ಸೌದಿ ಮರುಭೂಮಿಯಲ್ಲಿ ಗೋಳಾಡಿದ ಭಾರತೀಯ ಪ್ರಜೆ 
ವಿದೇಶ

'ಆತ ನನ್ನ ಕೊಲ್ತಾನೆ', ನನ್ನ ತಾಯಿನಾ ನಾನು ನೋಡ್ಬೇಕು: ಸೌದಿ ಮರುಭೂಮಿಯಲ್ಲಿ ಭಾರತೀಯ ಪ್ರಜೆ ಗೋಳಾಟ! Video

ಅಲಹಾಬಾದ್‌ನಲ್ಲಿ ನನ್ನ ಹಳ್ಳಿದೆ. ಸೌದಿ ಅರೇಬಿಯಾಕ್ಕೆ ಬಂದಿದ್ದೇನೆ. ಕಪಿಲ್ ಬಳಿ ನನ್ನ ಪಾಸ್‌ಪೋರ್ಟ್ ಇದೆ. ನಾನು ಮನೆಗೆ ಹೋಗಬೇಕೆಂದು ಆತನಿಗೆ ಹೇಳಿದೆ. ಆದರೆ ಆತ ನನ್ನನ್ನು ಕೊಲ್ಲುವುದಾಗಿ ಬೆದರಿಕೆ ಹಾಕುತ್ತಿದ್ದಾನೆ

ನವದೆಹಲಿ: ಸೌದಿ ಅರೇಬಿಯಾದಲ್ಲಿ ಸಂಕಷ್ಟದಲ್ಲಿ ಸಿಲುಕಿರುವ ಉತ್ತರ ಪ್ರದೇಶದ ಭಾರತೀಯ ವ್ಯಕ್ತಿಯೊಬ್ಬರು ಕಣ್ಣೀರು ಹಾಕುತ್ತಾ ಹೇಳುವ ವೀಡಿಯೊ ವೈರಲ್ ಆಗಿದೆ. ಭೋಜ್‌ಪುರಿಯಲ್ಲಿ ಮಾತನಾಡಿರುವ ವ್ಯಕ್ತಿ, ಪ್ರಯಾಗ್‌ರಾಜ್ ಜಿಲ್ಲೆಯ ಪ್ರತಾಪುರದ ಹಂಡಿಯಾ ನಿವಾಸಿ ಎಂದು ಹೇಳಿಕೊಂಡಿದ್ದಾರೆ.

ದೆಹಲಿ ಮೂಲದ ವಕೀಲರೊಬ್ಬರು ಸಾಮಾಜಿಕ ಮಾಧ್ಯಮದಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಉದ್ಯೋಗದಾತ ಎನ್ನಲಾದ “ಕಪಿಲ್” ತನ್ನ ಪಾಸ್‌ಪೋರ್ಟ್ ಅನ್ನು ಕಿತ್ತುಕೊಂಡಿದ್ದಾನೆ ಎಂದು ಅವರು ಆರೋಪಿಸಿದ್ದು, ಸಹಾಯಕ್ಕಾಗಿ ನೇರವಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿದ್ದಾರೆ. ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಮಧ್ಯಪ್ರವೇಶಿಸಿದ್ದು, ಆತನನ್ನು ಪತ್ತೆಹಚ್ಚಲು ಪ್ರಯತ್ನಗಳನ್ನು ಪ್ರಾರಂಭಿಸಿದೆ.

ಅಲಹಾಬಾದ್‌ನಲ್ಲಿ ನನ್ನ ಹಳ್ಳಿದೆ. ಸೌದಿ ಅರೇಬಿಯಾಕ್ಕೆ ಬಂದಿದ್ದೇನೆ. ಕಪಿಲ್ ಬಳಿ ನನ್ನ ಪಾಸ್‌ಪೋರ್ಟ್ ಇದೆ. ನಾನು ಮನೆಗೆ ಹೋಗಬೇಕೆಂದು ಆತನಿಗೆ ಹೇಳಿದೆ. ಆದರೆ ಆತ ನನ್ನನ್ನು ಕೊಲ್ಲುವುದಾಗಿ ಬೆದರಿಕೆ ಹಾಕುತ್ತಿದ್ದಾನೆ ಎಂದು ಆ ವ್ಯಕ್ತಿ ಕಣ್ಣೀರು ಹಾಕುತ್ತಾ ಹೇಳುತ್ತಾನೆ. ಆತನ ಹಿಂದೆ ಒಂಟೆಯೊಂದು ಕಾಣಿಸುತ್ತದೆ.

ಪ್ರಧಾನಿ ಮತ್ತು ಭಾರತೀಯ ಅಧಿಕಾರಿಗಳಿಗೆ ತಲುಪುವ ತನಕ ಈ ವಿಡಿಯೋವನ್ನು ವ್ಯಾಪಕವಾಗಿ ಹಂಚಿಕೊಳ್ಳಬೇಕು ಎಂದು ಆತ ಮನವಿ ಮಾಡಿದ್ದು, ದಯವಿಟ್ಟು ನನಗೆ ಸಹಾಯ ಮಾಡಿ, ನಾನು ಸಾಯುತ್ತೇನೆ. ನನ್ನ ತಾಯಿ ಹತ್ರ ನಾನು ಹೋಗಬೇಕು ಎಂದು ಆತ ಗೋಳಾಡುವುದು ವಿಡಿಯೋದಲ್ಲಿದೆ.

ಈ ವೈರಲ್ ವಿಡಿಯೋದಲ್ಲಿರುವ ವ್ಯಕ್ತಿಯ ಪತ್ತೆಗೆ ಮುಂದಾಗಿರುವ ಸೌದಿ ಅರಬೀಯಾದಲ್ಲಿರುವ ಭಾರತೀಯ ರಾಯಭಾರ ಕಚೇರಿ, ಲೋಕೇಶನ್, ಸಂಪರ್ಕಿಸಬಹುದಾದ ನಂಬರ್ ಅಥವಾ ಉದ್ಯೋಗದಾತರ ಬಗ್ಗೆ ವಿವರ ಇಲ್ಲದೆ ಆತನನ್ನು ಹುಡುಕುವುದು ಕಷ್ಟವಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದೆ. ಆತನ ಕುಟುಂಬ ಸದಸ್ಯರನ್ನು ಸಂಪರ್ಕಿಸುವಂತೆ ಉತ್ತರ ಪ್ರದೇಶ ಅಧಿಕಾರಿಗಳಿಗೆ ರಾಯಭಾರಿ ಅಧಿಕಾರಿಗಳು ಒತ್ತಾಯಿಸಿದೆ.

ಆದರೆ, ಸೌದಿ ಅರಬೀಯಾದ ಸಾರ್ವಜನಿಕ ಸುರಕ್ಷತಾ ಇಲಾಖೆ ವ್ಯಕ್ತಿಯ ಹೇಳಿಕೆಯನ್ನು ತಳ್ಳಿಹಾಕಿದೆ. ಸಾಮಾಜಿಕ ಜಾಲತಾಣಗಳಲ್ಲಿ ವೀವ್ಹ್ ಹೆಚ್ಚಿಸಿಕೊಳ್ಳಲು ಈ ವಿಡಿಯೋ ಮಾಡಲಾಗಿದೆ ಎಂದು ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!