ಹೊವಾರ್ಡ್ ಲುಟ್ನಿಕ್-ನರೇಂದ್ರ ಮೋದಿ 
ವಿದೇಶ

'ರಷ್ಯಾದ ತೈಲ ಖರೀದಿಯನ್ನು ಭಾರತ ತಕ್ಷಣ ನಿಲ್ಲಿಸಲೇಬೇಕು, ಇಲ್ಲದಿದ್ದರೆ...: ಅಮೆರಿಕ ಸಚಿವ ಲುಟ್ನಿಕ್ ಮತ್ತೆ ಬೆದರಿಕೆ!

ಹೊವಾರ್ಡ್ ಲುಟ್ನಿಕ್ ರಷ್ಯಾದ ತೈಲ ಖರೀದಿಸುವುದಕ್ಕಾಗಿ ಭಾರತವನ್ನು ನಿರಂತರವಾಗಿ ಗುರಿಯಾಗಿಸಿಕೊಂಡಿದ್ದಾರೆ.

ವಾಷಿಂಗ್ಟನ್: ಭಾರತವು ರಷ್ಯಾದ ತೈಲ ಖರೀದಿಸುವುದನ್ನು ನಿಲ್ಲಿಸಬೇಕು. ಆಗ ಮಾತ್ರ ಹೆಚ್ಚಿನ ಸುಂಕ ಮತ್ತು ವ್ಯಾಪಾರ ಒಪ್ಪಂದದ ಕುರಿತು ಮಾತುಕತೆ ನಡೆಸಲು ಸಾಧ್ಯ ಎಂದು ಅಮೆರಿಕ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್ (Howard Lutnick) ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ. ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಅವರು ಪ್ರಸ್ತುತ ಸೂಕ್ಷ್ಮವಾಗಿ ಗಮನಿಸುತ್ತಿರುವುದಾಗಿ ಲುಟ್ನಿಕ್ ಹೇಳಿದರು.

ಭಾರತ ರಷ್ಯಾದ ತೈಲ ಖರೀದಿಸುವುದನ್ನು ನಿಲ್ಲಿಸಿದಾಗ, ನಾವು ಅವರೊಂದಿಗೆ ಎಲ್ಲಾ ಸಮಸ್ಯೆಗಳನ್ನು ಪರಿಹರಿಸುತ್ತೇವೆ ಎಂದು ಹೇಳಿದರು. ಒಂದೆಡೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಧಾನಿ ನರೇಂದ್ರ ಮೋದಿಯವರನ್ನು ತಮ್ಮ ವಿಶೇಷ ಸ್ನೇಹಿತ ಎಂದು ಕರೆಯುತ್ತಿದ್ದರೆ, ಮತ್ತೊಂದೆಡೆ ಅವರ ಸಚಿವರು ಭಾರತಕ್ಕೆ ಬೆದರಿಕೆ ಹಾಕುತ್ತಿದ್ದಾರೆ. ಹೊವಾರ್ಡ್ ಲುಟ್ನಿಕ್ ಭಾರತ ರಷ್ಯಾದ ತೈಲ ಖರೀದಿಸುವುದನ್ನು ನಿಲ್ಲಿಸಬೇಕು. ಇಲ್ಲದಿದ್ದರೆ ಸುಂಕ ಮತ್ತು ವ್ಯಾಪಾರ ಒಪ್ಪಂದದ ಕುರಿತು ಯಾವುದೇ ಮಾತುಕತೆ ಇರುವುದಿಲ್ಲ ಎಂದು ಸ್ಪಷ್ಟವಾಗಿ ಸೂಚಿಸಿದ್ದಾರೆ.

ಹೊವಾರ್ಡ್ ಲುಟ್ನಿಕ್ ರಷ್ಯಾದ ತೈಲ ಖರೀದಿಸುವುದಕ್ಕಾಗಿ ಭಾರತವನ್ನು ನಿರಂತರವಾಗಿ ಗುರಿಯಾಗಿಸಿಕೊಂಡಿದ್ದಾರೆ. ಇತ್ತೀಚೆಗೆ, ಶೇಕಡಾ 50ರಷ್ಟು ಸುಂಕವನ್ನು ಎದುರಿಸುತ್ತಿರುವ ಭಾರತವು ಶೀಘ್ರದಲ್ಲೇ ಅಮೆರಿಕದ ಒತ್ತಡಕ್ಕೆ ಮಣಿಯುತ್ತದೆ ಎಂದು ಅವರು ಹೇಳಿದ್ದರು. ಕಳೆದ ವಾರ ಬ್ಲೂಮ್‌ಬರ್ಗ್‌ಗೆ ನೀಡಿದ ಸಂದರ್ಶನದಲ್ಲಿ ಅವರು, "ಒಂದು ಅಥವಾ ಎರಡು ತಿಂಗಳಲ್ಲಿ ಭಾರತ ಮಾತುಕತೆಯ ಮೇಜಿನ ಬಳಿ ಇರುತ್ತದೆ ಎಂದು ನಾನು ಭಾವಿಸುತ್ತೇನೆ. ಅಲ್ಲದೆ ಭಾರತ ಕ್ಷಮೆಯಾಚಿಸುತ್ತದೆ ಮತ್ತು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ರಾಜಿ ಮಾಡಿಕೊಳ್ಳಲು ಪ್ರಯತ್ನಿಸುತ್ತಾರೆ ಎಂದು ಹೇಳಿದರು.

ಪ್ರಧಾನಿ ಮೋದಿ ನನ್ನ ಆತ್ಮೀಯ ಸ್ನೇಹಿತ ಎಂದು ಟ್ರಂಪ್ ಕರೆದ ನಂತರ ಲುಟ್ನಿಕ್ ಈ ಹೇಳಿಕೆ ನೀಡಿದ್ದರು. ಭಾರತ ಮತ್ತು ಅಮೆರಿಕ ವಿಶೇಷ ಸಂಬಂಧವನ್ನು ಹೊಂದಿವೆ. ಚಿಂತಿಸಲು ಏನೂ ಇಲ್ಲ ಎಂದು ಟ್ರಂಪ್ ಹೇಳಿದ್ದ ಕೆಲವು ಗಂಟೆಗಳ ನಂತರ, ಪ್ರಧಾನಿ ಮೋದಿ ಸಹ ಪ್ರತಿಕ್ರಿಯಿಸಿ ಅಧ್ಯಕ್ಷ ಟ್ರಂಪ್ ಅವರ ಭಾವನೆಗಳನ್ನು ಮೆಚ್ಚುತ್ತೇನೆ ಮತ್ತು ಅವರನ್ನು ಸಂಪೂರ್ಣವಾಗಿ ಬೆಂಬಲಿಸುತ್ತೇನೆ ಎಂದು ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉತ್ತರಾಖಂಡದಲ್ಲಿ 8,000 ಕೋಟಿ ರೂ. ಯೋಜನೆಗಳಿಗೆ ಮೋದಿ ಚಾಲನೆ; 'ವಿಶ್ವದ ಆಧ್ಯಾತ್ಮಿಕ ರಾಜಧಾನಿ' ಮಾಡುವ ಗುರಿ

ರಾಜ್ಯ ಸರ್ಕಾರ ಎರಡು ವರ್ಷದಲ್ಲಿ ರೂ.1 ಲಕ್ಷ ಕೋಟಿಯನ್ನು ನೇರವಾಗಿ ರಾಜ್ಯದ 'ಜನರ ಜೇಬಿ'ಗೆ ಹಾಕಿದೆ: ಸಿಎಂ ಸಿದ್ದರಾಮಯ್ಯ

ಮದಗಜಗಳ ಕಾದಾಟ: ಕ್ಯಾಪ್ಟನ್ ಜೊತೆ ಭೀಕರ ಸಂಘರ್ಷ, ಕಾಡಾನೆ ಭೀಮನ ದಂತ ಮುರಿತ!

ಶಾಕಿಂಗ್: 14 ವರ್ಷದ ಬಾಲಕನ ಬೆದರಿಸಿ, ಅಪಹರಿಸಿ 'ಕಾಮಕೇಳಿ', 38 ವರ್ಷದ ಮಹಿಳೆಗೆ 54 ವರ್ಷ ಜೈಲು, 6 ಲಕ್ಷ ರೂ ಪರಿಹಾರಕ್ಕೆ ಆದೇಶ!

ಬಿಹಾರದ 2ನೇ ಹಂತದ ಚುನಾವಣೆಗೂ ಮುನ್ನ ನೇಪಾಳ-ಭಾರತ ಗಡಿ ಬಂದ್

SCROLL FOR NEXT