ಸಾಂದರ್ಭಿಕ ಚಿತ್ರ 
ವಿದೇಶ

Qatar Airways ಎಡವಟ್ಟು: ಸಸ್ಯಾಹಾರಿಗೆ ಮಾಂಸಾಹಾರ ನೀಡಿದ ಸಿಬ್ಬಂದಿ; ಉಸಿರುಗಟ್ಟಿ ಪ್ರಯಾಣಿಕ ಸಾವು

ದಕ್ಷಿಣ ಕ್ಯಾಲಿಫೋರ್ನಿಯಾದ ನಿವೃತ್ತ ಹೃದ್ರೋಗ ತಜ್ಞ ಡಾ. ಅಶೋಕ ಜಯವೀರ ಮೃತಪಟ್ಟ ಪ್ರಯಾಣಿಕ. ಲಾಸ್‌ ಏಂಜಲೀಸ್‌ನಿಂದ ಕೊಲಂಬೊಗೆ ವಿಮಾನದಲ್ಲಿ ಪ್ರಯಾಣ ಬೆಳೆಸಿದ್ದರು. ಇವರು ಸಸ್ಯಹಾರಿ ಊಟ ಆರ್ಡರ್‌ ಮಾಡಿದ್ದರು.

ಕೊಲೊಂಬೊ: ಕತಾರ್ ಏರ್‌ವೇಸ್ ವಿಮಾನದಲ್ಲಿ 85 ವರ್ಷದ ಸಸ್ಯಾಹಾರಿ ಪ್ರಯಾಣಿಕನೊಬ್ಬ ಮಾಂಸಾಹಾರಿ ಊಟ ಸೇವಿಸಿ ನಂತರ ಉಸಿರುಗಟ್ಟಿ ಸಾವನ್ನಪ್ಪಿದ್ದಾನೆ.

ದಕ್ಷಿಣ ಕ್ಯಾಲಿಫೋರ್ನಿಯಾದ ನಿವೃತ್ತ ಹೃದ್ರೋಗ ತಜ್ಞ ಡಾ. ಅಶೋಕ ಜಯವೀರ ಮೃತಪಟ್ಟ ಪ್ರಯಾಣಿಕ. ಲಾಸ್‌ ಏಂಜಲೀಸ್‌ನಿಂದ ಕೊಲಂಬೊಗೆ ವಿಮಾನದಲ್ಲಿ ಪ್ರಯಾಣ ಬೆಳೆಸಿದ್ದರು. ಇವರು ಸಸ್ಯಹಾರಿ ಊಟ ಆರ್ಡರ್‌ ಮಾಡಿದ್ದರು. ಆದರೆ, ಅದ್ಯಾವುದೂ ಲಭ್ಯವಿಲ್ಲ ಎಂದು ವಿಮಾನ ಸಿಬ್ಬಂದಿ ತಿಳಿಸಿದರು. ಬಳಿಕ ಮಾಂಸಾಹಾರ ಊಟವನ್ನೇ ತಂದುಕೊಟ್ಟರು. ಅದನ್ನೇ ತಿನ್ನುವಂತೆ ಇತರೆ ಪ್ರಯಾಣಿಕರು ಸಲಹೆ ನೀಡಿದರು.

ಕೊನೆಗೆ ಮಾಂಸಾಹಾರ ಸೇವಿಸುವಾಗ ಪ್ರಯಾಣಿಕನಿಗೆ ಉಸಿರುಗಟ್ಟುವಂತಾಗಿದೆ. ಕೊನೆಗೆ ಪ್ರಜ್ಞೆ ಕಳೆದುಕೊಂಡರು. ಅವರನ್ನು ಎಚ್ಚರಿಸಲು ಪ್ರಯತ್ನಿಸಲಾಯಿತು. ಆದರೆ, ಪ್ರಯಾಣಿಕನ ಸ್ಥಿತಿ ಹದಗೆಟ್ಟಿತ್ತು. ವಿಮಾನವು ಅಂತಿಮವಾಗಿ ಸ್ಕಾಟ್ಲೆಂಡ್‌ನ ಎಡಿನ್‌ಬರ್ಗ್‌ನಲ್ಲಿ ಇಳಿಯಿತು.

ಅಲ್ಲಿ ಪ್ರಯಾಣಿಕನನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಅಷ್ಟರಲ್ಲಾಗಲೇ ವ್ಯಕ್ತಿ ಮೃತಪಟ್ಟಿದ್ದ. ಅವರು ಆಸ್ಪಿರೇಷನ್ ನ್ಯುಮೋನಿಯಾದಿಂದ ಕೊನೆಯುಸಿರೆಳೆದಿದ್ದಾರೆ.

ಮೃತ ಪ್ರಯಾಣಿಕನ ಪುತ್ರ ಸೂರ್ ಜಯವೀರ್ ಕತಾರ್‌ ಏರ್‌ವೇಸ್‌ ವಿರುದ್ಧ ಮೊಕದ್ದಮೆ ಹೂಡಿದ್ದಾರೆ. ಊಟ ಮತ್ತು ವೈದ್ಯಕೀಯ ಸೇವೆಯಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆಂದು ಆರೋಪಿಸಿದ್ದಾರೆ. ವಿಮಾನಯಾನ ಸಂಸ್ಥೆಯು ಮೊದಲೇ ಆರ್ಡರ್ ಮಾಡಿದ ಸಸ್ಯಾಹಾರಿ ಊಟವನ್ನು ಒದಗಿಸಲು ವಿಫಲವಾಗಿದೆ.

ಜಯವೀರ ಅವರ ವೈದ್ಯಕೀಯ ತುರ್ತುಸ್ಥಿತಿಗೆ ಸೂಕ್ತವಾಗಿ ಸ್ಪಂದಿಸಲಿಲ್ಲ ಎಂದು ಮೊಕದ್ದಮೆಯಲ್ಲಿ ಹೇಳಲಾಗಿದೆ. ಪರಿಹಾರಕ್ಕೂ ಬೇಡಿಕೆ ಇಟ್ಟಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT