ತಾಲಿಬಾನ್ ಭದ್ರತಾ ಸಿಬ್ಬಂದಿ 
ವಿದೇಶ

Afghanistan-Pakistan War: ತಕ್ಷಣದ ಕದನ ವಿರಾಮಕ್ಕೆ ಉಭಯ ರಾಷ್ಟ್ರಗಳು ಒಪ್ಪಿಗೆ: ಕತಾರ್ ವಿದೇಶಾಂಗ ಸಚಿವಾಲಯ

ಉಭಯ ರಾಷ್ಟ್ರಗಳ ನಡುವೆ ಒಂದು ವಾರಕ್ಕೂ ಹೆಚ್ಚು ಕಾಲ ನಡೆದ ಸಂಘರ್ಷದಲ್ಲಿ ಅಫ್ಘಾನಿಸ್ತಾನದ ಕ್ರೆಕಿಟಿಗರು ಸೇರಿದಂತೆ 12ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ನೂರಾರು ಜನರು ಗಾಯಗೊಂಡಿದ್ದಾರೆ.

ಇಸ್ಲಾಮಾಬಾದ್: ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನ ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಕತಾರ್ ವಿದೇಶಾಂಗ ಸಚಿವಾಲಯ ಭಾನುವಾರ ತಿಳಿಸಿದೆ.

ಉಭಯ ರಾಷ್ಟ್ರಗಳ ನಡುವೆ ಒಂದು ವಾರಕ್ಕೂ ಹೆಚ್ಚು ಕಾಲ ನಡೆದ ಸಂಘರ್ಷದಲ್ಲಿ ಅಫ್ಘಾನಿಸ್ತಾನದ ಕ್ರೆಕಿಟಿಗರು ಸೇರಿದಂತೆ 12ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ನೂರಾರು ಜನರು ಗಾಯಗೊಂಡಿದ್ದಾರೆ.

ಶಾಶ್ವತ ಶಾಂತಿ ಮತ್ತು ಸ್ಥಿರತೆಯನ್ನು ಕ್ರೋಢೀಕರಿಸಲು ಕಾರ್ಯವಿಧಾನಗಳನ್ನು ಸ್ಥಾಪಿಸಲು ಹಾಗೂ ಕದನ ವಿರಾಮದ ಸುಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು ಮುಂದಿನ ದಿನಗಳಲ್ಲಿ ಮಾತುಕತೆಗಳನ್ನು ನಡೆಸಲು ಉಭಯ ರಾಷ್ಟ್ರಗಳು ಒಪ್ಪಿಕೊಂಡಿವೆ ಎಂದು ಕತಾರ್ ತಿಳಿಸಿದೆ.

ಉಭಯ ರಾಷ್ಟ್ರಗಳ ನಡುವಿನ ಸಂಘರ್ಷವನ್ನು ಶಮನಗೊಳಿಸಲು ಕತಾರ್ ಹಾಗೂ ಟರ್ಕಿ ಮಧ್ಯಸ್ಥಿಕೆ ವಹಿಸಿದ್ದು, ಇದರಂತೆ ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದ ನಿಯೋಗಗಳು ದೋಹಾಕ್ಕೆ ಭೇಟಿ ನೀಡಿದ್ದವು. ಉಭಯ ರಾಷ್ಟ್ರಗಳ ರಕ್ಷಣಾ ಸಚಿವರು ದೋಹಾಗೆ ಭೇಟಿ ನೀಡಿದ್ದವು. ಮಾತುಕತೆ ಬಳಿಕ ಇದೀಗ ತಕ್ಷಣದ ಕದನ ವಿರಾಮಕ್ಕೆ ಒಪ್ಪಿಗೆ ನೀಡಿದೆ ಎಂದು ಕತಾರ್ ಹೇಳಿದೆ.

ಇದು ಅಫ್ಘಾನಿಸ್ತಾನದಿಂದ ಹೊರಹೊಮ್ಮುತ್ತಿರುವ ಗಡಿಯಾಚೆಗಿನ ಭಯೋತ್ಪಾದನೆಯನ್ನು ಕೊನೆಗೊಳಿಸಲು ಮತ್ತು ಗಡಿಯಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಪುನಃಸ್ಥಾಪಿಸಲು ತಕ್ಷಣದ ಕ್ರಮಗಳನ್ನು ಕೇಂದ್ರೀಕರಿಸುತ್ತದೆ ಎಂದು ಪಾಕಿಸ್ತಾನ ಹೇಳಿದೆ.

ಈ ನಡುವೆ ಮಾಧ್ಯಮಗಳೊಂದಿಗೆ ಮಾತನಾಡಲು ಅಧಿಕಾರವಿಲ್ಲದ ಕಾರಣ ಅನಾಮಧೇಯತೆಯ ಸ್ಥಿತಿಯಲ್ಲಿ ಮಾತನಾಡಿದ ಆಫ್ಘಾನಿಸ್ತಾನದ ಅಧಿಕಾರಿಗಳು, ನಮ್ಮ ಗುರಿ ಉಗ್ರ ಹಫೀಜ್ ಗುಲ್ ಬಹದ್ದೂರ್ ಗುಂಪಿನ ಅಡಗುತಾಣಗಳಾಗಿದ್ದವು. ಪಾಕಿಸ್ತಾನದ ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದ ಮಿರ್ ಅಲಿಯಲ್ಲಿ ಭದ್ರತಾ ಪಡೆಗಳ ಆವರಣದ ಮೇಲೆ ನಡೆದ ಆತ್ಮಹತ್ಯಾ ಬಾಂಬ್ ದಾಳಿಗೆ ನೇರ ಪ್ರತಿಕ್ರಿಯೆಯಾಗಿ ನಾವು ಕಾರ್ಯಾಚರಣೆ ನಡೆಸಿದ್ದೆವು ಹೇಳಿದ್ದಾರೆ.

ಪಾಕಿಸ್ತಾನದ ವಾಯುಪಡೆ ನಡೆಸಿದ ದಾಳಿಯಲ್ಲಿ ಹಲವು ಯೋಧರು ಸಾವನ್ನಪ್ಪಿದ್ದಾರೆ. ಮಹಿಳೆಯರು, ಮಕ್ಕಳು ಹಾಗೂ ಸ್ಥಳೀಯ ಕ್ರಿಕೆಟಿಗರು ಸೇರಿ ಕನಿಷ್ಟ 10 ಮಂದಿ ನಾಗರೀಕರು ಸಾವನ್ನಪ್ಪಿದ್ದಾರೆಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನಮ್ಮತ್ತ ಎಷ್ಟೇ ಬೆರಳು ತೋರಿದರೂ, ಅಲ್ಪಸಂಖ್ಯಾತರ ಮೇಲೆ ನಿಮ್ಮ ದೌರ್ಜನ್ಯ ಮುಚ್ಚಿಡಲು ಸಾಧ್ಯವಿಲ್ಲ- ಪಾಕ್ ಗೆ ಭಾರತದ ತಿರುಗೇಟು!

ಅನಧಿಕೃತ ಮನೆಗಳ ತೆರವು: ಕೋಗಿಲು ಲೇಔಟ್​​ಗೆ ಡಿ.ಕೆ ಶಿವಕುಮಾರ್ ಭೇಟಿ; ಡಿಸಿಎಂ ಹೇಳಿದ್ದೇನು? Video

ಬೆಂಗಳೂರು: ಕಿರುತೆರೆ ನಟಿ ನಂದಿನಿ ಆತ್ಮಹತ್ಯೆಗೆ ಶರಣು

ಮಾದಕ ವಸ್ತು ತಡೆ: ನಿರ್ಲಕ್ಷ್ಯಕ್ಕಾಗಿ ಮೂವರು ಇನ್ಸ್‌ಪೆಕ್ಟರ್‌ಗಳ ಅಮಾನತು

ಲಂಕಾ ಹನಿಮೂನ್ ನಲ್ಲಿ 'ಹಳೇ ಲವರ್' ವಿಚಾರಕ್ಕೆ ಜಗಳ! ನವದಂಪತಿ ಸೂಸೈಡ್ ಗೆ ಇದೇ ಕಾರಣನಾ? ಕಣ್ಣೀರಿನಲ್ಲಿ ಮುಳುಗಿದ ಕುಟುಂಬ!

SCROLL FOR NEXT