ಪಂಜಾಬಿನ ಯುವತಿ ಅಮನ್‌ಪ್ರೀತ್ ಸೈನಿ ಹಾಗೂ ಆರೋಪಿ ಮನ್‌ಪ್ರೀತ್ ಸಿಂಗ್  
ವಿದೇಶ

ಕೆನಡಾದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: ಆರೋಪಿ ಭಾರತಕ್ಕೆ ಪರಾರಿ ಸಾಧ್ಯತೆ?

ಅಮನ್‌ಪ್ರೀತ್ ಅವರ ಮೃತದೇಹ ಪತ್ತೆಯಾದ ಕೆಲವೇ ದಿನಗಳಲ್ಲಿ ಸಿಂಗ್ ದೇಶದಿಂದ ಪರಾರಿಯಾಗಿರುವ ಮಾಹಿತಿಯಿದೆ ಎಂದು ನಯಾಗರಾ ಪ್ರಾದೇಶಿಕ ಪೊಲೀಸ್ ಸೇವೆ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

ನವದೆಹಲಿ: ಕೆನಡಾದಲ್ಲಿ ಕಳೆದ ವಾರ ಭಾರತೀಯ ಮೂಲದ 27 ವರ್ಷದ ಯುವತಿ ನಂತರ ಭಾರತೀಯ ಮೂಲದ ವ್ಯಕ್ತಿಯ ವಿರುದ್ಧ ಕೆನಡಾದಲ್ಲಿ ಬಂಧನ ವಾರಂಟ್ ಹೊರಡಿಸಲಾಗಿದೆ.

ಪಂಜಾಬಿನ ಯುವತಿ ಅಮನ್‌ಪ್ರೀತ್ ಸೈನಿ ಹತ್ಯೆ ಪ್ರಕರಣದಲ್ಲಿ ಬ್ರಾಂಪ್ಟನ್ ನಿವಾಸಿ, 27 ವರ್ಷದ ಮನ್‌ಪ್ರೀತ್ ಸಿಂಗ್ ಪೊಲೀಸರಿಗೆ ಬೇಕಾಗಿದ್ದಾನೆ. ಅಕ್ಟೋಬರ್ 21 ರಂದು ಲಿಂಕನ್ ಪಾರ್ಕ್‌ನಲ್ಲಿ ಸೈನಿ ಅವರ ಮೃತದೇಹ ಪತ್ತೆಯಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

"ಅಮನ್‌ಪ್ರೀತ್ ಅವರ ಮೃತದೇಹ ಪತ್ತೆಯಾದ ಕೆಲವೇ ದಿನಗಳಲ್ಲಿ ಸಿಂಗ್ ದೇಶದಿಂದ ಪರಾರಿಯಾಗಿರುವ ಮಾಹಿತಿಯಿದೆ ಎಂದು ನಯಾಗರಾ ಪ್ರಾದೇಶಿಕ ಪೊಲೀಸ್ ಸೇವೆ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

ಯುವತಿ ಮೇಲಿನ ದಾಳಿ ವೇಳೆ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗಿಲ್ಲ. ಸಿಂಗ್ ರೇಖಾಚಿತ್ರವನ್ನು ಪೊಲೀಸರು ಬಿಡುಗಡೆ ಮಾಡಿದ್ದು, ಕೂಡಲೇ 911 ಗೆ ಕರೆ ಮಾಡಿ" ಎಂದು ಪೊಲೀಸರು ತಿಳಿಸಿದ್ದಾರೆ. ಸಿಂಗ್ ಅವರ ಕುಟುಂಬ ಪಂಜಾಬ್‌ನಿಂದ ಭಾರತಕ್ಕೆ ಓಡಿಹೋಗಿದೆ ಎಂದು ಮೂಲಗಳು NDTV ಗೆ ತಿಳಿಸಿವೆ.

ಇದೀಗ ಆತನ ಬಂಧನಕ್ಕಾಗಿ ಕೆನಡಾದ ಭದ್ರತಾ ಏಜೆನ್ಸಿಗಳು ಭಾರತೀಯ ಏಜೆನ್ಸಿಗಳನ್ನು ಸಂಪರ್ಕಿಸಿವೆ ಎಂದು ಮೂಲಗಳು ತಿಳಿಸಿವೆ. ಮೂಲತಃ ಪಂಜಾಬ್‌ನ ಸಂಗ್ರೂರ್ ಜಿಲ್ಲೆಯವರಾದ ಸೈನಿ ಅವರು ಕಳೆದ ಕೆಲವು ವರ್ಷಗಳಿಂದ ಟೊರೊಂಟೊದಲ್ಲಿ ವಾಸಿಸುತ್ತಿದ್ದರು ಎಂದು ವರದಿಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗುಂಡೇಟಿಗೆ ವಿದ್ಯಾರ್ಥಿ ನಾಯಕ ಉಸ್ಮಾನ್ ಹಾದಿ ಬಲಿ: ಬಾಂಗ್ಲಾದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ, ಅವಾಮಿ ಲೀಗ್ ಪಕ್ಷದ ಕಚೇರಿಗೆ ಬೆಂಕಿ ಹಚ್ಚಿ ಆಕ್ರೋಶ

MUDA ಹಗರಣ: ಕೇಸ್‌ ಡೈರಿ ಸಲ್ಲಿಸುವಂತೆ ಲೋಕಾಯುಕ್ತ ಅಧಿಕಾರಿಗಳಿಗೆ ಕೋರ್ಟ್ ಸೂಚನೆ..!

ಜನೌಷಧಿ ಕೇಂದ್ರ ಮುಚ್ಚುವ ಆದೇಶ ರದ್ದು: ಸಾರ್ವಜನಿಕ ಹಿತಾಸಕ್ತಿಗಳಲ್ಲಿ ರಾಜಕೀಯ ಸರಿಯಲ್ಲ: ಸರ್ಕಾರಕ್ಕೆ ಹೈಕೋರ್ಟ್‌ ಕಿವಿಮಾತು

Video-'ಆಕೆ ನರಕಕ್ಕೆ ಹೋಗಲಿ, ನಿತೀಶ್ ಕುಮಾರ್ ಕ್ರಮ ಸರಿ ಇದೆ': ಮುಸ್ಲಿಂ ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂನ್ನು ಸಮರ್ಥಿಸಿಕೊಂಡ BJP ಸಚಿವ ಗಿರಿರಾಜ್ ಸಿಂಗ್

ಡಿಕೆ.ಶಿವಕುಮಾರ್ ಆಪ್ತ ಕಾರ್ಯದರ್ಶಿ ಕಾರು ಅಪಘಾತ: ಬೈಕ್‌ ಸವಾರ ಸ್ಥಳದಲ್ಲೇ ಸಾವು, ಇಬ್ಬರಿಗೆ ಗಾಯ

SCROLL FOR NEXT