ವಾಷಿಂಗ್ಟನ್, ಡಿಸಿಯ ಶ್ವೇತಭವನದಲ್ಲಿ ನಡೆದ "ಜನರೇಷನ್ ನೆಕ್ಸ್ಟ್ ಶೃಂಗಸಭೆ" ಎಂದು ಕರೆಯಲ್ಪಡುವ ವೇದಿಕೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜೊತೆ ಚಾರ್ಲಿ ಕಿರ್ಕ್ (ಸಂಗ್ರಹ ಚಿತ್ರ) 
ವಿದೇಶ

ಟ್ರಂಪ್ ಮಿತ್ರ ಚಾರ್ಲಿ ಕಿರ್ಕ್ ಹತ್ಯೆಗೆ ಬಳಸಿದ್ದ ರೈಫಲ್ ಪತ್ತೆ- FBI; 'ಕಾಲೇಜು ವಯಸ್ಸಿನ ಯುವಕನಿಂದ ಕೃತ್ಯ!

"ಇದು ಟಾರ್ಗೆಟ್ ಮಾಡಿ ನಡೆಸಿರುವ ಕೃತ್ಯವಾಗಿದೆ ಎಂದು ನಾನು ನಿಮಗೆ ಹೇಳಬಲ್ಲೆ" ಎಂದು ಸಾಲ್ಟ್ ಲೇಕ್ ಸಿಟಿಯ ಉನ್ನತ ಎಫ್‌ಬಿಐ ಏಜೆಂಟ್ ರಾಬರ್ಟ್ ಬೋಲ್ಸ್ ಹೇಳಿದ್ದಾರೆ.

ವಾಷಿಂಗ್ ಟನ್: ಚಾರ್ಲಿ ಕಿರ್ಕ್ ಅವರನ್ನು ಹತ್ಯೆಗೈದ ಸ್ನೈಪರ್ ಒಂದು ಗುಂಡು ಹಾರಿಸಿ ನಂತರ ಛಾವಣಿಯಿಂದ ಹಾರಿ ಪಕ್ಕದ ಪ್ರದೇಶಕ್ಕೆ ಓಡಿಹೋಗಿದ್ದಾನೆ ಎಂದು ನಂಬಲಾಗಿದೆ ಮತ್ತು ಇನ್ನೂ ಆತನನ್ನು ಪತ್ತೆ ಮಾಡಲು ಸಾಧ್ಯವಾಗಿಲ್ಲ ಎಂದು ಅಧಿಕಾರಿಗಳು ಗುರುವಾರ ಬಹಿರಂಗಪಡಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳು ಒಂದು ಉನ್ನತ-ಶಕ್ತಿಯ ರೈಫಲ್ ನ್ನು ವಶಪಡಿಸಿಕೊಂಡಿದ್ದಾರೆ.

ಗುಂಡು ಹಾರಿಸಿದ ವ್ಯಕ್ತಿ "ಕಾಲೇಜು ವಯಸ್ಸಿನವ" ಎಂದು ಕಂಡುಬಂದಿದ್ದು, ಕಿರ್ಕ್ ಅವರನ್ನು ಗುಂಡು ಹಾರಿಸಿದ ವಿಶ್ವವಿದ್ಯಾಲಯದ ಆವರಣದಲ್ಲಿ ಇದ್ದ ಎಂದು ನಂಬಲಾಗಿದೆ ಎಂದು ಅಮೆರಿಕದಲ್ಲಿ ನಡೆಯುತ್ತಿರುವ ಇತ್ತೀಚಿನ ರಾಜಕೀಯ ಹಿಂಸಾಚಾರದ ಕೃತ್ಯದ ತನಿಖೆ ನಡೆಸುತ್ತಿರುವಾಗ ಅಧಿಕಾರಿಗಳು ತಿಳಿಸಿದ್ದಾರೆ.

"ಇದು ಟಾರ್ಗೆಟ್ ಮಾಡಿ ನಡೆಸಿರುವ ಕೃತ್ಯವಾಗಿದೆ ಎಂದು ನಾನು ನಿಮಗೆ ಹೇಳಬಲ್ಲೆ" ಎಂದು ಸಾಲ್ಟ್ ಲೇಕ್ ಸಿಟಿಯ ಉನ್ನತ ಎಫ್‌ಬಿಐ ಏಜೆಂಟ್ ರಾಬರ್ಟ್ ಬೋಲ್ಸ್ ಹೇಳಿದ್ದಾರೆ.

ಉತಾಹ್ ವ್ಯಾಲಿ ವಿಶ್ವವಿದ್ಯಾಲಯದ ಆವರಣದಲ್ಲಿ ದೂರದ ಗುಂಡೇಟಿನಿಂದ ಕಿರ್ಕ್ ಹತ್ಯೆ ನಡೆದಿದೆ. "ಇದು ನಮ್ಮ ರಾಜ್ಯಕ್ಕೆ ಕರಾಳ ದಿನ. ಇದು ನಮ್ಮ ರಾಷ್ಟ್ರಕ್ಕೆ ದುರಂತ ದಿನ" ಎಂದು ಉತಾಹ್ ಗವರ್ನರ್ ಸ್ಪೆನ್ಸರ್ ಕಾಕ್ಸ್ ಬುಧವಾರ ಹೇಳಿದರು. "ಇದು ರಾಜಕೀಯ ಹತ್ಯೆ ಎಂದು ನಾನು ಸ್ಪಷ್ಟವಾಗಿ ಹೇಳಲು ಬಯಸುತ್ತೇನೆ." ಎಂದು ಅವರು ತಿಳಿಸಿದ್ದಾರೆ.

ಘಟನೆಯ ಸಂಬಂಧ ಇಬ್ಬರು ಜನರನ್ನು ಬಂಧಿಸಲಾಯಿತು, ಆದರೆ ಅವರಿಬ್ಬರೂ ಗುಂಡಿನ ದಾಳಿಗೆ ಸಂಬಂಧ ಹೊಂದಿಲ್ಲ ಎಂದು ತಿಳಿದ ಬಳಿಕ ಇಬ್ಬರನ್ನೂ ಬಿಡುಗಡೆ ಮಾಡಲಾಗಿದೆ ಎಂದು ಸಾರ್ವಜನಿಕ ಸುರಕ್ಷತಾ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ

ನಮ್ಮ ಆಚರಣೆಯ ನಡುವೆ ಬೇರೆಯದನ್ನು ಯಾಕೆ ತರುತ್ತೀರಾ: ದಸರಾದಲ್ಲಿ ಕಂಬಳ ಆಯೋಜನೆಗೆ ಯದುವೀರ್- ಪ್ರತಾಪ್ ಸಿಂಹ ವಿರೋಧ!

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್