8 ಜನರ ಹತ್ಯೆಗೈದ ಹಮಾಸ್ 
ವಿದೇಶ

ಡೊನಾಲ್ಡ್ ಟ್ರಂಪ್ ಎಚ್ಚರಿಕೆಗೂ ಬಗ್ಗದ ಹಮಾಸ್; 8 ಗಾಜಾ ನಿವಾಸಿಗಳ ಗುಂಡಿಟ್ಟು ಹತ್ಯೆ; Video

ಇತ್ತೀಚೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಧ್ಯಸ್ಥಿಕೆಯಲ್ಲಿ ಹಮಾಸ್ ಮತ್ತು ಇಸ್ರೇಲ್ ನಡುವೆ ಕದನವಿರಾಮ ಘೋಷಿಸಲಾಗಿತ್ತು.

ಟೆಲ್ ಅವೀವ್: ಇಸ್ರೇಲ್ ಜೊತೆಗಿನ ಕದನಕ್ಕೆ ಶಾಂತಿ ಒಪ್ಪಂದದ ಮೂಲಕ ವಿರಾಮ ಸಿಕ್ಕ ಬೆನ್ನಲ್ಲೇ ಅತ್ತ ಹಮಾಸ್ ಬಂಡುಕೋರರು ಮತ್ತೆ ಬಾಲ ಬಿಚ್ಚಿದ್ದು 8 ಗಾಜಾ ನಿವಾಸಿಗಳನ್ನು ಸಾರ್ವಜನಿಕವಾಗಿ ಗುಂಡಿಟ್ಟು ಕೊಂದು ಹಾಕಿರುವ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದೆ.

ಹೌದು.. ವರ್ಷಗಳ ಕಾಲ ಇಸ್ರೇಲ್ ಸೇನೆ ಮತ್ತು ಹಮಾಸ್ ನಡುವಿನ ಸಂಘರ್ಷ ಜಗತ್ತಿನಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿತ್ತು. ಇತ್ತೀಚೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಧ್ಯಸ್ಥಿಕೆಯಲ್ಲಿ ಹಮಾಸ್ ಮತ್ತು ಇಸ್ರೇಲ್ ನಡುವೆ ಕದನವಿರಾಮ ಘೋಷಿಸಲಾಗಿತ್ತು.

ಆದರೆ, ಆ ಕದನವಿರಾಮಕ್ಕೆ ಹಮಾಸ್ ಯಾವುದೇ ಬೆಲೆ ನೀಡದೆ ಕದನವಿರಾಮದ ಕೆಲವೇ ಗಂಟೆಗಳ ಬಳಿಕ ನಡುರಸ್ತೆಯಲ್ಲಿ 8 ಗಾಜಾ ನಿವಾಸಿಗಳನ್ನು ಹತ್ಯೆ ಮಾಡಿದೆ.

ಗಾಜಾದ 8 ಜನರ ಕೈಗಳನ್ನು ಹಿಂದಕ್ಕೆ ಕಟ್ಟಿಹಾಕಿ, ಅವರ ಕಣ್ಣಿಗೆ ಬಟ್ಟೆ ಕಟ್ಟಿ ನಡುರಸ್ತೆಯಲ್ಲೇ ಗುಂಡಿಟ್ಟು ಕೊಲ್ಲಲಾಗಿದೆ. ಸಂತ್ರಸ್ಥರನ್ನು ಅಪರಾಧಿಗಳು ಎಂದ ಹಮಾಸ್, ಇವರು ಇಸ್ರೇಲ್ ಸಹಯೋಗಿಗಳು ಎಂದು ಆರೋಪಿಸಿದೆ.

ಇನ್ನು ಇಸ್ರೇಲ್ ಜೊತೆಗಿನ ಕದನ ವಿರಾಮದ ನಂತರ ಗಾಜಾ ಪಟ್ಟಿಯ ಮೇಲಿನ ನಿಯಂತ್ರಣವನ್ನು ಉಳಿಸಿಕೊಳ್ಳಲು ಹಮಾಸ್ ಗುಂಪು ಇತರ ಸಶಸ್ತ್ರ ಪ್ಯಾಲೇಸ್ಟಿನಿಯನ್ ಕುಲಗಳೊಂದಿಗೆ ಘರ್ಷಣೆ ನಡೆಸುತ್ತಿದ್ದಂತೆ ಹಮಾಸ್‌ನ ಪ್ರತೀಕಾರದ ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ.

ಹಮಾಸ್​ ಉಗ್ರರು ಬಂದೂಕುಗಳನ್ನು ಕೈಯಲ್ಲಿ ಹಿಡಿದುಕೊಂಡು ನಡುರಸ್ತೆಯಲ್ಲಿ ಸಾರ್ವಜನಿಕರಿಗೆ ಸಾಮೂಹಿಕ ಮರಣದಂಡನೆ ನೀಡುತ್ತಿದ್ದಾರೆ. ಆ ಮೃತದೇಹಗಳ ಸುತ್ತಲಿನ ಜನರು ‘ಅಲ್ಲಾಹು ಅಕ್ಬರ್’ ಎಂಬ ಘೋಷಣೆಗಳನ್ನು ಕೂಗುತ್ತಿದ್ದಾರೆ. ಈ ವಿಡಿಯೋ ಸಂಚಲನ ಮೂಡಿಸಿದೆ.

ಅಮೆರಿಕ ಅಧ್ಯಕ್ಷ ಎಚ್ಚರಿಕೆಗೂ ಬಗ್ಗದ ಬಂಡುಕೋರರು

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗುಂಪನ್ನು ನಿಶ್ಯಸ್ತ್ರಗೊಳಿಸಲು ಪ್ರತಿಜ್ಞೆ ಮಾಡಿದ್ದರೂ ಸಹ, ಹಮಾಸ್ ಪ್ಯಾಲೇಸ್ಟಿನಿಯನ್ ಪ್ರದೇಶದ ಮೇಲೆ ನಿಯಂತ್ರಣವನ್ನು ಕಾಯ್ದುಕೊಳ್ಳಲು ಪ್ರಯತ್ನಿಸುತ್ತಿದೆ. ಪ್ಯಾಲೇಸ್ಟಿನಿಯನ್ ಪ್ರದೇಶದ ಮೇಲೆ ನಿಯಂತ್ರಣವನ್ನು ಕಾಯ್ದುಕೊಳ್ಳಲು ತೀವ್ರವಾಗಿ ಪ್ರಯತ್ನಿಸುತ್ತಿರುವುದರಿಂದ ಗಾಜಾದಲ್ಲಿ ಸಾಮೂಹಿಕವಾಗಿ ಸಾರ್ವಜನಿಕ ಮರಣದಂಡನೆಗಳನ್ನು ನಡೆಸುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 ಕಾಮನ್ವೆಲ್ತ್ ಕ್ರೀಡಾಕೂಟ ಅಹಮದಾಬಾದ್‌ನಲ್ಲಿ ಆಯೋಜಿಸಲು ಶಿಫಾರಸು; ನವೆಂಬರ್ 26 ರಂದು ಅಂತಿಮ ನಿರ್ಧಾರ

ಕೆಮ್ಮಿನ ಸಿರಪ್ ದುರಂತ: ಮಧ್ಯಪ್ರದೇಶದಲ್ಲಿ 3 ವರ್ಷದ ಬಾಲಕಿ ಸಾವು, ಮಕ್ಕಳ ಸಾವಿನ ಸಂಖ್ಯೆ 24ಕ್ಕೆ ಏರಿಕೆ!

ಗಡಿಯಲ್ಲಿ ಮತ್ತೆ ಉದ್ವಿಗ್ನತೆ: ಅಫ್ಘಾನಿಸ್ತಾನದೊಂದಿಗೆ 48 ಗಂಟೆಗಳ ಕದನ ವಿರಾಮಕ್ಕೆ ಪಾಕಿಸ್ತಾನ ಒಪ್ಪಿಗೆ!

ಬೆಂಗಳೂರಿಗರಿಗೆ ಗುಡ್​​ನ್ಯೂಸ್: ನವೆಂಬರ್ 1 ರಿಂದ A ಖಾತಾ ಅಭಿಯಾನ; ಆನ್‌ಲೈನ್ ವ್ಯವಸ್ಥೆಗೆ DCM ಚಾಲನೆ

"ಎಲ್ಲದಕ್ಕೂ ಒಂದು ಮಿತಿ ಇದೆ": ಕಿರಣ್ ಮಜುಂದಾರ್ ಷಾ ವಿರುದ್ಧ DCM ಡಿ.ಕೆ ಶಿವಕುಮಾರ್ ಕಿಡಿ

SCROLL FOR NEXT