ಸ್ಪೋಟದಿಂದ ಉಂಟಾದ ದಟ್ಟ ಹೊಗೆಯ ಚಿತ್ರ 
ವಿದೇಶ

Pakistan: ಸ್ಟೇಡಿಯಂನಲ್ಲಿ ಕ್ರಿಕೆಟ್ ಪಂದ್ಯದ ವೇಳೆ ಸ್ಫೋಟ; ಓರ್ವ ಸಾವು, ಹಲವು ಮಂದಿಗೆ ಗಾಯ! Video

IED ಸ್ಪೋಟ ಉದ್ದೇಶಿತ ದಾಳಿಯ ಗುರಿಯಾಗಿತ್ತು ಎಂದು ಪೊಲೀಸರು ಹೇಳಿದ್ದಾರೆ. ಈ ಸ್ಫೋಟದ ವಿಡಿಯೋ ವೈರಲ್ ಆಗಿದ್ದು, ದಟ್ಟವಾದ ಹೊಗೆಯಿಂದ ಜನರು ಓಡುತ್ತಿರುವುದನ್ನು ತೋರಿಸುತ್ತದೆ.

ಖೈಬರ್ ಪಖ್ತುಂಖ್ವಾ: ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಸ್ಟೇಡಿಯಂವೊಂದರಲ್ಲಿ ಕ್ರಿಕೆಟ್ ಪಂದ್ಯದ ವೇಳೆ ಶಂಕಿತ ಭಯೋತ್ಪಾದನಾ ದಾಳಿಯಲ್ಲಿ ಓರ್ವ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.

IED ಸ್ಪೋಟ ಉದ್ದೇಶಿತ ದಾಳಿಯ ಗುರಿಯಾಗಿತ್ತು ಎಂದು ಪೊಲೀಸರು ಹೇಳಿದ್ದಾರೆ. ಈ ಸ್ಫೋಟದ ವಿಡಿಯೋ ವೈರಲ್ ಆಗಿದ್ದು, ದಟ್ಟವಾದ ಹೊಗೆಯಿಂದ ಜನರು ಓಡುತ್ತಿರುವುದನ್ನು ತೋರಿಸುತ್ತದೆ. ಖಾರ್ ತಹಸಿಲ್‌ನ ಕೌಸರ್ ಕ್ರೀಡಾಂಗಣದಲ್ಲಿ ಸ್ಫೋಟ ಸಂಭವಿಸಿದೆ ಎಂದು ವರದಿಯಾಗಿದೆ.

ಇತ್ತೀಚಿಗೆ ಸಂಭವಿಸಿದ ಸರಣಿ ಘಟನೆಗಳಲ್ಲಿ ಖೈಬರ್ ಪಖ್ತುಂಖ್ವಾ ಪೊಲೀಸ್ ಠಾಣೆಯ ಮೇಲೆ ಕಳೆದ ವಾರ ಕ್ವಾಡ್‌ಕಾಪ್ಟರ್ ಮೂಲಕ ದಾಳಿ ನಡೆಸಲಾಗಿತ್ತು. ಪರಿಣಾಮವಾಗಿ ಪೊಲೀಸ್ ಪೇದೆ ಮತ್ತು ನಾಗರಿಕರೊಬ್ಬರು ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಕೂಡಲೇ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ ಎಂದು ಡಾನ್ ವರದಿ ಮಾಡಿದೆ. ದಾಳಿಯ ಹೊಣೆಯನ್ನು ಯಾವುದೇ ಸಂಘಟನೆ ಹೊತ್ತುಕೊಂಡಿಲ್ಲ.

ಕೆಲವು ವಾರಗಳ ಹಿಂದೆ ಭದ್ರತಾ ಪಡೆಗಳು ಪ್ರಾರಂಭಿಸಿದ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಗೆ ಪ್ರತಿಕ್ರಿಯೆಯಾಗಿ ಭಯೋತ್ಪಾದಕರು ಈ ದಾಳಿ ನಡೆಸಿರಬಹುದು ಎಂದು ಭದ್ರತಾ ಅಧಿಕಾರಿಗಳು ಶಂಕಿಸಿದ್ದಾರೆ.

ಕಳೆದ ತಿಂಗಳು ಆಗಸ್ಟ್ 14 ರಂದು-ಪಾಕಿಸ್ತಾನದ ಸ್ವಾತಂತ್ರ್ಯ ದಿನದಂದು-ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದ ಏಳು ಜಿಲ್ಲೆಗಳಾದ್ಯಂತ ಪೊಲೀಸ್ ಠಾಣೆಗಳು, ಚೆಕ್‌ಪೋಸ್ಟ್‌ಗಳ ಮೇಲೆ ನಡೆಸಿದ್ದ ಬಂದೂಕು ಮತ್ತು ಗ್ರೆನೇಡ್ ದಾಳಿಯಲ್ಲಿ ಆರು ಅಧಿಕಾರಿಗಳು ಸಾವನ್ನಪ್ಪಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Kurnool Bus Fire: ಆಂಧ್ರ ಪ್ರದೇಶದ ಕರ್ನೂಲ್ ಹೆದ್ದಾರಿಯಲ್ಲಿ ಹೈದರಾಬಾದ್-ಬೆಂಗಳೂರು ಖಾಸಗಿ ಬಸ್ ನಲ್ಲಿ ಭೀಕರ ಬೆಂಕಿ ಅವಘಡ: 21 ಮಂದಿ ಸಜೀವ ದಹನ-Video

ಕರ್ನೂಲ್ ಬಸ್ ದುರಂತ: ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ-ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಾಪ, 2 ಲಕ್ಷ ರೂ. ಪರಿಹಾರ ಘೋಷಣೆ

ಭಾರತದ ನಂತರ ಇದೀಗ ಅಪ್ಘಾನಿಸ್ತಾನದಿಂದಲೂ 'ಜಲಬಾಂಬ್': ಪಾಕಿಸ್ತಾನ ವಿಲವಿಲ!

Kurnool Bus Fire: ಬೆಂಗಳೂರಿನಲ್ಲಿ ನೆಲೆಸಿದ್ದ ನೆಲ್ಲೂರು ಮೂಲದ ಒಂದೇ ಕುಟುಂಬದ ನಾಲ್ವರು ಸಜೀವ ದಹನ!

'ಅಹಿಂದ ಕಿರೀಟ'ಕ್ಕಾಗಿ ಕಚ್ಚಾಟ: ಸಿದ್ದರಾಮಯ್ಯ ಸೈದ್ಧಾಂತಿಕ ಉತ್ತರಾಧಿಕಾರಿ ಪಟ್ಟಕ್ಕಾಗಿ ಕಿತ್ತಾಟ! ಒಳಗೊಳಗೆ ಖರ್ಗೆ ಕೊತ-ಕೊತ?

SCROLL FOR NEXT