ಶಂಕಿತ ಆರೋಪಿ 
ವಿದೇಶ

Racially Attack: ಯುಕೆಯಲ್ಲಿ ಜನಾಂಗೀಯ ದಾಳಿ; 20 ವರ್ಷದ ಭಾರತೀಯ ಮೂಲದ ಯುವತಿ ಮೇಲೆ ಅತ್ಯಾಚಾರ!

ಇದು ಯುವತಿ ಮೇಲಿನ ಭಯಾನಕ ದಾಳಿಯಾಗಿದ್ದು, ಆರೋಪಿಯನ್ನು ಬಂಧಿಸಲು ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದ್ದೇವೆ ಎಂದು ವೆಸ್ಟ್ ಮಿಡ್‌ಲ್ಯಾಂಡ್ಸ್ ಪೊಲೀಸರ ತನಿಖೆಯ ಮೇಲ್ವಿಚಾರಣೆ ನಡೆಸುತ್ತಿರುವ ಡಿಟೆಕ್ಟಿವ್ ಸೂಪರಿಂಟೆಂಡೆಂಟ್ (ಡಿಎಸ್) ರೊನಾನ್ ಟೈರರ್ ಭಾನುವಾರ ಹೇಳಿದ್ದಾರೆ.

ಲಂಡನ್: ಉತ್ತರ ಇಂಗ್ಲೆಂಡ್‌ನಲ್ಲಿ ಜನಾಂಗೀಯ ದಾಳಿ ನಡೆದಿದ್ದು, ಭಾರತೀಯ ಮೂಲದ 20 ವರ್ಷದ ಯುವತಿ ಮೇಲೆ ಅತ್ಯಾಚಾರವೆಸಗಲಾಗಿದೆ. ಶಂಕಿತ ವ್ಯಕ್ತಿಯ ಪತ್ತೆಗೆ ಯುಕೆ ಪೊಲೀಸರು ತುರ್ತು ಮನವಿಯೊಂದನ್ನು ಮಾಡಿಕೊಂಡಿದ್ದಾರೆ.

ರಸ್ತೆಯಲ್ಲಿ ಸಂಕಷ್ಟದಲ್ಲಿ ಬಿದಿದ್ದ ಸಂತ್ರಸ್ತೆಯನ್ನು ಶನಿವಾರ ಸಂಜೆ ವಾಲ್ಸಾಲ್‌ನ ಪಾರ್ಕ್ ಹಾಲ್ ಪ್ರದೇಶಕ್ಕೆ ಕರೆಸಲಾಯಿತು ಎಂದು ವೆಸ್ಟ್ ಮಿಡ್‌ಲ್ಯಾಂಡ್ಸ್ ಪೊಲೀಸರು ತಿಳಿಸಿದ್ದಾರೆ. ಶಂಕಿತನ ಸಿಸಿಟಿವಿ ಕ್ಯಾಮೆರಾ ದೃಶ್ಯಗಳನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ. ಇದು ಜನಾಂಗೀಯವಾಗಿ ಉಲ್ಬಣಗೊಂಡ ದಾಳಿ" ಎಂದು ಪರಿಗಣಿಸಿರುವುದಾಗಿ ಅವರು ತಿಳಿಸಿದ್ದಾರೆ.

"ಇದು ಯುವತಿ ಮೇಲಿನ ಭಯಾನಕ ದಾಳಿಯಾಗಿದ್ದು, ಆರೋಪಿಯನ್ನು ಬಂಧಿಸಲು ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದ್ದೇವೆ ಎಂದು ವೆಸ್ಟ್ ಮಿಡ್‌ಲ್ಯಾಂಡ್ಸ್ ಪೊಲೀಸರ ತನಿಖೆಯ ಮೇಲ್ವಿಚಾರಣೆ ನಡೆಸುತ್ತಿರುವ ಡಿಟೆಕ್ಟಿವ್ ಸೂಪರಿಂಟೆಂಡೆಂಟ್ (ಡಿಎಸ್) ರೊನಾನ್ ಟೈರರ್ ಭಾನುವಾರ ಹೇಳಿದ್ದಾರೆ.

ಸಾಕ್ಷ್ಯಗಳನ್ನು ಸಂಗ್ರಹಿಸಲು ಅಧಿಕಾರಿಗಳ ತಂಡಗಳನ್ನು ರಚಿಸಿದ್ದೇವೆ. ದಾಳಿಕೋರನ ವೈಯಕ್ತಿಕ ವಿವರಗಳನ್ನು ಪತ್ತೆ ಹಚ್ಚುತ್ತಿದ್ದೇವೆ. ಇದರಿಂದ ಆತನನ್ನು ಸಾಧ್ಯವಾದಷ್ಟು ಬೇಗ ಕಸ್ಟಡಿಗೆ ತೆಗೆದುಕೊಳ್ಳಬಹುದು. ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದು, ಅನುಮಾನಾಸ್ಪದ ವ್ಯಕ್ತಿಯ ಚಲನವಲನ ಕಂಡುಬಂದಲ್ಲಿ ಕೂಡಲೇ ಮಾಹಿತಿ ತಿಳಿಸುವಂತೆ ಅವರು ಸಾರ್ವಜನಿಕರಿಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಿನಲ್ಲಿ ಹಗಲು ದರೋಡೆ: 7 ಕೋಟಿ ಕದ್ದ ಖದೀಮರು; 4 ಶಂಕಿತರ ಫೋಟೋ, ಡಿಜಿ-ಐಜಿಪಿಗೆ ಪರಮೇಶ್ವರ್ ತಾಕೀತು!

ದಾಖಲೆಯ 10ನೇ ಬಾರಿಗೆ ಬಿಹಾರದ ಸಿಎಂ ಆಗಿ ನಿತೀಶ್ ನಾಳೆ ಪ್ರಮಾಣವಚನ: BJPಯ ಸಾಮ್ರಾಟ್ ಚೌಧರಿ, ವಿಜಯ್ ಸಿನ್ಹಾ DCM!

ದೆಹಲಿಯ JNU ಗೆ ಶೃಂಗೇರಿ ಶ್ರೀಗಳ ಭೇಟಿ: ಕ್ಯಾಂಪಸ್ ನಲ್ಲಿ ವಿದ್ಯಾರಣ್ಯ ಮೂರ್ತಿಗೆ ಮಾಲಾರ್ಪಣೆ, VIKAS ಕುರಿತು ಉಪನ್ಯಾಸ; Video

ರೈತರು ಶಾಲು ಬೀಸಿದ್ದನ್ನು ನೋಡಿದರೆ ಬಿಹಾರದ ಗಾಳಿ ತಮಿಳುನಾಡಿಗೆ ಬಂದಂತೆ ಭಾಸವಾಯಿತು: ಪ್ರಧಾನಿ ಮೋದಿ

ಶಬರಿಮಲೆಯಲ್ಲಿ ಜನದಟ್ಟಣೆ: ಅಯ್ಯಪ್ಪ ಭಕ್ತರ ಸುರಕ್ಷಿತ, ಸುಗಮ ಸಂಚಾರಕ್ಕಾಗಿ ಕೇರಳಕ್ಕೆ ಕರ್ನಾಟಕ ಸರ್ಕಾರ ಮನವಿ!

SCROLL FOR NEXT