ಕಠ್ಮಂಡುವಿನಲ್ಲಿ ಭಾರತೀಯ ಮಹಿಳೆ ಸಾವು ನೇಪಾಳದಲ್ಲಿ ಮಹಿಳೆ ಸಾವು
ವಿದೇಶ

ಪ್ರತಿಭಟನಾಕಾರರಿಂದ ಬೆಂಕಿ: ಕಠ್ಮಂಡು ಹೋಟೆಲ್‌ನಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಭಾರತೀಯ ಮಹಿಳೆ ಸಾವು

ಮೃತ ಮಹಿಖೆಯನ್ನು ರಾಜೇಶ್ ಗೋಲಾ (57) ಎಂದು ಗುರುತಿಸಲಾಗಿದೆ. ಅವರು ತಮ್ಮ ಪತಿ ರಾಮ್‌ವೀರ್ ಸಿಂಗ್ ಗೋಲಾ ಜೊತೆ ಸೆ.7 ರಂದು ನೇಪಾಳಕ್ಕೆ ತೆರಳಿದ್ದರು.

ಕಠ್ಮಂಡು: ನೇಪಾಳದ ರಾಜಧಾನಿ ಕಠ್ಮಂಡುವಿನಲ್ಲಿ ಪ್ರತಿಭಟನಾಕಾರರು ಹೋಟೆಲ್‌ಗೆ ಬೆಂಕಿ ಹಚ್ಚಿದ್ದರಿಂದ ಉತ್ತರ ಪ್ರದೇಶದ ಗಾಜಿಯಾಬಾದ್‌ ಮೂಲದ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ.

ಮೃತ ಮಹಿಖೆಯನ್ನು ರಾಜೇಶ್ ಗೋಲಾ (57) ಎಂದು ಗುರುತಿಸಲಾಗಿದೆ. ಅವರು ತಮ್ಮ ಪತಿ ರಾಮ್‌ವೀರ್ ಸಿಂಗ್ ಗೋಲಾ ಜೊತೆ ಸೆ.7 ರಂದು ನೇಪಾಳಕ್ಕೆ ತೆರಳಿದ್ದರು.

ಈ ಸಮಯದಲ್ಲಿ ನೇಪಾಳದಲ್ಲಿ ಸರ್ಕಾರದ ವಿರುದ್ಧ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಪ್ರತಿಭಟನಾಕಾರರು ಮನಸ್ಸಿಗೆ ಬಂದಂತೆ ಸಿಕ್ಕಸಿಕ್ಕ ಕಟ್ಟಡಗಳಿಗೆ ಹಾನಿ ಮಾಡಿದ್ದರು. ಅದೇ ರೀತಿ ರಾಮ್‌ವೀರ್‌ ಸಿಂಗ್‌ ಕುಟುಂಬ ತಂಗಿದ್ದ ಹೋಟೆಲ್‌ಗೆ ಸೆ.9 ರಂದು ಬೆಂಕಿ ಹಚ್ಚಿದ್ದರು.

ಹೊತ್ತಿ ಉರಿಯುತ್ತಿದ್ದ ಹೋಟೆಲ್‌ನಿಂದ ತಮ್ಮನ್ನು ರಕ್ಷಿಸಿಕೊಳ್ಳಲು ಗೋಲಾ ದಂಪತಿ ಪರದಾಡಿದ್ದರು. ಈ ವೇಳೆ ರಾಜೇಶ್‌ ಗೋಲಾ ಪತಿಯಿಂದ ಬೇರ್ಪಟ್ಟು, ಜೀವ ಉಳಿಸಿಕೊಳ್ಳಲು ಕಟ್ಟಡದಿಂದ ಜಿಗಿದಿದ್ದರು. ದುರಾದೃಷ್ಟವಶಾತ್‌ ಅವರು ಸಾವನ್ನಪ್ಪಿದ್ದಾರೆ.

ನೇಪಾಳದಲ್ಲಿ ನಡೆಯುತ್ತಿರುವ ಯುವಜನರ ದಂಗೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 31ಕ್ಕೆ ಏರಿದೆ. ಶವಗಳನ್ನು ಇರಿಸಲಾಗಿರುವ ತ್ರಿಭುವನ್ ವಿಶ್ವವಿದ್ಯಾಲಯ ಬೋಧನಾ ಆಸ್ಪತ್ರೆಯ ವಿಧಿವಿಜ್ಞಾನ ವಿಭಾಗದ ಪ್ರಕಾರ ಮೃತಪಟ್ಟ 5 ಪುರುಷರು ಮತ್ತು ಒಬ್ಬ ಮಹಿಳೆಯ ಗುರುತುಗಳು ಇನ್ನೂ ಪತ್ತೆಯಾಗಿಲ್ಲ.

ಇದಲ್ಲದೇ ನೇಪಾಳದಲ್ಲಿ ನಡೆಯುತ್ತಿರುವ ಪ್ರತಿಭಟನೆಯಿಂದಾಗಿ ಕಠ್ಮಂಡುವಿನ ತ್ರಿಭುವನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಮಂಗಳವಾರ ಮುಚ್ಚಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪ್ರಧಾನಿ ಮೋದಿ ಈಗ ಮಣಿಪುರ ಭೇಟಿ 'ದೊಡ್ಡ ವಿಷಯ'ವಲ್ಲ; 'ವೋಟ್ ಚೋರಿ' ದೇಶದ ಪ್ರಮುಖ ವಿಷಯ: ರಾಹುಲ್ ಗಾಂಧಿ

Bengaluru Pothole: ರಸ್ತೆ ಗುಂಡಿಗೆ ಸಿಲುಕಿ ಮಗುಚಿದ 20 ವಿದ್ಯಾರ್ಥಿಗಳಿದ್ದ ಶಾಲಾಬಸ್..! ಮಕ್ಕಳು ಪಾರು, Video Viral

ಮದ್ದೂರು ಕೋಮು ಗಲಭೆ: ಮಂಡ್ಯ ಹೆಚ್ಚುವರಿ ಎಸ್‌ಪಿ ವರ್ಗಾವಣೆ

United Nations: ವಿಶ್ವ ವೇದಿಕೆಯಲ್ಲಿ ಮತ್ತೆ ಪಾಕಿಸ್ತಾನಕ್ಕೆ ಮುಜುಗರ; ಕೇವಲ 4 ಸೆಕೆಂಡ್, ಒಂದೇ ವಾಕ್ಯದಲ್ಲಿಯೇ ನಿಜ ಬಣ್ಣ ಬಯಲು! Video

ಜಾತಿಗಣತಿ ಮರು ಸಮೀಕ್ಷೆಗೆ ಸರ್ಕಾರ ನಿರ್ಧಾರ, ಸೆ.22ರಿಂದ ಸರ್ವೇ ಆರಂಭ: ಸಿಎಂ ಸಿದ್ದರಾಮಯ್ಯ

SCROLL FOR NEXT