ಗಾಯಗೊಂಡ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿರುವುದು 
ವಿದೇಶ

ಅಫ್ಘಾನಿಸ್ತಾನದಲ್ಲಿ 6.0 ತೀವ್ರತೆಯ ಭೂಕಂಪ: 800ರ ಗಡಿ ದಾಟಿದ ಸಾವಿನ ಸಂಖ್ಯೆ 2,500 ಜನರಿಗೆ ಗಾಯ; Video

ಕೇವಲ 8 ಕಿಲೋಮೀಟರ್(5 ಮೈಲುಗಳು) ಆಳದಲ್ಲಿ ಕಂಪನವಾಗಿದ್ದು. ಇದು ಹೆಚ್ಚಿನ ಹಾನಿಯನ್ನುಂಟುಮಾಡಿದೆ ಎಂದು ತಜ್ಞರು ಮಾಹಿತಿ ನೀಡಿದ್ದಾರೆ.

ಕಾಬೂಲ್, ಅಫ್ಘಾನಿಸ್ತಾನ: ತಾಲಿಬಾನ್ ಸರ್ಕಾರ ಸೋಮವಾರ ನೀಡಿದ ಅಂಕಿಅಂಶಗಳ ಪ್ರಕಾರ, ಪೂರ್ವ ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಸುಮಾರು 800 ಜನ ಸಾವನ್ನಪ್ಪಿದ್ದಾರೆ ಮತ್ತು 2,500 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ

ಭಾನುವಾರ ತಡರಾತ್ರಿ ಸಂಭವಿಸಿದ 6.0 ತೀವ್ರತೆಯ ಭೂಕಂಪವು ನೆರೆಯ ನಂಗರ್ಹಾರ್ ಪ್ರಾಂತ್ಯದ ಜಲಾಲಾಬಾದ್ ನಗರ ಬಳಿಯ ಕುನಾರ್ ಪ್ರಾಂತ್ಯದ ಪಟ್ಟಣಗಳನ್ನು ನಡುಗಿಸಿದ್ದು, ವ್ಯಾಪಕ ಹಾನಿಯನ್ನುಂಟುಮಾಡಿದೆ.

ನಿನ್ನೆ ರಾತ್ರಿ 11:47ಕ್ಕೆ ಭೂಕಂಪ ಸಂಭವಿಸಿದ್ದು, ಜಲಾಲಾಬಾದ್‌ನ ಪೂರ್ವ-ಈಶಾನ್ಯಕ್ಕೆ 27ಕಿಲೋಮೀಟರ್(17 ಮೈಲುಗಳು) ದೂರದಲ್ಲಿ ಕೇಂದ್ರೀಕೃತವಾಗಿತ್ತು ಎಂದು ಯುಎಸ್ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ.

ಕೇವಲ 8 ಕಿಲೋಮೀಟರ್(5 ಮೈಲುಗಳು) ಆಳದಲ್ಲಿ ಕಂಪನವಾಗಿದ್ದು. ಇದು ಹೆಚ್ಚಿನ ಹಾನಿಯನ್ನುಂಟುಮಾಡಿದೆ ಎಂದು ತಜ್ಞರು ಮಾಹಿತಿ ನೀಡಿದ್ದಾರೆ.

ತಾಲಿಬಾನ್ ಸರ್ಕಾರದ ಮುಖ್ಯ ವಕ್ತಾರ ಜಬಿಹುಲ್ಲಾ ಮುಜಾಹಿದ್ ಅವರು ಸೋಮವಾರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿ, ಸಾವಿನ ಸಂಖ್ಯೆ ಕನಿಷ್ಠ 800ಕ್ಕೆ ಏರಿದ್ದು, 2,500ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಕುನಾರ್‌ನಲ್ಲಿ ಹೆಚ್ಚಿನ ಸಾವುನೋವುಗಳು ಸಂಭವಿಸಿವೆ ಎಂದು ಅವರು ಹೇಳಿದ್ದಾರೆ.

ಭೂಕಂಪದಿಂದ ನುರ್ಗಲ್, ಚಾವ್ಕೇ ಮತ್ತು ವಟಪುರಗಳು ಹೆಚ್ಚು ಹಾನಿಗೊಳಗಾಗಿವೆ. ರಕ್ಷಣಾ ಪ್ರಯತ್ನಗಳು ಮುಂದುವರಿದಿದ್ದು, ಭೂಕಂಪ ಪೀಡಿತ ಅಫ್ಘಾನಿಸ್ತಾನಕ್ಕೆ ಭಾರತ ಬೆಂಬಲ ನೀಡುವುದಾಗಿ ಭರವಸೆ ನೀಡಿದೆ.

ಪ್ರಧಾನಿ ನರೇಂದ್ರ ಮೋದಿ ಈ ಬಗ್ಗೆ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದು, “ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಭೂಕಂಪದಿಂದ ಉಂಟಾದ ಜೀವಹಾನಿಯಿಂದ ತೀವ್ರ ದುಃಖಿತನಾಗಿದ್ದೇನೆ. ಈ ಕಷ್ಟದ ಸಮಯದಲ್ಲಿ ನಮ್ಮ ಪ್ರಾರ್ಥನೆಗಳು ಮೃತರ ಕುಟುಂಬಗಳೊಂದಿಗೆ ಇವೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ನಾವು ಬಯಸುತ್ತೇವೆ. ಭಾರತವು ಪೀಡಿತರಿಗೆ ಸಾಧ್ಯವಿರುವ ಎಲ್ಲಾ ಮಾನವೀಯ ನೆರವು ಮತ್ತು ಪರಿಹಾರವನ್ನು ಒದಗಿಸಲು ಸಿದ್ಧವಾಗಿದೆ” ಎಂದು ಪೋಸ್ಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT