ಡೊನಾಲ್ಡ್ ಟ್ರಂಪ್- ನರೇಂದ್ರ ಮೋದಿ online desk
ವಿದೇಶ

ಭಾರತ ಶ್ರೇಷ್ಠ ದೇಶ, ಅಗ್ರಸ್ಥಾನದಲ್ಲಿ ನನ್ನ ಉತ್ತಮ ಸ್ನೇಹಿತ: ವಿಶ್ವ ನಾಯಕರ ಎದುರು ಮೋದಿ ಹೆಸರೆತ್ತದೆ ಹೊಗಳಿದ​​ ಟ್ರಂಪ್! Video

ಪಾಕಿಸ್ತಾನ ಹಾಗೂ ಭಾರತ ಒಟ್ಟಿಗೆ ಸಾಗುತ್ತದೆ ಎಂದು ಭಾವಿಸುವೆ ಎಂದು ಪಕ್ಕದಲ್ಲೇ ಇದ್ದ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಶರೀಫ್ ಅವರನ್ನು ನೋಡಿದರು.

ಈಜಿಪ್ಟ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದ ಪ್ರಧಾನಿ ನರೇಂದ್ರ ಮೋದಿಯವರನ್ನು ಹಾಡಿ ಹೊಗಳಿದ್ದಾರೆ. ಭಾರತವು ಶ್ರೇಷ್ಠ ದೇಶವಾಗಿದ್ದು, ನನ್ನ ಉತ್ತಮ ಸ್ನೇಹಿತ ಅಗ್ರಸ್ಥಾನದಲ್ಲಿದ್ದಾರೆ ಎಂದು ಮೋದಿ ಹೆಸರೆತ್ತದೆ ಅವರು ಹೇಳಿದ್ದಾರೆ.

ಇಸ್ರೇಲ್-ಹಮಾಸ್ ಯುದ್ಧವನ್ನು ಕೊನೆಗೊಳಿಸಿದ ‘ಗಾಜಾ ಕದನ ವಿರಾಮ‘ದ ಬಳಿಕ ಇಲ್ಲಿ ನಡೆಯುತ್ತಿದ್ದ ವಿಶ್ವ ನಾಯಕರ ಶೃಂಗಸಭೆಯನ್ನುದ್ದೇಶಿಸಿ ಟ್ರಂಪ್ ಭಾಷಣ ಮಾಡಿದ್ದಾರೆ. ಅಲ್ಲದೆ ಭಾರತ ಹಾಗೂ ಪಾಕಿಸ್ತಾನವು ಒಟ್ಟಿಗೆ ಸಾಗುತ್ತವೆ ಎಂದು ಭಾವಿಸುವೆ’ ಎಂದಿದ್ದಾರೆ.

ಭಾರತವು ಶ್ರೇಷ್ಠ ದೇಶವಾಗಿದ್ದು, ನನ್ನ ಉತ್ತಮ ಸ್ನೇಹಿತ ಅಗ್ರಸ್ಥಾನದಲ್ಲಿದ್ದಾರೆ. ಅವರು ಅದ್ಭುತ ಕೆಲಸ ಮಾಡಿದ್ದಾರೆ. ಪಾಕಿಸ್ತಾನ ಹಾಗೂ ಭಾರತ ಒಟ್ಟಿಗೆ ಸಾಗುತ್ತದೆ ಎಂದು ಭಾವಿಸುವೆ ಎಂದು ಪಕ್ಕದಲ್ಲೇ ಇದ್ದ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಶರೀಫ್ ಅವರನ್ನು ನೋಡಿ ಹೇಳಿದರು.

ಈಗ ಭಾರತ ಮತ್ತು ಪಾಕಿಸ್ತಾನ ಚೆನ್ನಾಗಿ ಹೊಂದಿಕೊಳ್ಳುತ್ತವೇ ಅಲ್ಲವೇ ಎಂದೂ ಶೆಹಬಾಜ್ ಷರೀಫ್ ಕಡೆಗೆ ತಿರುಗಿ ಕೇಳಿದರು. ಇದಕ್ಕೆ ಪಾಕ್‌ ಪ್ರಧಾನಿ ಹೌದು ಎನ್ನುತ್ತಲೇ ಸಕಾರಾತ್ಮಕವಾಗಿ ತಲೆಯಾಡಿಸಿದ್ರು. ಭಾರತವು ಒಂದು ಅದ್ಭುತ ದೇಶ, ನನ್ನ ಇಳ್ಳೆಯ ಸ್ನೇಹಿತನ ನೇತೃತ್ವದಲ್ಲಿ ಅದ್ಭುತ ಕೆಲಸಗಳನ್ನ ಮಾಡುತ್ತಿದೆ. ಭಾರತ ಮತ್ತು ಪಾಕಿಸ್ತಾನ ತುಂಬಾ ಚೆನ್ನಾಗಿ ಹೊಂದಿಕೊಳ್ಳುತ್ತವೆ ಎಂದು ನಾನು ಭಾವಿಸುತ್ತೇನೆ ಎಂದರು.

ಅದಕ್ಕೂ ಮುನ್ನ ಶರೀಫ್ ಅವರನ್ನು ಟ್ರಂಪ್ ಹೊಗಳಿದರು. ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಅಸೀಂ ಮುನೀರ್ ಅವರನ್ನು ‘ನನ್ನ ನೆಚ್ಚಿನ ಫೀಲ್ಡ್ ಮಾರ್ಷಲ್‘ ಎಂದು ಸಂಬೋಧಿಸಿದರು. ಬಳಿಕ ಸಭೆಯನ್ನುದ್ದೇಶಿಸಿ ಮಾತನಾಡಲು ಶರೀಫ್ ಅವರನ್ನು ಆಹ್ವಾನಿಸಿದರು. ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷ ಸೇರಿದಂತೆ 7 ಯುದ್ಧಗಳನ್ನು ನಿಲ್ಲಿಸಿದ್ದು, ನಾನೇ ಎಂದು ಹೇಳಿಕೊಳ್ಳುತ್ತಿದ್ದ ಟ್ರಂಪ್, ಇದೀಗ ಇಸ್ರೇಲ್-ಗಾಜಾ ಸಂಘರ್ಷವನ್ನು ಕೂಡ ನಾನೇ ನಿಲ್ಲಿಸಿದ್ದು ಎಂದು ಹೇಳುವ ಮೂಲಕ ಈಗ ಆ ಸಂಖ್ಯೆಯನ್ನು ಎಂಟಕ್ಕೆ ಹೆಚ್ಚಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!