ಪಾಕಿಸ್ತಾನದಲ್ಲಿನ ಪ್ರವಾಹದ  
ವಿದೇಶ

ಸಿಂಧೂ ಜಲ ಒಪ್ಪಂದ: ಪ್ರವಾಹದ ಬಗ್ಗೆ ಭಾರತ ಮಾಹಿತಿ ಹಂಚಿಕೊಂಡರೂ ತಪ್ಪದ ದೂರು! ಪಾಕಿಸ್ತಾನ ಹೇಳೋದೇನು?

ಇಸ್ಲಾಮಾಬಾದ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿದೇಶಾಂಗ ಕಚೇರಿಯ ವಕ್ತಾರ ಶಫ್ಕತ್ ಅಲಿ ಖಾನ್, ಸಿಂಧೂ ಜಲ ಒಪ್ಪಂದಕ್ಕೆ (IWT)ಭಾರತ ಸಂಪೂರ್ಣವಾಗಿ ಬದ್ಧವಾಗಿರಬೇಕು ಎಂದು ಒತ್ತಾಯಿಸಿದರು.

ಇಸ್ಲಾಮಬಾದ್: ಭಾರತವು ರಾಜ ತಾಂತ್ರಿಕ ಮಾರ್ಗಗಳ ಮೂಲಕ ಇತ್ತೀಚಿನ ಪ್ರವಾಹದ ಬಗ್ಗೆ ಮಾಹಿತಿಯನ್ನು ಪಾಕಿಸ್ತಾನ ಜೊತೆಗೆ ಹಂಚಿಕೊಂಡಿದೆ. ಆದರೆ ಇದು ಹಿಂದೆ ಇದ್ದಷ್ಟು ವಿವರವಾಗಿಲ್ಲ ಎಂದು ಆ ರಾಷ್ಟ್ರ ದೂರಿದೆ.

ಇಸ್ಲಾಮಾಬಾದ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿದೇಶಾಂಗ ಕಚೇರಿಯ ವಕ್ತಾರ ಶಫ್ಕತ್ ಅಲಿ ಖಾನ್, ಸಿಂಧೂ ಜಲ ಒಪ್ಪಂದಕ್ಕೆ (IWT)ಭಾರತ ಸಂಪೂರ್ಣವಾಗಿ ಬದ್ಧವಾಗಿರಬೇಕು ಎಂದು ಒತ್ತಾಯಿಸಿದರು.

ಏಪ್ರಿಲ್ 22 ರಂದು ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬೆನ್ನಲ್ಲೇ ಭಾರತ 1960 ರ ಸಿಂಧೂ ಜಲ ಒಪ್ಪಂದವನ್ನು ಅಮಾನತುಗೊಳಿಸಿತ್ತು.

ಸಿಂಧೂ ಜಲ ಆಯುಕ್ತರಿಂದ ಮಾಹಿತಿ ಇಲ್ಲ: ಭಾರತ ರಾಜತಾಂತ್ರಿಕ ಮಾರ್ಗಗಳ ಮೂಲಕ ವಿವಿಧ ನದಿಗಳಲ್ಲಿನ ಪ್ರವಾಹದ ಬಗ್ಗೆ ಕೆಲವು ಮಾಹಿತಿಯನ್ನು ಹಂಚಿಕೊಂಡಿದೆ. ಆದರೆ, ಇದು ಹಿಂದೆ ಇದ್ದಷ್ಟು ವಿವರವಾಗಿಲ್ಲ. ಸಿಂಧೂ ಜಲ ಆಯುಕ್ತರನ್ನು ಮಾಹಿತಿ ಹಂಚಿಕೊಳ್ಳಲು ಬಳಸಿಕೊಂಡಿಲ್ಲ. ಈ ನಿಟ್ಟಿನಲ್ಲಿ ಸಿಂಧೂ ಜಲ ಒಪ್ಪಂದದ ಎಲ್ಲಾ ನಿಬಂಧನೆಗಳನ್ನು ಭಾರತವು ಸಂಪೂರ್ಣವಾಗಿ ಅನುಸರಿಸಬೇಕು ಎಂದು ನಾವು ಪುನರುಚ್ಚರಿಸುತ್ತೇವೆ ಎಂದು ಖಾನ್ ಹೇಳಿದರು.

ಭಾರತದ ಪ್ರತಿಕ್ರಿಯೆ: ಮಾನವೀಯ ನೆಲೆಯಲ್ಲಿ ರಾಜತಾಂತ್ರಿಕ ಮಾರ್ಗಗಳ ಮೂಲಕ ಪಾಕಿಸ್ತಾನದೊಂದಿಗೆ ಪ್ರವಾಹದ ಡೇಟಾವನ್ನು ಹಂಚಿಕೊಳ್ಳುತ್ತಿದೆ ಎಂದು ಭಾರತ ಹೇಳಿದೆ. ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಮೂಲಕ ಭಾರತ ಪ್ರವಾಹದ ಮಾಹಿತಿ ಹಂಚಿಕೊಳ್ಳುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ತಿಳಿಸಿದ್ದಾರೆ.

ಪಾಕಿಸ್ತಾನದಲ್ಲಿ ಸಂಭವಿಸುತ್ತಿರುವ ಮಳೆ ಸ್ಥಿತಿಯನ್ನು ನೋಡಿದ್ದೇವೆ. ಮಾನವೀಯ ಅಂಶಗಳ ಆಧಾರದ ಮೇಲೆ ಪ್ರವಾಹದ ಬಗ್ಗೆ ಮಾಹಿತಿ ನೀಡುತ್ತಿದ್ದೇವೆ ಎಂದು ಜೈಸ್ವಾಲ್ ತಮ್ಮ ವಾರದ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಸಾಮಾನ್ಯವಾಗಿ ಅಂತಹ ಮಾಹಿತಿಯನ್ನು ಸಿಂಧೂ ಜಲ ಆಯುಕ್ತರ ಮೂಲಕ ಹಂಚಿಕೊಳ್ಳಲಾಗುತ್ತದೆ. ವಿಶ್ವಬ್ಯಾಂಕ್‌ನ ಮಧ್ಯಸ್ಥಿಕೆಯ IWT 1960 ರಿಂದ ಭಾರತ ಮತ್ತು ಪಾಕಿಸ್ತಾನದ ನಡುವೆ ಸಿಂಧೂ ನದಿ ಮತ್ತು ಅದರ ಉಪನದಿಗಳ ನೀರು ಹಂಚಿಕೆ ಮತ್ತು ಬಳಕೆಯನ್ನು ನಿರ್ವಹಿಸುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT