ಡೊನಾಲ್ಡ್ ಟ್ರಂಪ್ 
ವಿದೇಶ

Indians sanctioned: ಇರಾನ್‌ನ ತೈಲ ವ್ಯಾಪಾರಕ್ಕೆ ನೆರವು; ಇಬ್ಬರು ಭಾರತೀಯರು ಸೇರಿ 50 ಕಂಪನಿಗಳಿಗೆ ಅಮೆರಿಕ ನಿರ್ಬಂಧ!

ಇರಾನ್ ಆಡಳಿತಕ್ಕೆ ನಿರ್ಣಾಯಕ ಆದಾಯವನ್ನು ಒದಗಿಸಿದ್ದಾರೆ ಮತ್ತು ಅಮೆರಿಕಕ್ಕೆ ಬೆದರಿಕೆ ಹಾಕುವ ಭಯೋತ್ಪಾದಕ ಗುಂಪುಗಳಿಗೆ ಬೆಂಬಲವನ್ನು ಒದಗಿಸಿದ್ದಾರೆ.

ವಾಷಿಂಗ್ಟನ್: ಇರಾನ್ ನ ಪ್ರಮುಖ ರಫ್ತು ಅಂಶಗಳಲ್ಲಿ ಒಂದಾದ ತೈಲ ವ್ಯಾಪಾರಕ್ಕೆ ನೆರವಿನ ಆರೋಪದ ಮೇರೆಗೆ ಇಬ್ಬರು ಭಾರತೀಯ ಪ್ರಜೆಗಳು ಸೇರಿದಂತೆ 50 ಕ್ಕೂ ಹೆಚ್ಚು ಕಂಪನಿಗಳು, ಹಡಗುಗಳ ಮೇಲೆ ಅಮೆರಿಕ ನಿರ್ಬಂಧ ವಿಧಿಸಿದೆ. ಖಜಾನೆ ಇಲಾಖೆಯ ವಿದೇಶಿ ಆಸ್ತಿ ನಿಯಂತ್ರಣ ಕಚೇರಿ (OFAC) ಗುರುವಾರ ನಿರ್ಬಂಧಗಳನ್ನು ಪ್ರಕಟಿಸಿದೆ.

ಇವರು ಒಟ್ಟಾಗಿ ಶತಕೋಟಿ ಡಾಲರ್ ಮೌಲ್ಯದ ಪೆಟ್ರೋಲಿಯಂ ಮತ್ತು ಪೆಟ್ರೋಲಿಯಂ ಉತ್ಪನ್ನಗಳನ್ನು ರಫ್ತು ಮಾಡಲು ಅನುವು ಮಾಡಿಕೊಟ್ಟಿದ್ದಾರೆ. ಇರಾನ್ ಆಡಳಿತಕ್ಕೆ ನಿರ್ಣಾಯಕ ಆದಾಯವನ್ನು ಒದಗಿಸಿದ್ದಾರೆ ಮತ್ತು ಅಮೆರಿಕಕ್ಕೆ ಬೆದರಿಕೆ ಹಾಕುವ ಭಯೋತ್ಪಾದಕ ಗುಂಪುಗಳಿಗೆ ಬೆಂಬಲವನ್ನು ಒದಗಿಸಿದ್ದಾರೆ ಎಂದು ಇಲಾಖೆ ಹೇಳಿಕೆಯಲ್ಲಿ ತಿಳಿಸಿದೆ.

ಇರಾನ್‌ನ ಪೆಟ್ರೋಲಿಯಂ ಮತ್ತು ಪೆಟ್ರೋಕೆಮಿಕಲ್ ರಫ್ತುಗಳನ್ನು ತಡೆಯುವ ಇಲಾಖೆಯ ಪ್ರಯತ್ನಗಳ ಭಾಗವಾಗಿ ಈ ನಿರ್ಬಂಧ ಹೇರಲಾಗಿದೆ. ಖಜಾನೆ ಇಲಾಖೆಯು ಇರಾನ್‌ನ ತೈಲ ರಫ್ತು ಯಂತ್ರದ ಪ್ರಮುಖ ಅಂಶಗಳನ್ನು ಕಿತ್ತುಹಾಕುವ ಮೂಲಕ ಇರಾನ್‌ನ ಹಣದ ಹರಿವನ್ನು ಕುಗ್ಗಿಸುತ್ತಿದೆ ಎಂದು ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ನಿರ್ಬಂಧ ಹಾಕಲಾದ ಭಾರತೀಯ ಪ್ರಜೆಗಳಲ್ಲಿ ವರುಣ್ ಪುಲಾ ಮತ್ತು ಸೋನಿಯಾ ಶ್ರೇಷ್ಠಾ ಸೇರಿದ್ದಾರೆ. ವರುಣಾ ಪುಲಾ ಮಾರ್ಷಲ್ ಐಲ್ಯಾಂಡ್ಸ್ ಮೂಲದ ಬರ್ತಾ ಶಿಪ್ಪಿಂಗ್ ಇಂಕ್ ಅನ್ನು ಹೊಂದಿದ್ದಾರೆ. ಇಲ್ಲಿಂದ ಕಾರ್ಯನಿರ್ವಹಿಸುವ ಹಡಗು ಜುಲೈ 2024 ರಿಂದ ಸುಮಾರು ನಾಲ್ಕು ಮಿಲಿಯನ್ ಬ್ಯಾರೆಲ್ ಇರಾನ್ ಎಲ್ ಪಿಜಿಯನ್ನು ಚೀನಾಕ್ಕೆ ಸಾಗಿಸಿದೆ. ವೆಗಾ ಸ್ಟಾರ್ ಶಿಪ್ ಮ್ಯಾನೇಜ್‌ಮೆಂಟ್ ಪ್ರೈವೇಟ್ ಲಿಮಿಟೆಡ್ ಹೊಂದಿರುವ ಸೋನಿಯಾ ಶ್ರೇಷ್ಠಾ ಅವರ ಕಂಪನಿಯ ಹಡಗು NEPTA ಜನವರಿ 2025 ರಿಂದ ಇರಾನ್ ಮೂಲದ LPG ಅನ್ನು ಪಾಕಿಸ್ತಾನಕ್ಕೆ ಸಾಗಿಸಿದೆ.

ಅಮೆರಿಕದಲ್ಲಿ ಅಥವಾ ಅಮೆರಿಕದ ವ್ಯಕ್ತಿಗಳ ಸ್ವಾಧೀನದಲ್ಲಿ ಅಥವಾ ನಿಯಂತ್ರಣದಲ್ಲಿರುವ ಎಲ್ಲಾ ನಿರ್ಬಂಧಿಸಿದ ವ್ಯಕ್ತಿಗಳ ಆಸ್ತಿಗಳನ್ನು ಬಂದ್ ಮಾಡಿ OFAC ಗೆ ವರದಿ ಮಾಡಬೇಕು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

'ಶಾಂತಿಗಿಂತ ರಾಜಕೀಯವೇ ಹೆಚ್ಚಾಯಿತು': ನೊಬೆಲ್ ಸಮಿತಿ ವಿರುದ್ಧ ಶ್ವೇತಭವನ ಕೆಂಡಾಮಂಡಲ!

SCROLL FOR NEXT