ಮಾರಿಯಾ ಕೊರಿನಾ ಮಚಾಡೊ-ಡೊನಾಲ್ಡ್ ಟ್ರಂಪ್ 
ವಿದೇಶ

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ವೆನೆಜುವೆಲಾದ ಪ್ರಮುಖ ವಿರೋಧ ಪಕ್ಷದ ನಾಯಕಿ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ಮಾರಿಯಾ ಕೊರಿನಾ ಮಚಾಡೊ ಅವರನ್ನು 2025ರ ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತೆ ಎಂದು ಘೋಷಿಸಲಾಗಿದೆ.

ವೆನೆಜುವೆಲಾದ ಪ್ರಮುಖ ವಿರೋಧ ಪಕ್ಷದ ನಾಯಕಿ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ಮಾರಿಯಾ ಕೊರಿನಾ ಮಚಾಡೊ ಅವರನ್ನು 2025ರ ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತೆ ಎಂದು ಘೋಷಿಸಲಾಗಿದೆ. ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಗೆದ್ದ ನಂತರ ಮಾರಿಯಾ ತಮ್ಮ ಮೊದಲ ಪ್ರತಿಕ್ರಿಯೆಯನ್ನು ನೀಡಿದ್ದು ಅವರು ತಮ್ಮ ಪ್ರಶಸ್ತಿಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಅರ್ಪಿಸಿದ್ದಾರೆ.

ಪ್ರಶಸ್ತಿಯನ್ನು ಗೆದ್ದ ನಂತರ ಮಾರಿಯಾ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಪ್ರಶಸ್ತಿಯನ್ನು ಅಮೆರಿಕ ಅಧ್ಯಕ್ಷ ಟ್ರಂಪ್‌ಗೆ ಅರ್ಪಿಸಿದ್ದಾರೆ. ಬಳಲುತ್ತಿರುವ ವೆನೆಜುವೆಲಾದ ಜನರೊಂದಿಗೆ ನಿಂತಿದ್ದಕ್ಕಾಗಿ ಟ್ರಂಪ್ ಅವರನ್ನು ಮಾರಿಯಾ ಶ್ಲಾಘಿಸಿದ್ದಾರೆ. ವೆನೆಜುವೆಲಾದ ಹೋರಾಟವನ್ನು ಗುರುತಿಸಲಾಗಿದೆ. ಇದು ಸ್ವಾತಂತ್ರ್ಯವನ್ನು ಸಾಧಿಸುವ ನಮ್ಮ ಗುರಿಯನ್ನು ಸಾಧಿಸಲು ನಮಗೆ ಸಹಾಯ ಮಾಡುತ್ತದೆ. ನಾವು ವಿಜಯದ ಅಂಚಿನಲ್ಲಿದ್ದೇವೆ. ಇಂದು ಅಧ್ಯಕ್ಷ ಟ್ರಂಪ್, ಅಮೆರಿಕದ ಜನರು, ಲ್ಯಾಟಿನ್ ಅಮೆರಿಕದ ಜನರು ಮತ್ತು ವಿಶ್ವದ ಪ್ರಜಾಪ್ರಭುತ್ವ ರಾಷ್ಟ್ರಗಳಲ್ಲಿ ನಮ್ಮ ವಿಶ್ವಾಸ ಹೆಚ್ಚಾಗಿದೆ. ಸ್ವಾತಂತ್ರ್ಯ ಮತ್ತು ಪ್ರಜಾಪ್ರಭುತ್ವವನ್ನು ಪುನಃಸ್ಥಾಪಿಸುವಲ್ಲಿ ಅವರು ನಮ್ಮ ಪ್ರಮುಖ ಮಿತ್ರರಾಗಿದ್ದಾರೆ. ನಾನು ಈ ಪ್ರಶಸ್ತಿಯನ್ನು ವೆನೆಜುವೆಲಾದ ಜನರಿಗೆ ಮತ್ತು ಈ ಪ್ರಯತ್ನದಲ್ಲಿ ನಮ್ಮನ್ನು ಬೆಂಬಲಿಸಿದ ಅಧ್ಯಕ್ಷ ಟ್ರಂಪ್‌ಗೆ ಅರ್ಪಿಸುತ್ತೇನೆ ಎಂದು ಪೋಸ್ಟ್ ಮಾಡಿದ್ದಾರೆ.

ನಾರ್ವೇಜಿಯನ್ ನೊಬೆಲ್ ಸಂಸ್ಥೆಯ ನಿರ್ದೇಶಕ ಕ್ರಿಶ್ಚಿಯನ್ ಬರ್ಗ್ ಅವರು ಮಾರಿಯಾ ಅವರಿಗೆ ವೈಯಕ್ತಿಕವಾಗಿ ಕರೆ ಮಾಡಿ ಪ್ರಶಸ್ತಿಯ ಬಗ್ಗೆ ತಿಳಿಸಿದರು. ಇದರ ವಿಡಿಯೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿಯೂ ಹಂಚಿಕೊಳ್ಳಲಾಗಿದೆ. ವೀಡಿಯೊದಲ್ಲಿ, ಕ್ರಿಶ್ಚಿಯನ್ ಸ್ವತಃ ಮಾರಿಯಾಗೆ ಕರೆ ಮಾಡಿ, ಈ ವರ್ಷದ ನೊಬೆಲ್ ಶಾಂತಿ ಪ್ರಶಸ್ತಿಗೆ ಆಯ್ಕೆಯಾಗಿರುವುದನ್ನು ಶೀಘ್ರದಲ್ಲೇ ಘೋಷಿಸಲಾಗುವುದು ಎಂದು ತಿಳಿಸುತ್ತಾರೆ. ಇದನ್ನು ಮೊದಲಿಗೆ ಮಾರಿಯಾ ನಂಬಲಿಲ್ಲ.

ನನಗೆ ಮಾತುಗಳೇ ಬರುತ್ತಿಲ್ಲ. ತುಂಬಾ ಧನ್ಯವಾದಗಳು. ಆದರೆ ಇದು ಒಂದು ಚಳುವಳಿ ಮತ್ತು ನಾನು ಈ ವಿಶಾಲ ಚಳವಳಿಯ ಒಂದು ಸಣ್ಣ ಭಾಗ ಮಾತ್ರ ಎಂದು ನೀವು ಅರ್ಥಮಾಡಿಕೊಳ್ಳುತ್ತೀರಿ ಎಂದು ನಾನು ಭಾವಿಸುತ್ತೇನೆ. ಇದು ಇಡೀ ಸಮಾಜದ ಸಾಧನೆ. ನಾನು ಕೇವಲ ಒಬ್ಬ ವ್ಯಕ್ತಿ. ನಾನು ಇದಕ್ಕೆ ಅರ್ಹನಲ್ಲ. ನನಗೆ ಗೌರವವಿದೆ ಎಂದು ಭಾವಿಸುತ್ತೇನೆ ಎಂದು ಹೇಳಿದ್ದಾರೆ. ವೆನೆಜುವೆಲಾದ ಜನರ ಪರವಾಗಿ ನಾನು ಕೃತಜ್ಞನಾಗಿದ್ದೇನೆ. ಇದು ನಿಜವಾಗಿಯೂ ನಮ್ಮ ಜನರಿಗೆ ನೀಡಲಾಗುವ ಅತ್ಯಂತ ದೊಡ್ಡ ಗೌರವ, ಅವರು ನಿಜವಾಗಿಯೂ ಅರ್ಹರು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

'ಶಾಂತಿಗಿಂತ ರಾಜಕೀಯವೇ ಹೆಚ್ಚಾಯಿತು': ನೊಬೆಲ್ ಸಮಿತಿ ವಿರುದ್ಧ ಶ್ವೇತಭವನ ಕೆಂಡಾಮಂಡಲ!

SCROLL FOR NEXT