲಸಿಗರಿಗೆ ಅಸ್ಸಾಂ ಸರ್ಕಾರದ 'ಶಾಕ್': 'ಅತ್ಯಪರೂಪದ ಕಾನೂನು' ಜಾರಿ, 24 ಗಂಟೆಯೊಳಗೆ ಗಡಿಪಾರು!

"ಕೆಲಸದ ಹೊರೆ ನಿರ್ವಹಣೆ ಅಗತ್ಯವಿದ್ದರೆ, IPL ಬಿಡಿ": ಶುಭ್‌ಮನ್ ಗಿಲ್‌ಗೆ ಖಡಕ್ ಸಂದೇಶ!

ಭಾರತದ ಬೆನ್ನಿಗೆ ಚೂರಿ?: ದೆಹಲಿ ಬಾಂಬ್ ಸ್ಫೋಟಕ್ಕೂ ಅಫ್ಘಾನಿಸ್ತಾನಕ್ಕೂ ನಂಟು ಬಹಿರಂಗ; ಕರ್ನಾಟಕಕ್ಕೂ ಉಗ್ರನ ಭೇಟಿ!

SCROLL FOR NEXT